ಕನಿಷ್ಠ ವೇತನ ಜಾರಿಗಾಗಿ ಅನಿರ್ದಿಷ್ಟಾವಧಿ ಧರಣಿ ಆರಂಭ


Team Udayavani, Sep 22, 2020, 2:47 PM IST

ಕನಿಷ್ಠ ವೇತನ ಜಾರಿಗಾಗಿ ಅನಿರ್ದಿಷ್ಟಾವಧಿ ಧರಣಿ ಆರಂಭ

ಮಂಡ್ಯ: ಕನಿಷ್ಠ ವೇತನ ಜಾರಿ ಮಾಡಬೇಕು ಎಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘ (ಸಿಐಟಿಯು ಸಂಯೋಜಿತ) ಮಂಡ್ಯ ತಾಲೂಕು ಘಟಕ ಸದಸ್ಯರು ಸೋಮವಾರ ನಗರದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ನಗರದ ಜಿಪಂಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕಾರ್ಮಿಕ ಇಲಾಖೆ ನಿಗದಿ ಪಡಿಸಿರುವಂತೆ ಬಿಲ್‌ ಕಲೆಕ್ಟರ್‌, ಗುಮಾಸ್ತ, ಕಂಪ್ಯೂ ಟರ್‌ ಆಪರೇಟರ್‌ಗಳಿಗೆ 13,815 ರೂ., ಪಂಪ್‌ ಆಪರೇಟರ್‌ಗೆ 12,281 ರೂ., ಜವಾನರಿಗೆ 11, 703 ರೂ., ಸ್ವತ್ಛತಾಗಾರರಿಗೆ 14,563 ರೂ. ವೇತನ ನೀಡಬೇಕು. ಹಳೆಯ ವೇತನ ತೆರಿಗೆ ಸಂಗ್ರಹದಲ್ಲಿ 14 ಹಾಗೂ 15ನೇ ಹಣಕಾಸು ಆಯೋಗದ ಹಣದಲ್ಲಿ ಬಾಕಿ ಪಾವತಿಸಬೇಕು ಎಂದು ಒತ್ತಾಯಿಸಿದರು.

ಅಕ್ರಮ ನೇಮಕಾತಿ ತಡೆಯಿರಿ: ಇಎಫ್ಎಂಎಸ್‌ ಬಾಕಿ ಉಳಿದ ಕಸಗೂಡಿಸುವ ಮತ್ತು ಪಂಪ್‌ ಆಪ ರೇಟರ್‌ ಹಾಗೂ ಇತರೆ ಸಿಬ್ಬಂದಿಯನ್ನು ಸರ್ಕಾರದ ಆದೇಶದಂತೆ ಸೇರ್ಪಡೆ ಮಾಡಿಕೊಳ್ಳಬೇಕು. ಸೇವಾ ಪುಸ್ತಕ ತೆರೆಯಬೇಕು. ಪಂಪ್‌ ಆಪರೇಟರ್‌ಗಳಿಂದ ಕರ ವಸೂಲಿಗಾರರ ಹುದ್ದೆಗೆ ಬಡ್ತಿ ನೀಡಬೇಕು. ಸರ್ಕಾರದ ಆದೇಶದಂತೆ ಅನುಕಂಪದ ನೇಮಕಾತಿ ಮಾಡಲು ನಿರ್ದೇಶನ ನೀಡಬೇಕು. ಹೊಸದಾಗಿ ಕಾನೂನು ಬಾಹಿರವಾಗಿ ಅಕ್ರಮ ನೇಮಕಾತಿ ಮಾಡಿಕೊಳ್ಳುವುದನ್ನು ತಡೆಯಬೇಕು. ಈಗಾಗಲೇ ನೇಮಕ ಮಾಡಿಕೊಂಡವರ ಮೇಲೆ ಸೂಕ್ತ ಕ್ರಮ ತೆಗೆದುಕೊಂಡು ನೇಮಕಾತಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಸಿಬ್ಬಂದಿಗೆ ಪಿಂಚಣಿ ನೀಡಿ: ಬಿಲ್‌ ಕಲೆಕ್ಟರ್‌ರಿಂದ ಗ್ರೇಡ್‌-2ಕಾರ್ಯದರ್ಶಿ ಹಾಗೂ ಲೆಕ್ಕ ಸಹಾಯಕ ಹುದ್ದೆಗಳಿಗೆ ಬಡ್ತಿ ನೀಡಬೇಕು. ಸರ್ಕಾರದ ಆದೇಶ ಜಾರಿ ಮಾಡದ ಪಿಡಿಒಗಳ ಮೇಲೆ ಕ್ರಮ ಕೈಗೊಳ್ಳ ಬೇಕು. ಪಂಪ್‌ ಆಪರೇಟರ್‌ ಅರ್ಧ ಸಂಬಳ ನೀಡುವ ನೌಕರ ವಿರೋಧಿ ನೀತಿ ಕೈಬಿಡಬೇಕು. ಎಲ್ಲ ಸಿಬ್ಬಂದಿಗಳ ವೇತನಕ್ಕೆ ಕೊರತೆ ಇರುವ 382 ಕೋಟಿ ರೂ. ಹಣವನ್ನು ಬೇರೆ ಬೇರೆ ಯೋಜನೆಯಿಂದ ಕ್ರೋಢೀಕರಿಸಿ ಮಂಜೂರು ಮಾಡಬೇಕು. ಕಂಪ್ಯೂಟರ್‌ ಆಪರೇಟರ್‌ಗಳಿಗೆ ಬಡ್ತಿ ನೀಡಲು ವೃಂದ ಮತ್ತು ನೇಮಕಾತಿ ತಿದ್ದುಪಡಿ ಮಾಡಬೇಕು. ಅವರ ಹಿಂದಿನ ಸೇವೆಯನ್ನು ಪರಿಗಣಿಸಬೇಕು. ಎಲ್ಲ ಸಿಬ್ಬಂದಿಗೆ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿದಿನ ಒಂದು ತಾಲೂಕು ಘಟಕದವರು ಪ್ರತಿಭಟನೆ ನಡೆಸಲಿದ್ದಾರೆ. ನಮ್ಮ ಬೇಡಿಕೆ ಈಡೇರುವವರೆಗೂ ಧರಣಿ ಮುಂದುವರಿಸಲಾಗುವುದು ಎಂದು ಜಿಲ್ಲಾ ಘಟಕದ ಅಧ್ಯಕ್ಷ ಮೊದೂರು ನಾಗರಾಜು ತಿಳಿಸಿದರು.

ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ. ಎಂ.ಶಿವಕುಮಾರ್‌, ಖಜಾಂಚಿ ಬಸವರಾಜು, ಜಿ. ಆರ್‌. ರಾಮು, ಆನಂದ್‌, ಬಸವರಾಜು ನಾಗ ಮಂಗಲ, ಶಿವಕುಮಾರ್‌ ಕೆ.ಆರ್‌.ಪೇಟೆ, ರಾಜಣ್ಣ, ಪುಟ್ಟಸ್ವಾಮಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.