ಖಜಾನೆಯಿಂದ ಮೇಲುಕೋಟೆಗೆ ವೈರಮುಡಿ ಕಿರೀಟ; ದಾರಿಯುದ್ದಕ್ಕೂ ಗ್ರಾಮಸ್ಥರಿಂದ ಪೂಜೆ


Team Udayavani, Mar 14, 2022, 3:16 PM IST

ಖಜಾನೆಯಿಂದ ಮೇಲುಕೋಟೆಗೆ ವೈರಮುಡಿ ಕಿರೀಟ; ದಾರಿಯುದ್ದಕ್ಕೂ ಗ್ರಾಮಸ್ಥರಿಂದ ಪೂಜೆ

ಮಂಡ್ಯ: ಕಳೆದ ಎರಡು ವರ್ಷಗಳಿಂದ ನಿಂತಿದ್ದ ವಿಶ್ವಪ್ರಸಿದ್ಧ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ವೈರಮುಡಿ ಉತ್ಸವ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಖಜಾನೆಯಿಂದ ಅನುಚಾನೂಪದ್ಧತಿಯಂತೆ ವೈರಮುಡಿ ಕಿರೀಟ ಹಾಗೂ ತಿರುವಾಭರಣಗಳನ್ನು ಮೇಲುಕೋಟೆಗೆ ಕೊಂಡೊಯ್ಯಲಾಯಿತು.

ಸೋಮವಾರ ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ನೇತೃತ್ವದಲ್ಲಿ ಖಜಾನೆಯನ್ನು ತೆರೆಯಲಾಯಿತು. ವಜ್ರಖಚಿತ ಕಿರೀಟ ಹಾಗೂ ತಿರುವಾಭರಣಗಳಿಗೆ ಮೇಲುಕೋಟೆ ದೇವಾಲಯದ ಸ್ಥಾನೀಕ ಅರ್ಚಕರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೇಲುಕೋಟೆಯಿಂದ ಆಗಮಿಸಿದ ಪರಕಾಲ ಮಠದ ವಾಹನದಲ್ಲಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಕೊಂಡೊಯ್ಯಲಾಯಿತು.

ಲಕ್ಷ್ಮೀ ಜನಾರ್ಧನ ದೇವಾಲಯದಲ್ಲಿ ಪೂಜೆ: ಸಂಪ್ರದಾಯದಂತೆ ಜಿಲ್ಲಾ ಖಜಾನೆಯಿಂದ ಹೊರಟ ಆಭರಣಗಳನ್ನು ನಗರದ ಲಕ್ಷ್ಮೀಜನಾರ್ಧನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಶ್ರೀರಂಗಪಟ್ಟಣ ಮಾರ್ಗವಾಗಿ ವಾಹನ ಸಾಗಿತು. ಜಿಪಂ ಸಿಇಒ ದಿವ್ಯಾಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ಸೇರಿದಂತೆ ಮತ್ತಿತರರಿದ್ದರು.

ಇದನ್ನೂ ಓದಿ:ವೈರಮುಡಿ ಕಿರೀಟ ತರುವ ವಿಚಾರದಲ್ಲಿ ಗೊಂದಲ: ವಾಹನಕ್ಕೆ ತಡೆ

ಗ್ರಾಮಗಳಲ್ಲಿ ಪೂಜೆ: ಶ್ರೀರಂಗಪಟ್ಟಣ ಮಾರ್ಗವಾಗಿ ಸಾಗಿದ ಆಭರಣ ಇದ್ದ ವಾಹನವು ಇಂಡುವಾಳು, ಕಾಳೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಗ್ರಾಮಸ್ಥರು ಆಭರಣಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ, ಗ್ರಾಮದ ಮುಖಂಡರು ಆಭರಣಗಳನ್ನು ಹೊತ್ತು ಭಕ್ತಿಭಾವ ಮೆರೆದರು.

ಒಂದು ಗಂಟೆ ತಡವಾಗಿ ಬಂದ ವಾಹನ: ವೈರಮುಡಿ ಕಿರೀಟ ತರುವ ವಿಚಾರದಲ್ಲಿ ಸ್ಥಾನೀಕರು ಹಾಗೂ ಅಧಿಕಾರಿಗಳ ನಡುವೆ ನಡೆದ ಗೊಂದಲದಿಂದ ವಾಹವನ್ನು ಮೇಲುಕೋಟೆಯಲ್ಲಿ ತಡೆಯಲಾಗಿತ್ತು. ಇದರಿಂದ ಬೆಳಿಗ್ಗೆ 7ಕ್ಕೆ ಜಿಲ್ಲಾ ಖಜಾನೆಯನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಮೇಲುಕೋಟೆಯಲ್ಲಿ ನಡೆದ ಅಧಿಕಾರಿಗಳು ಹಾಗೂ ಸ್ಥಾನೀಕರ ವಾಗ್ವಾದದಿಂದ ಪರಕಾಲ ಮಠದ ವಾಹನ ಒಂದು ಗಂಟೆ ತಡವಾಗಿ ಆಗಮಿಸಿತು. ನಂತರ 8.30ಕ್ಕೆ ಖಜಾನೆ ತೆರೆದು ಆಭರಣಗಳಿಗೆ ಪೂಜೆ ಸಲ್ಲಿಸಲಾಯಿತು.

ಪೊಲೀಸ್ ಬಿಗಿ ಭದ್ರತೆ: ಜಿಲ್ಲಾ ಖಜಾನೆಯ ವೈರಮುಡಿ ಆಭರಣಗಳನ್ನು ಮೇಲುಕೋಟೆಗೆ ಕೊಂಡೊಯ್ಯುವ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಅಲ್ಲದೆ, ವಾಹನ ಸಂಚರಿಸುವ ಮೇಲುಕೋಟೆಯುದ್ದಕ್ಕೂ ಪೊಲೀಸ್ ಕಣ್ಗಾವಲು ಇಡಲಾಗಿತ್ತು.

ಟಾಪ್ ನ್ಯೂಸ್

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BIO-METRIC

Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್‌ ಬಯೋಮೆಟ್ರಿಕ್‌!

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.