28ಕ್ಕೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಸಮ್ಮೇಳನಾಧ್ಯಕ್ಷರಾಗಿ ಡಾ.ಎನ್‌.ಎಸ್‌.ಶಂಕರೇಗೌಡ ಆಯ್ಕೆ • ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಉದ್ಘಾಟನೆ

Team Udayavani, Jun 24, 2019, 11:40 AM IST

mandya-tdy-2..

ಮಳವಳ್ಳಿ; ಕನ್ನಡ ಭಾಷೆ ಹಾಗೂ ಸಾಹಿತ್ಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜೂ.28 ರಂದು ನಡೆಯುತ್ತಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಶಾಸಕ ಡಾ. ಕೆ ಅನ್ನದಾನಿ ತಿಳಿಸಿದರು.

ತಾಲೂಕು ಕಚೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಅಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಮಂಟೇಸ್ವಾಮಿ ಮಹಾದ್ವಾರ, ಎಂ.ವಿ ವೆಂಕಟಪ್ಪ ಮಂಟಪ, ಮಳವಳ್ಳಿ ಸುಂದ್ರಮ್ಮ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಮ್ಮೇಳನದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌ ಪುಟ್ಟರಾಜು ನೆರೆವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಡಾ. ಕೆ.ಅನ್ನದಾನಿ ವಹಿಸಲಿದ್ದಾರೆ ಎಂದು ಹೇಳಿದರು.

ಮೆರವಣಿಗೆ: ಜಾನಪದ ಕಲಾಮೇಳದೊಂದಿಗೆ ಸಮ್ಮೇಳನದ ಅಧ್ಯಕ್ಷರನ್ನು ಮೆರವಣಿಗೆ ಮೂಲಕ ತಾಪಂ ವತಿಯಿಂದ ಅಂಬೇಡ್ಕರ್‌ ಭವನದವರೆಗೆ ಕರೆ ತರಲಾಗುವುದು, ಸಮ್ಮೇಳ ನಾಧ್ಯಕ್ಷರ ಮೆರವಣಿಗೆಯನ್ನು ಚಿತ್ರನಟ ನಿಖೀಲ್ಕುಮಾರಸ್ವಾಮಿ ಉದ್ಘಾಟಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಸಿ.ಕೆ ರವಿಕುಮಾರ ಚಾಮಲಾಪುರ ಆಶಯ ನುಡಿ ನುಡಿಯುವರು. ಸಂಸದೆ ಎ ಸುಮಲತಾ ಪುಸ್ತಕ ಮಳಿಗೆ ಉದ್ಘಾಟಿಸುವರು. ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಯನ್ನು ಜಿಪಂ ಅಧ್ಯಕ್ಷೆ ನಾಗರತ್ಮಮ್ಮ ನೆರೆವೇರಿಸಲಿದ್ದು, ವಿಧಾನಪರಿಷತ್‌ ಸದಸ್ಯ ಮರಿತಿಬ್ಬೇಗೌಡರು ನಿಕಟಪೂರ್ವ ಅಧ್ಯಕ್ಷ ಮ.ಸಿ.ನಾರಯನ್‌ರನ್ನು ಅಭಿನಂದಿಸಲಿದ್ದಾರೆ. ಡಾ. ಎನ್‌.ಎಸ್‌.ಶಂಕರೇಗೌಡ ಸಮ್ಮೇಳನಾ ಧ್ಯಕ್ಷರ ಭಾಷಣ ಮಾಡಲಿದ್ದಾರೆ ಎಂದರು.

ಕವಿಗೋಷ್ಠಿ: ಮಧ್ಯಾಹ್ನ 1 ಗಂಟೆಗೆ ಮಳವಳ್ಳಿ ತಾಲೂಕು ದರ್ಶನ ಎಂಬ ವಿಷಯವಾಗಿ ಮೊದಲನೇ ಗೋಷ್ಠಿ, ಸಾಹಿತಿ ಡಾ. ಬಸಪ್ಪ ನೆಲಮಾಕನಗಳ್ಳಿ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಸಂಜೆ 5 ಗಂಟೆಗೆ ಸಮ್ಮೇಳನದ ಸಮರೋಪ ಸಮಾರಂಭ ನಡೆಯಲಿದ್ದು, ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಸಾಧಕರಿಗೆ ಸನ್ಮಾನಿಸುವರು. ಸಮ್ಮೇಳನಾಧ್ಯಕ್ಷರಿಗೆ ವಿಧಾನಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಅಭಿನಂದನೆ ಸಲ್ಲಿಸುವರು. ಪ್ರೊ. ಜಿ.ಟಿ.ವೀರಪ್ಪ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

ಪ್ರೋತ್ಸಾಹ: ಗ್ರಾಮೀಣ ಪ್ರದೇಶದಲ್ಲಿ ಹಲವಾರು ಕವಿಗಳು ಇಂದಿಗೂ ಕೂಡ ಎಲೆಮರೆಕಾಯಿ ಯಂತಿದ್ದಾರೆ, ಅವರನ್ನು ಗುರುತಿಸಿ ಪ್ರೋತ್ಸಾಹಿಸಲು ಸಾಹಿತ್ಯ ಸಮ್ಮೇಳನ ಸಹಾಯಕವಾಗಲಿದೆ. ಸಾಹಿತ್ಯ ಸಮ್ಮೇಳನದಲ್ಲಿ ನಾಡು, ನುಡಿ, ನೆಲ, ಜಲ, ರೈತರ ಸಮಸ್ಯೆಗಳು, ಕನ್ನಡ ಭಾಷೆ ಉಳಿವು ಸೇರಿದಂತೆ ಇತರೆ ವಿಷಯಗಳ ಬಗ್ಗೆ ವಿದ್ವಾಂಸರು ಹಾಗೂ ವಿಚಾರವಂತರಿಂದ ಗೋಷ್ಠಿಗಳು ನಡೆಯಲಿದ್ದು, ಸಾಹಿತಿಗಳು, ವಿದ್ಯಾರ್ಥಿಗಳು, ಕನ್ನಡ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು.

ಕಸಾಪ ಜಿಲ್ಲಾಧ್ಯಕ್ಷ ರವಿಚಾಮಲಪುರ, ತಾಲೂಕು ಅಧ್ಯಕ್ಷ ಕೊದೇನಕೊಪ್ಪಲು ದೇವರಾಜು, ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ, ವಕೀಲ ಮರಿಸ್ವಾಮಿ, ಸಂಘಟನೆ ಕಾರ್ಯದರ್ಶಿ ಜಯಶಂಕರೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.