ಕ್ಷಯರೋಗ ನಿರ್ಮೂಲನೆಗೆ ಸಹಕಾರ ನೀಡಿ


Team Udayavani, Mar 26, 2021, 4:02 PM IST

ಕ್ಷಯರೋಗ ನಿರ್ಮೂಲನೆಗೆ ಸಹಕಾರ ನೀಡಿ

ಶ್ರೀರಂಗಪಟ್ಟಣ: ಕ್ಷಯರೋಗ ನಿರ್ಮೂಲನೆ ಗೊಳಿಸಲು ಇದು ಸಕಾಲವಾಗಿದೆ. 2025 ರ ವೇಳೆಗೆ ಕ್ಷಯರೋಗವನ್ನು ಸೋಲಿಸಿ ದೇಶವನ್ನು ಗೆಲ್ಲಿಸುವ ಸಂಕಲ್ಪ ಮಾಡೋಣ ಎಂದು ಮೈಸೂರು ವಿಭಾಗೀಯ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್‌ ಹೇಳಿದರು.

ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಶ್ರೀರಂಗಪಟ್ಟಣ, ಪ್ರಾ.ಆ.ಕೇಂದ್ರ ಕೆ.ಆ ರ್‌.ಸಾಗರ,ಕಾವೇರಿ ನೀರಾವರಿ ನಿಗಮ ಹಾಗೂ ಗ್ರಾಮಪಂಚಾಯಿತಿ ಸಹಯೋಗದಲ್ಲಿ ಪ್ರಸಿದ್ಧ ಪ್ರವಾಸಿ ಸ್ಥಳಕೆ.ಆರ್‌ಎಸ್‌ ಬೃಂದಾವನದ ಪ್ರವೇಶ ದ್ವಾರದಲ್ಲಿಆಯೋಜಿಸಿದ್ದ ವಿಶ್ವ ಕ್ಷಯರೋಗ ದಿನ-2021 ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗಾಳಿಯ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ಕ್ಷಯವು ಸಾಂಕ್ರಾಮಿಕ ರೋಗವಾಗಿದ್ದು, ಸಕಾಲದಲ್ಲಿ ಪರೀಕ್ಷೆ ಮತ್ತು ನಿಯಮಿತ ಚಿಕಿತ್ಸೆ ಪಡೆಯುವುದರಿಂದ ಪೂರ್ಣ ಗುಣಪಡಿಸ ಬಹುದಾಗಿದೆ ಎಂದರು.

ಲಕ್ಷಣಗಳು: ಸತತವಾದ ಕೆಮ್ಮು, ಕಫ‌, ಕಫ‌ದಲ್ಲಿ ರಕ್ತ, ಹಸಿವಾಗದಿರುವುದು, ತೂಕ ಕಡಿಮೆಯಾಗುವುದು, ಬೆವರುವುದು, ಸಾಯಂಕಾಲದ ವೇಳೆ ಜ್ವರ, ದೇಹದ ಮೇಲಿನ ಗಂಟುಗಳು ಕ್ಷಯರೋಗದಲಕ್ಷಣಗಳಾಗಿದ್ದು ಪರೀಕ್ಷಿಸಿಕೊಳ್ಳಬೇಕು ಎಂದರು.

ತಿಂಗಳಿಗೆ 500 ರೂ.: ಆಡಳಿತ ವೈದ್ಯಾಧಿಕಾರಿ ಡಾ.ಸೌಮ್ಯಾ ಸಿ.ಎಸ್‌ ಮಾತನಾಡಿ, ಉಚಿತ ಕಫ‌ ಪರೀಕ್ಷೆ, ಕ್ಷ-ಕಿರಣ ಪರೀಕ್ಷೆ, ಆರು ತಿಂಗಳು ಮನೆಬಾಗಿಲಿಗೆ ಆಶಾ ಕಾರ್ಯಕರ್ತರ ಮೂಲಕ ಚಿಕಿತ್ಸೆಜೊತೆಗೆ ರೋಗಿಯ ಪೌಷ್ಟಿಕ ಆಹಾರಕ್ಕಾಗಿ ಪ್ರತೀತಿಂಗಳುವ 500 ರೂ.ನಂತೆ ಒಟ್ಟು 3000ರೂ.ಪ್ರೋತ್ಸಾಹ ಧನ ನೀಡುವ ಸೌಲಭ್ಯ ಸರ್ಕಾರಿ ಆಸ್ಪತ್ರೆಯಲ್ಲಿದೆ ಎಂದರು.

ಜಾಗೃತಿ: ವಿಶ್ವ ಕ್ಷಯರೋಗ ದಿನದ ಅಂಗವಾಗಿ ಬೃಂದಾವನದ ಪ್ರವೇಶ ದ್ವಾರವನ್ನು ಕೆಂಪು ದೀಪಾಲಂಕಾರದಿಂದ ಸಿಂಗರಿಸಿ ಜಾಗೃತಿ ಮೂಡಿಸಲಾಯಿತು. ಕ್ಷಯರೋಗ ವಿಭಾಗದ ಮೇಲ್ವಿಚಾರಕ ಸುಹೇಲ್‌ ಅಹಮದ್‌ ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಡಿ.ಬೆನ್ನೂರ ಕ್ಷಯರೋಗ ನಿರ್ಮೂಲನೆಯ ಪ್ರತಿಜ್ಞೆ ಬೋಧಿಸಿದರು. ಪ್ರವಾಸಿಗರಿಗೆ ಕರಪತ್ರ ವಿತರಿಸಿ ಹಾಗೂ ಮೈಕಿಂಗ್‌ ಮೂಲಕ ಜಾಗೃತಿ ಮೂಡಿಸಲಾಯಿತು.

ಆರೋಗ್ಯ ಇಲಾಖೆಯ ಮೈಸೂರು ಎಎಂಒ ಭೀಮಣ್ಣ, ಕೆಆರ್‌ಎಸ್‌ ಗ್ರಾಪಂ ಅಧ್ಯಕ್ಷನಾಗೇಂದ್ರಕುಮಾರ್‌, ಉಪಾಧ್ಯಕ್ಷೆ ಶೃತಿ ಯೋಗೀಶ್‌,ಪಿಡಿಒ ರಫೀಕ್‌ ಕರ್ಜಗಿ, ಸದಸ್ಯರಾದಸಿ.ಮಂಜುನಾಥ್‌, ಕಾವೇರಿ ನೀರಾವರಿ ನಿಗಮದಅಭಿಯಂತರರಾದ ಶಿವಕುಮಾರ್‌, ಆರೋಗ್ಯ ಇಲಾಖೆಯ ಮೇಲ್ವಿಚಾರಕರಾದ ಮಹೇಶ್‌, ಪ್ರಭಾಕರ್‌, ಜಿ.ಮೋಹನ್‌, ಸಲೀಂಪಾಷ,ಹೇಮಣ್ಣ, ಚಂದನ್‌, ಆರೋಗ್ಯ ಸಹಾಯಕಿ ಯರಾದ ಸೌಮ್ಯಾ, ಗೀತಾ, ಜಯಶೀಲ ಆರ್‌. ಮತ್ತು ಆಶಾ ಕಾರ್ಯಕರ್ತರು ಹಾಜರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.