![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 6, 2019, 6:58 PM IST
ಮಂಗಳೂರು: ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಕೇವಲ ಟಿಪ್ಪು ಜಯಂತಿ ಮಾತವಲ್ಲ ಎಲ್ಲಾ ಮಹಾತ್ಮರ ಜಯಂತಿಯನ್ನು ಆಚರಿಸಿದ್ದೇವೆ. ಬಿಜೆಪಿಯವರು ಸಂಕುಚಿತ ಮನೋಭಾವದಿಂದ ಟಿಪ್ಪು ಜಯಂತಿ ಮಾಡುತ್ತಿಲ್ಲ. ಸುಳ್ಳು ಎಂಬುದು ಬಿಜೆಪಿಯವರ ಅನ್ವರ್ಥನಾಮ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಅವರು ಮಂಗಳೂರಿನಲ್ಲಿ ಬುಧವಾರದಂದು ಮಹಾನಗರ ಪಾಲಿಕೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಬಿಜೆಪಿಗರೇ ಒಳಗಡೆ ಕುತಂತ್ರ ಮಾಡಿ ಆಡಿಯೋ ಲೀಕ್ ಮಾಡಿಸಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಗೆ ಸಿದ್ದರಾಮಯ್ಯ ಶನಿ ಇದ್ದ ಹಾಗೇ ಎಂಬ ಜನಾರ್ಧನ ಪೂಜಾರಿ ಹೇಳಿಕೆ ವಿಚಾರ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದ ಸಿದ್ದರಾಮಯ್ಯ ಕೊನೆಗೆ ಅವರೇ ಕಾಂಗ್ರೆಸ್ ಗೆ ಮತ ನೀಡಿ ಎಂದಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್, ಮಾಜಿ ಸಚಿವರಾದ ಯು.ಟಿ.ಖಾದರ್, ರಮಾನಾಥ್ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಮೊದಲಾದವರು ಉಪಸ್ಥಿರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.