ಹಾಲಿನಖರೀದಿ ದರ ಹೆಚ್ಚಳಕ್ಕೆ ಶೀಘ್ರಕ್ರಮ ವಹಿಸಿ: ಡೀಸಿ


Team Udayavani, Jan 11, 2018, 4:08 PM IST

mandya-1.jpg

ಮಂಡ್ಯ: ಹಾಲಿನ ಖರೀದಿ ದರದ ಕಡಿತದಿಂದ ತೊಂದರೆಗೊಳಗಾಗಿರುವ ಜಿಲ್ಲೆಯ ರೈತರ ನೆರವಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಶೀಘ್ರ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರೈತರ ಸಭೆಯಲ್ಲಿ ಮಾತನಾಡಿದ ಅವರು, ಹಾಲಿನ ಉತ್ಪನ್ನಗಳ ಬೇಡಿಕೆ ಕುಸಿದಿರುವ ಕಾರಣವನ್ನು ಮುಂದಿಟ್ಟುಕೊಂಡು ಮನ್‌ಮುಲ್‌ ಜನವರಿ 1ರಿಂದ ಪ್ರತಿ ಲೀಟರ್‌ ಹಾಲಿನ ಖರೀದಿ ದರವನ್ನು 23.80 ರೂ.ನಿಂದ 21.80 ರೂ.ಗಳಿಗೆ ಇಳಿಸಿದೆ. ದರ ಕಡಿತದಿಂದ ತೊಂದರೆಗೊಳಗಾದ ರೈತರು ಹಾಲಿನ ದರ ಹೆಚ್ಚಳ ಮಾಡಲು ಕೋರುತ್ತಿದ್ದು, ಮನ್‌ಮುಲ್‌ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ತುರ್ತು ಕ್ರಮ ವಹಿಸುವಂತೆ ತಿಳಿಸಿದರು.

ಮನ್‌ಮುಲ್‌ ವ್ಯವಸ್ಥಾಪಕ ನಿರ್ದೇಶಕ ಡಾ.ಸುರೇಶ್‌ಬಾಬು ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾಲಿನ ದರದಲ್ಲಿ ಕುಸಿತವಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಜಿಲ್ಲೆಯನ್ನು ಒಳಗೊಂಡಂತೆ ರಾಜ್ಯದೆಲ್ಲಡೆ ಉತ್ತಮ ಮಳೆಯಾದ್ದರಿಂದ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಹಾಲು ಸೇರಿದಂತೆ ಹಾಲಿನ ಉತ್ಪನ್ನಗಳಿಗೆ ಬೇಡಿಕೆ ಕಡಿಮೆಯಾಗಿದೆ. ಇದರಿಂದ ಹಾಲು ಉತ್ಪನ್ನಗಳು ಮಾರಾಟವಾಗದೆ ಡೇರಿಯಲ್ಲೇ ಉಳಿಯುವಂತಾಗಿದೆ. ಆರ್ಥಿಕನಷ್ಟ ಸರಿದೂಗಿಸಲು ಹಾಲಿನ ದರ ಕಡಿತ ಅನಿವಾರ್ಯವಾಗಿದೆ ಎಂದರು.

ಲಾಭದ ಹಣ ರೈತರಿಗೆ ಮೀಸಲು: ಬಿಹಾರ ಹಾಗೂ ಇತರೆ ರಾಜ್ಯಗಳ ಹಾಲು ಹಾಗೂ ಹಾಲಿನ ಉತ್ಪನ್ನಗಳಿಗೆ ಬೇಡಿಕೆ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಡೇರಿಗೆ ಬರುವ ಆದಾಯದಲ್ಲಿ ಲಾಭದ ಹಣವನ್ನು ಹಾಲಿನ ದರ ಕಡಿತದಿಂದ ತೊಂದರೆಗೊಳಗಾದ ರೈತರಿಗೆ ನೀಡುವ ಮೂಲಕ ಅವರ ಆರ್ಥಿಕ ನಷ್ಟವನ್ನು ಸರಿಪಡಿಸುವುದರ ಜೊತೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ನೋಟಿಸ್‌ ನೀಡುವುದನ್ನು ನಿಲ್ಲಿಸಿ: ಶಾಸಕ ಪುಟ್ಟಣ್ಣಯ್ಯ ಮಾತನಾಡಿ, ಬೆಳೆ ಪರಿಹಾರ ಹಾಗೂ ಬೆಳೆಗಳಿಗೆ ನೀರು ಹರಿಸುವ ಮೂಲಕ ರೈತರ ನೆರವಿಗೆ ಜಿಲ್ಲಾಡಳಿತ ಮುಂದಾಗಬೇಕು. ಈ ವರ್ಷ ಮಳೆ ಉತ್ತಮವಾಗಿ ಬಂದಿದ್ದು, ಕೃಷಿ ಇಲಾಖೆಯವರು ವಿಳಂಬ ಮಾಡದೆ, ರೈತರಿಗೆ ಬಿತ್ತನೆ ಬೀಜವನ್ನು ಸರಿಯಾದ ಸಮಯಕ್ಕೆ ಒದಗಿಸಬೇಕು. ಈ ಬಗ್ಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಮಾಹಿತಿ ನೀಡಬೇಕು. ಬ್ಯಾಂಕ್‌ ಅಧಿಕಾರಿಗಳಿಂದ ರೈತರಿಗೆ ಸಾಲ ಮರುಪಾವತಿಗೆ ನೋಟಿಸ್‌ ನೀಡುವುದನ್ನು ಅಧಿಕಾರಿಗಳು ನಿಲ್ಲಿಸಬೇಕು ಎಂದರು.

ಗಣಿಗಾರಿಕೆ ನಿಲ್ಲಿಸಿ: ರೈತ ಮುಖಂಡರು ಮಾತನಾಡಿ, ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು ಗ್ರಾಮದಲ್ಲಿ ಗಣಿಗಾರಿಕೆಗೆ ಸ್ಫೋಟಕಗಳನ್ನು ಬಳಸುತ್ತಿರುವುದರಿಂದ ಬೆಳೆ ಬೆಳೆಯಲಾಗುತ್ತಿಲ್ಲ. ರೈತರು ಕೃಷಿ ಚಟುವಟಿಕೆಗಳಲ್ಲಿ ಸೂಕ್ತ ವಾತಾವರಣ ನಿರ್ಮಿಸಲು ಕ್ರಮ ವಹಿಸಲು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳ ಪರಿಶೀಲನೆ ಮಾಡಿ ವರದಿ ನೀಡಲು ಸೂಚಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಎಸ್ಪಿ ಜಿ.ರಾಧಿಕಾ, ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್‌, ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ,
ತೋಟಗಾರಿಕೆ ಉಪ ನಿರ್ದೇಶಕ ರಾಜು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತ ಮುಖಂಡರು ಭಾಗವಹಿಸಿದ್ದರು.

ಬ್ಯಾಂಕ್‌ ಅಧಿಕಾರಿಗಳು ರೈತರಿಗೆ ಸಾಲ ಮರು ಪಾವತಿ ಮಾಡಲು ನೋಟಿಸ್‌ ನೀಡುವುದನ್ನು ನಿಲ್ಲಿಸಬೇಕು. ನೋಟಿಸ್‌ ನೀಡುವುದು ಕಂಡುಬಂದಲ್ಲಿ ಅಂತಹ ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಲು ಲೀಡ್‌ ಬ್ಯಾಂಕ್‌ನ ವ್ಯವಸ್ಥಾಪಕರು ಮುಂದಾಗಬೇಕು.
 ಮಂಜುಶ್ರೀ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿNagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.