![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jun 25, 2023, 9:39 PM IST
ಶ್ರೀರಂಗಪಟ್ಟಣ : ಕೌಟುಂಬಿಕ ಕಲಹದಿಂದ ಹೆಂಡತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಇಬ್ಬರು ಮಕ್ಕಳನ್ನು ಕೊಲೆಗೈದು ತಲೆಮರೆಸಿಕೊಂಡಿದ್ದ ಕ್ರೂರಿಯನ್ನು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದ ತೋಟದ ಮನೆಯಲ್ಲಿ ಈ ಘಟನೆ ನಡೆದಿದ್ದು ಕಲಬುರಗಿ ಮೂಲದ ಆರೋಪಿ ಶ್ರೀಕಾಂತ್ ತನ್ನ ಹೆಂಡತಿ ಮತ್ತು ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ.ಘಟನೆಯಲ್ಲಿ ಮಕ್ಕಳಿಬ್ಬರು ಮೃತಪಟ್ಟಿದ್ದು, ಹೆಂಡತಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಘಟನಾ ಸಂಬಂಧ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.