ಹುಂಡಿ ಹಣ ಅರ್ಚಕರು, ಯಜಮಾನರ ಪಾಲು?


Team Udayavani, Nov 29, 2022, 2:58 PM IST

ಹುಂಡಿ ಹಣ ಅರ್ಚಕರು, ಯಜಮಾನರ ಪಾಲು?

ಶ್ರೀರಂಗಪಟ್ಟಣ: ಕಳೆದ 10 ವರ್ಷಗಳಿಂದಲೂ ಮುಜರಾಯಿ ಇಲಾಖೆಗೆ ಸೇರಿದ ದೇಗುಲದ ಹುಂಡಿ ಹಣವನ್ನು ಅರ್ಚಕರು, ಗ್ರಾಮದ ಯಜಮಾನರೇ ದುರುಪಯೋಗಪಡಿಸಿಕೊಂಡಿದ್ದು ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದರೇ ಎಂಬ ಅನುಮಾನ ಕಾಡುತ್ತಿದೆ.

ತಾಲೂಕಿನ ಹುರುಳಿಕ್ಯಾತನಹಳ್ಳಿ ಗ್ರಾಮದ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಶಂಭುಲಿಂಗೇಶ್ವರ, ಬಂಧುಕಾರಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಅಕ್ರಮವಾಗಿ ಹುಂಡಿ ಎಣಿಕೆ, ಜತೆಗೆ ಹಣವನ್ನು ತಾವೇ ಪೂಜೆಗೆ ಉತ್ಸವಕ್ಕೆಂದು ಹತ್ತಾರು ವರ್ಷಗಳಿಂದ ಖರ್ಚಿನ ಲೆಕ್ಕವಿಲ್ಲದೇ, ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಶ್ರೀ ಶಂಭುಲಿಂಗೇಶ್ವರ ಹಾಗೂ ಬಂಧುಕಾರಲಿಂಗೇಶ್ವರ ಸ್ವಾಮಿ ದೇವಾಲಯ ಪುರಾತನ ದೇವಾಲಯವಾಗಿದ್ದು, ಗ್ರಾಮಲ್ಲಿ ವಿಶೇಷ ಪೂಜೆ ನಡೆದು ಬಂದಿದೆ. ಕಳೆದ 10 ವರ್ಷಗಳಿಂದ ಗ್ರಾಮದ ಅರ್ಚಕರೊಬ್ಬರು ಪೂಜೆ ಮಾಡುತ್ತಿದ್ದಾರೆ. ಗ್ರಾಮದ ಪ್ರಮುಖರು ಉಸ್ತುವಾರಿ ಮಾಡಿಕೊಂಡು ಅರ್ಚಕರ ಹೆಸರಿನಲ್ಲಿರುವ ಖಾತೆಗೆ ಭಕ್ತರು ನೀಡಿದ ಹಣ, ಹುಂಡಿ ಎಣಿಕೆ ಹಣ ಜಮೆ ಮಾಡುತ್ತಿದ್ದಾರೆ. ಆದರೆ, ಲೆಕ್ಕವನ್ನು ಯಾರಿಗೂ ತಿಳಿಸಿಲ್ಲ.  ಇನ್ನು ದೇವಾಲಯ ಮುಜರಾಯಿ ಇಲಾಖೆಯ 3 ದರ್ಜೆಗೆ ಸೇರಿದರೂ ಇದರ ಪರಿವಿಲ್ಲದ ಅಧಿಕಾರಿಗಳ ನಿರ್ಲಕ್ಷ್ಯತೆ ಕಂಡು ಬಂದಿದೆ.

ಕಳೆದ ವರ್ಷ ದೇವಾಲಯದ ಹುಂಡಿಯನ್ನೇ ಕಳವು ಮಾಡಲಾಗಿತ್ತು. ಆದರೆ, ಬಹಿರಂಗಪಡಿಸದೆ ಪೊಲೀಸರಿಗೂ ದೂರು ನೀಡದೆ ಮುಚ್ಚಿಟ್ಟರು. ಇದರಿಂದ ಸತ್ಯಾಂಶ ದೂರವಾಗಿದೆ. ದೇಗುಲ ಹಣ ದುರ್ಬಳಕೆ ಮಾಡಿಕೊಂಡಿರುವುದಕ್ಕೆ ಸಂಬಂಧಿಸಿದ ಅಧಿಕಾರಿಗಳು ಶಾಮೀಲಾಗಿದ್ದು ತಹಶೀಲ್ದಾರ್‌ ಅವರು ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸಬೇಕಿದೆ.

ಬುದ್ಧಿ ಹೇಳಿದ್ದೇವೆ: ದೇಗುಲ ಹುಂಡಿ ಎಣಿಕೆಯಿಂದ ಬಂದಿರುವ ಹಣದ ಬಗ್ಗೆ ಪರಿಶೀಲನೆ ನಡೆದಿದೆ. ಅಕ್ರಮವೆಸಗಿರುವ ಗ್ರಾಮದ ಮುಖಂಡರಿಗೂ ಬುದ್ಧಿವಾದ ಹೇಳಲಾಗಿದೆ. ಅಲ್ಲದೇ, ದೇವಾಲಯದ ಹೆಸರಿನಲ್ಲಿರುವ ಖಾತೆಗೆ ಹಣ ಜಣೆ ಮಾಡುವಂತೆ ಸೂಚಿಸಲಾಗಿದೆ. ಇನ್ನು ಮುಂದೆ ಈ ರೀತಿ ಘಟನೆ ನಡೆಯದಂತೆ ನಮ್ಮ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಗ್ರಾಮಸ್ಥರ ಮುಖಾಂತರ ಸಮಿತಿ ಮಾಡಿ ಪೂಜೆ ನಡೆಯುವಂತೆ ಸೂಚಿಸಲಾಗುವುದು ಎಂದು ತಹಶೀಲ್ದಾರ್‌ ಶ್ವೇತಾ ಎನ್‌.ರವೀಂದ್ರ ತಿಳಿಸಿದರು.

ಪರಿಶಿಷ್ಟರಿಗೆ ಪ್ಲಾಸ್ಟಿಕ್‌ ಕವರ್‌ನಲ್ಲಿ ಪೂಜೆ ಸಾಮಗ್ರಿ ತರಲು ಹೇಳುತ್ತಾರೆ. ಉತ್ಸವ ಬೀದಿಗೆ ಬರಲ್ಲ. 10 ವರ್ಷ ದಿಂದ ದುರ್ಬಳಕೆ ಆದ, ಅರ್ಚಕರ ಖಾತೆ ಹಣ ಪರಿಶೀಲಿಸಿ. – ಶಿವಕುಮಾರ್‌, ಗುತ್ತಿಗೆದಾರ ಹುರುಳಿಕ್ಯಾತನಹಳ್ಳಿ

-ಗಂಜಾಂ ಮಂಜು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.