ಒಡೆದ ಮನೆಯಾದ ರೈತ ಹಿತರಕ್ಷಣಾ ಸಮಿತಿ!


Team Udayavani, Jun 19, 2020, 4:46 AM IST

odeda-mane

ಮಂಡ್ಯ: ಸಕ್ಕರೆ ಕಂಪನಿ ಆರಂಭದ ವಿಚಾರದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿ ರುವ ಹೋರಾಟ ಕವಲುದಾರಿ ಹಿಡಿದಿದೆ. ನಿರ್ವಹಣೆ ಮತ್ತು ಕಾರ್ಯಾಚರಣೆ (ಒ ಅಂಡ್‌ ಎಂ)ಯನ್ನು ಖಾಸಗಿಯವರಿಗೆ ನೀಡುವ ಕೂಗಿಗೆ  ಹೆಚ್ಚಿನ ಬಲ ಬಂದಿದೆ. ಸಂಸದೆ ಸುಮಲತಾ ನಿಲುವಿಗೆ ರೈತ ಹಿತರಕ್ಷಣಾ ಸಮಿತಿ ಹಿರಿಯ ನಾಯಕರಾದ ಎಚ್‌.ಡಿ.ಚೌಡ ಯ್ಯ ಹಾಗೂ ಆತ್ಮಾನಂದ ಅವರು ಸಾಥ್‌ ನೀಡಿದ್ದು, ಇದರೊಂದಿಗೆ ಸಮಿತಿ ಇದೀಗ ಒಡೆದ ಮನೆಯಂತಾಗಿದೆ.

ಸಮಿತಿಯ ಅಧ್ಯಕ್ಷ ಜಿ.ಮಾದೇಗೌಡರನ್ನು ಮುಂದಿಟ್ಟುಕೊಂಡು ವಿವಿಧ ಸಂಘಟನೆಗಳ ಮುಖಂಡರು ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ನಡೆಯಬೇಕು ಎಂಬ ಆಗ್ರಹ ದೊಂದಿಗೆ ನಡೆಸುತ್ತಿದ್ದ ಹೋರಾಟ ಈಗ ಬಲ ಕಳೆದುಕೊಂಡಂತಾಗಿದೆ. ಅನಾರೋಗ್ಯದ ಕಾರ  ಣದಿಂದ ತಮ್ಮ ನಿಲುವನ್ನು ಸ್ಪಷ್ಟಪಡಿಸದಿದ್ದ ಮಾಜಿ ಸಚಿವ ಎಂ.ಎಸ್‌.ಆತ್ಮಾನಂದ ಹಾಗೂ ಮಾಜಿ ಶಾಸಕರಾದ ಎಚ್‌.ಡಿ.ಚೌಡಯ್ಯ, ಜಿ.ಬಿ.ಶಿವಕುಮಾರ್‌ ಅವರು ಹಲವು ಸಂಘಟ ನೆಗಳ ಹೋರಾಟಕ್ಕೆ ಬೆಂಬಲವಾಗಿ ನಿಂತಿರುವು ದರಿಂದ ಹಿತರಕ್ಷಣಾ ಸಮಿತಿ ಹೋರಾಟ ಮಹತ್ವ ಕಳೆದುಕೊಂಡಿದೆ.

ಡೀಸಿ ಕಚೇರಿ ಬಳಿ ಧರಣಿ: ಮೈಷುಗರ್‌ ಕಬ್ಬು ಒಪ್ಪಿಗೆದಾರರ ಸಂಘ, ಜಯಕರ್ನಾಟಕ ಸಂಘಟ ನೆ, ಜಿಲ್ಲಾ ಹಾಲು  ಉತ್ಪಾದಕರ ಹೋರಾಟ ಸಮಿತಿ, ರೈತ ಸಂಘ, ಜನಸ್ಪಂದನ ಟ್ರಸ್ಟ್‌, ಕದಂಬ ಸೇನೆ ಹಾಗೂ ಕಬ್ಬು ಬೆಳೆಗಾರರ ಸಂಘ ದವರು ಗುರುವಾರ ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಮಾಯಿಸಿ ಒ ಅಂಡ್‌ ಎಂ ಮುಖಾಂತರ  ಕಾರ್ಖಾನೆ ಆರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಈ ಪ್ರತಿಭಟ ನೆಗೆ ಮಾಜಿ ಸಚಿವ ಎಂ.ಎಸ್‌.ಆತ್ಮಾನಂದ, ಮಾಜಿ ಶಾಸಕರಾದ ಎಚ್‌.ಡಿ.ಚೌಡಯ್ಯ, ಜಿ.ಬಿ.ಶಿವಕುಮಾರ್‌ ಖುದ್ದು ಹಾಜರಾಗಿ ಬೆಂಬಲ  ವ್ಯಕ್ತಪಡಿಸಿದ್ದು ವಿಶೇಷವಾಗಿತ್ತು. ಸರ್‌ಎಂ.ವಿಶ್ವೇಶ್ವರಯ್ಯ ಪ್ರತಿಮೆಯಿಂದ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ಡೀಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ದರು. ಅಲ್ಲಿಗೆ ಸಂಸದೆ ಸುಮಲತಾ ಅಂಬರೀಶ್‌ ಕೂಡ ಆಗಮಿಸಿ  ಪ್ರತಿಭಟನಾಕಾರರಿಂದ ಅಹವಾಲು ಸ್ವೀಕರಿಸಿದರು.

ಕಾರ್ಖಾನೆ ಆರಂಭಿಸಲು ಕ್ರಮ ಕೈಗೊಳ್ಳಿ: ಕಾರ್ಖಾನೆ ವ್ಯಾಪ್ತಿಯ ಕಬ್ಬನ್ನು ಅವಧಿಗೆ ಪೂರಕವಾಗಿ ನುರಿಸಲು ಕಾರ್ಖಾನೆಯನ್ನು ಒ ಅಂಡ್‌ ಎಂ ಸೂತ್ರದಡಿ ಆರಂಭಿಸಲು ಕ್ರಮ ವಹಿಸಬೇಕು. ಕಬ್ಬು ಕಟಾವು ಮಾಡಲು ಗ್ಯಾಂಗ್‌ಮನ್‌ಗಳನ್ನು ತಂದು ಕಬ್ಬು ಕಟಾವಿಗೆ ಕ್ರಮ ವಹಿಸುವುದು. ಮೈಷುಗರ್‌ ಅಭಿವೃದ್ಧಿಗೆ 2003ರಿಂದ 2019ರವರೆಗೆ ನೀಡಿರುವ ಹಣದ ಬಗ್ಗೆ ಶ್ವೇತ ಪತ್ರ ಹೊರಡಿಸುವುದು. ಶೋಧನಾ ಸಮಿತಿ ರಚಿಸಬೇಕು.  ಪ್ರತಿಭಟನಾಕಾರರು  ಮೈಷುಗರ್‌ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ಎಸ್‌.ಕೃಷ್ಣ, ಯೋಗಣ್ಣ, ಎಸ್‌.ಸಿ.ಮಧುಚಂದನ್‌, ಬೇಕ್ರಿ ರಮೇಶ್‌, ಕಾಂಗ್ರೆಸ್‌ ಮಹಿಳಾಧ್ಯಕ್ಷೆ ಅಂಜನಾ ಶ್ರೀಕಾಂತ್‌, ನಾಗರತ್ನ ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.