![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 30, 2019, 4:13 PM IST
ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಕಾಸರಗೋಡಿನಿಂದ ಮರವಂತೆ ಸೇರಿದಂತೆ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಕೋಸ್ಟಲ್ ಸರ್ಕ್ಯೂಟ್ ಯೋಜನೆಯನ್ನು ತಯಾರಿಸಿ ಅನುಮೋದನೆಗಾಗಿ ಸರಕಾರಕ್ಕೆ ಕಳುಹಿಸಿ ಕೊಡಲಾಗಿದೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು.
ಅವರು ಸೋಮವಾರದಂದು ನಗರಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡುವ ಬಗ್ಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದು, ಈಗಾಗಲೇ 11 ಜಿಲ್ಲೆಗಳ ಪ್ರವಾಸ ಮುಕ್ತಾಯಗೊಂಡಿದೆ. ಮುಂದಿನ ಒಂದೂವರೆ ತಿಂಗಳಲ್ಲಿ ಅಂದರೆ ನವೆಂಬರ್ ಅಂತ್ಯದ ವೇಳೆ ಎಲ್ಲಾ ಜಿಲ್ಲೆಗಳ ಪ್ರವಾಸ ಮುಗಿಸಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಯೋಜನೆಯನ್ನು ರೂಪಿಸಲಾಗುವುದು. ಬಳಿಕ ಯೋಜನೆಯನ್ನು ಹಂತ-ಹಂತವಾಗಿ ಜಾರಿಗೊಳಿಸಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.
You seem to have an Ad Blocker on.
To continue reading, please turn it off or whitelist Udayavani.