ಮೊಸಳೆಗಳಿಗೆ ವ್ಯಕ್ತಿ ಆಹುತಿ
Team Udayavani, May 28, 2018, 7:10 AM IST
ಕನಕಪುರ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಭಾನುವಾರ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ವ್ಯಕ್ತಿಯೊಬ್ಬ ಮೊಸಳೆಗಳಿಗೆ ಆಹುತಿಯಾಗಿದ್ದಾನೆ.
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮೋಟಗಾನಹಳ್ಳಿ ಗ್ರಾಮದ ವೆಂಕಟೇಶ್ (52)ಮೃತ ದುರ್ದೈವಿ. ಮೋಟಗಾನಹಳ್ಳಿಯ ಜಯಣ್ಣ ಎಂಬುವರು ತಮ್ಮ ಮನೆಯ ದೇವರಾದ ಮುತ್ತತ್ತಿಯ ಮುತ್ತತ್ತಿ ರಾಯಸ್ವಾಮಿಗೆ ಸೇವೆ ಸಲ್ಲಿಸಲು ಶನಿವಾರ ಸಂಜೆ ಇಲ್ಲಿಗೆ ಬಂದಿದ್ದರು.
450ಕ್ಕೂ ಹೆಚ್ಚು ಮಂದಿ ವಿವಿಧ ವಾಹನದಲ್ಲಿ ಆಗಮಿಸಿದ್ದರು. ಭಾನುವಾರ ಬೆಳಗ್ಗೆ ದೇವರ ಸೇವೆಗೆ ಸಿದ್ಧತೆ ನಡೆದಿತ್ತು. ಬೆಳಗ್ಗೆ 8 ಗಂಟೆ ವೇಳೆಗೆ, ವೆಂಕಟೇಶ್ ಅವರು ದೇವಾಲಯದ ಸಮೀಪ ಇರುವ ಕಾವೇರಿ ನದಿ ನೀರಿನಲ್ಲಿ ಈಜಾಡುತ್ತಿದ್ದರು. ಏಕಾಏಕಿ 3 ಮೊಸಳೆಗಳು ಕಾಣಿಸಿಕೊಂಡು, ವೆಂಕಟೇಶ್ನನ್ನು ಒಂದು ದಡದಿಂದ ಮತ್ತೂಂದು ದಡಕ್ಕೆ ಎಳೆದುಕೊಂಡು ಹೋದವು. ಇದನ್ನು ಕಂಡು ಮೋಟಗಾನಹಳ್ಳಿ ಗ್ರಾಮಸ್ಥರು ಹಾಗೂ ಸ್ಥಳದಲ್ಲಿದ್ದವರು ಕೂಗಾಡತೊಡಗಿದರು.
ಆಗ ಮೊಸಳೆಗಳು ವೆಂಕಟೇಶ್ನನ್ನು ನೀರಿನ ಒಳಗೆ ಎಳೆದುಕೊಂಡು ಹೋದವು. ಮುತ್ತತ್ತಿಯಲ್ಲಿ ಇದ್ದ ಸ್ಥಳೀಯ ಈಜುಗಾರರು ಹಾಗೂ ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಸಿಬ್ಬಂದಿಗಳು ಸೇರಿ ನಾಡದೋಣಿಯಲ್ಲಿ ವೆಂಕಟೇಶ್ನನ್ನು ಹುಡುಕಲಾರಂಭಿಸಿದರು. ನದಿಯ ಬಲದಂಡೆಯ ಬಳಿ ಅವರ ದೇಹ ಕಾಣಿಸಿತು. ಮೊಸಳೆಗಳಿಂದ ಬಿಡಿಸಿ, ವೆಂಕಟೇಶ್ನನ್ನು ನೀರಿನಿಂದ ಹೊರತರುವಷ್ಟರಲ್ಲಿ ಅವರು ಉಸಿರುಗಟ್ಟಿ ಮೃತಪಟ್ಟಿದ್ದರು. ಮೊಸಳೆಗಳು ಅವರ ಎಡಗಾಲಿನ ಪಾದ ತಿಂದಿದ್ದು, ಬಲಗೈ ಮೂಳೆ ಮುರಿದು ಹಾಕಿವೆ.
ಹಲಗೂರು ಪೊಲೀಸರು ಮೃತ ವ್ಯಕ್ತಿಯ ಪತ್ನಿ, ಗಂಗಮ್ಮನವರಿಂದ ದೂರು ದಾಖಲಿಸಿಕೊಂಡು,ಮಳವಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ರಾತ್ರಿ 7.30ಕ್ಕೆ ಮೃತನ ಸ್ವಗ್ರಾಮವಾದ ಮೋಟಗಾನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.