ಸಾಮರ್ಥ್ಯ ಸೌಧ ಸೇವೆಯಿಂದ ದೂರ

ಭೂತ ಬಂಗಲೆಯಂತಾದ ಕಟ್ಟಡ • ಅಗತ್ಯ ಕಾಯಕಲ್ಪಕ್ಕೆ ಇಚ್ಛಾಶಕ್ತಿ ಕೊರತೆ

Team Udayavani, Jul 8, 2019, 1:02 PM IST

mandya-tdy-1..

ಮದ್ದೂರು ಪಟ್ಟಣದಲ್ಲಿ ನಿರ್ಮಿಸಿರುವ ಸಾಮರ್ಥ್ಯ ಸೌಧದ ಹೊರನೋಟ.

ಮದ್ದೂರು: ತಾಲೂಕು ಕೇಂದ್ರದಲ್ಲಿ ಬಹು ನಿರೀಕ್ಷೆಯೊಂದಿಗೆ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಾಣ ಗೊಂಡ ಸಾಮರ್ಥ್ಯ ಸೌಧವು ಸದ್ಬಳಕೆಯಾಗದೆ ಸೇವೆಯಿಂದ ದೂರವೇ ಉಳಿದಿದೆ.

ಜಿಪಂ ಅನುದಾನದ 20 ಲಕ್ಷ ರೂ. ಗಳಿಗೂ ಅಧಿಕ ವೆಚ್ಚ ಬರಿಸಿ ಒಂದು ದಶಕಗಳ ಹಿಂದೆ ಹತ್ತು, ಹಲವು ನಿರೀಕ್ಷೆಗಳ ನಡುವೆ ತಲೆಎತ್ತಿದ ಸಾಮರ್ಥ್ಯಸೌಧ ಕಟ್ಟಡದಲ್ಲೀಗ ಯಾವುದೇ ಚಟುವಟಿಕೆಗಳು ಕಂಡು ಬರದೆ ಭೂತ ಬಂಗಲೆಯಂತಹ ಸ್ಥಿತಿ ನಿರ್ಮಾಣಗೊಂಡಿದೆ.

ಮದ್ದೂರು ಸೇರಿದಂತೆ ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದ 27 ತಾಪಂ ಸದಸ್ಯರನ್ನು ಹೊಂದಿರುವ ಇಲ್ಲಿ ಸಾಮರ್ಥ್ಯ ಸೌಧದ ನಿಷ್ಕ್ರಿಯೆ ಕುರಿತಾಗಿ ಯಾವೊಬ್ಬ ಸದಸ್ಯರೂ ಇದುವರೆವಿಗೂ ಧನಿ ಎತ್ತದಿರುವುದು ಇಚ್ಚಾಶಕ್ತಿ ಕೊರತೆಯ ಉದಾಹರಣೆಯಾಗಿದೆ.

ಮೈಸೂರು, ಬೆಂಗಳೂರು ಹೆದ್ದಾರಿ ಬದಿಯ ತಾಲೂಕು ಕಚೇರಿ ಕೂಗಳತೆ ದೂರದಲ್ಲಿರುವ ಸೌಧ ಉದ್ಘಾಟನೆಗೊಂಡ ದಿನದಿಂದಲೂ ಈವರೆವಿಗೂ ಕಾರ್ಯ ಚಟುವಟಿಕೆಗಳ ಹೊರತಾಗಿದ್ದು ತಾಪಂ ಸಭೆ ವೇಳೆ ಆಗೊಮ್ಮೆ ಇಗೊಮ್ಮೆ ನಡೆಯುವ ಊಟೋಪಚಾರಕಷ್ಟೇ ಸೀಮಿತವಾಗಿರುವುದು ದುರಂತ

ಎಲ್ಲಾ ಸರಕಾರಿ ಕಟ್ಟಡಗಳಲ್ಲಿರುವಂತೆ ಈ ಕಟ್ಟಡಲ್ಲಿಯೂ ಚಿಕ್ಕದಾದ ಸಭಾಂಗಣ, ಪ್ರತ್ಯೇಕ ಮೂರು ಕೊಠಡಿಗಳು, ವಿಶಾಲವಾದ ಪಾರ್ಕಿಂಗ್‌ ವ್ಯವಸ್ಥೆ, ಶೌಚಾಲಯ, ನೀರು ಮತ್ತು ಕಟ್ಟಡದ ಸುತ್ತಲೂ ಅಗತ್ಯ ಕಾಂಪೌಂಡ್‌ ನಿರ್ಮಿಸಿದ್ದು ಇದುವರೆವಿಗೂ ಯಾವುದೇ ಪ್ರಕ್ರಿಯೆಗಳು ತಾಪಂ ಆಡಳಿತದ ವತಿಯಿಂದ ನಡೆದೇ ಇಲ್ಲ. ಕಾರ್ಯಚಟುವಟಿಕೆಗಳಿಂದ ಹೊರತಾಗಿರುವ ಸೌಧದ ನಿರ್ವಹಣೆ ಕೊರತೆ ಎದ್ದು ಕಾಣುತ್ತಿದ್ದು ಕಟ್ಟಡದ ಸುತ್ತೇಲ್ಲ ಗಿಡಗಂಟಿಗಳು ಬೆಳೆದಿದ್ದು, ತ್ಯಾಜ್ಯಗಳ ಶೇಖರಣೆಯಾಗುತ್ತಿದೆ. ಅಲ್ಲದೆ ಇಲ್ಲಿ ಅನೈತಿಕ ಚಟುವಟಿಕೆಗಳ ತಾಣವಾಗಿ ನಿರ್ಮಾಣವಾಗುತ್ತಿದೆ.

ಕೆಲವು ಸರಕಾರಿ ಕಚೇರಿಗಳು ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಖಾಸಗಿ ಕಟ್ಟಡಗಳಲ್ಲಿ ಮಾಸಿಕ ಬಾಡಿಗೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅಂತಹ ಇಲಾಖೆಗಳಲ್ಲಿಯೂ ಸಾಮಾರ್ಥ್ಯ ಸೌಧಕ್ಕೆ ಸ್ಥಳಾಂತರಿಸಬಹುದಾದ ಅವಕಾಶವಿದ್ದಾಗ್ಯೂ ಕಂಡು ಕಾಣದಂತಿರುವ ಕ್ರಮ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಜಿಪಂ ಅಧಿಕಾರಿಗಳು, ಸ್ಥಳೀಯ ಜಿಪಂ ಸದಸ್ಯರು ಮದ್ದೂರು ತಾಪಂ ಸದಸ್ಯರು ಹಾಗೂ ಸ್ಥಳೀಯ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯ ನಿರಂತರವಾಗಿ ಮುಂದುವರೆದಿದ್ದು ಸಾರ್ವಜನಿಕ ತೆರಿಗೆ ಹಣದಲ್ಲಿ ನಿರ್ಮಿಸಲ್ಪಟ್ಟ ಕಟ್ಟಡ ಮುಂದಿನ ದಿನಗಳಲ್ಲಾದರೂ ಸದುಪಯೋಗ ಆಗಬೇಕೆಂಬುದೇ ಸ್ಥಳೀಯರ ಅಭಿಪ್ರಾಯವಾಗಿದೆ.

 

● ಎಸ್‌.ಪುಟ್ಟಸ್ವಾಮಿ, ಮದ್ದೂರು

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.