ಷಷ್ಠಿ ದಿನ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ನಾಗದರ್ಶನ!


Team Udayavani, Dec 4, 2019, 6:17 PM IST

4-December-28

ಮೂಡಿಗೆರೆ: ಚಂಪಾ ಷಷ್ಠಿಯ ದಿನ ತಾಲೂಕಿನ ಗೋಣಿಬೀಡು ಅಗ್ರಹಾರದ ಸುಬ್ರಹ್ಮಣ್ಯ ದೇವಾಲಯದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ.

ಸುಬ್ರಹ್ಮಣ್ಯ ಷಷ್ಠಿಯ ದಿನ ಸಾವಿರಾರು ಭಕ್ತರಿರುವಾಗಲೇ ನಾಗರಹಾವೊಂದು ದೇವಾಲಯಕ್ಕೆ ಆಗಮಿಸಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಸೋಮವಾರ ದೇವಾಲಯದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಸಾರ್ವಜನಿಕರೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಆದರೆ, ಜನಸಾಗರದ ಮಧ್ಯೆ ನಾಗರಹಾವೊಂದು ತನ್ನ ನೆಚ್ಚಿನ ದೈವ ಆದಿ ಸುಬ್ರಹ್ಮಣ್ಯೇಶ್ವರನ ದರ್ಶನಕ್ಕಾಗಿ ಆಗಮಿಸಿದಾಗ ಭಕ್ತರು ದಂಗಾದರು. ನಂತರ ಸುಬ್ರಹ್ಮಣ್ಯ ಸ್ವಾಮಿ ಹಾಗೂ ನಾಗದೇವನಿಗೂ ಉಘೇ ಉಘೇ ಎನ್ನುತ್ತ ಕೈಮುಗಿದು ನಿಂತರು.

ಪ್ರತಿ ವರ್ಷ ಸುಬ್ರಹ್ಮಣ್ಯ ಷಷ್ಠಿಯ ದಿನ ನಾಗರಹಾವು ದೇವಾಲಯಕ್ಕೆ ಆಗಮಿಸುವ ಸಂಪ್ರದಾಯವಿದೆ. ಅದೇ ರೀತಿ ಈ ವರ್ಷವೂ ಕೂಡ ನಾಗರಹಾವು ಬಂದಿತ್ತು ಎನ್ನಲಾಗಿದೆ. ಆದರೆ, ಈ ಬಾರಿ ಆಗಮಿಸಿದ ಹಾವಿನ ಹೆಡೆಯ ಭಾಗದಲ್ಲಿ ವಿಭೂತಿ ಪಟ್ಟೆ ಕಂಡು ಎಲ್ಲರಿಗೂ ಅಚ್ಚರಿಯಾಗಿದೆ.

ಸರಸರನೆ ಹರಿದಾಡಿಕೊಂಡು ಬಂದ ನಾಗರ ಕೆಲವೇ ಕ್ಷಣಗಳಲ್ಲಿ ವಾಪಸ್‌ ಹೊರಟುಹೋಗಿದೆ. ವಿಷಯ ತಿಳಿಯುತ್ತಿದ್ದಂತೆ ಈ ವಿಶೇಷವನ್ನು ಕಾಣಲು ಸಾರ್ವಜನಿಕರು ಆಗಮಿಸಿದರಾದರೂ ನಂತರ ಆಗಮಿಸಿದ ಭಕ್ತಾದಿಗಳಿಗೆ ನಾಗರ ದರ್ಶನ ವಾಗಿಲ್ಲ. ಈ ಅಚ್ಚರಿಯ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಹಾವು ಸಾಧಾರಣ ಅಳತೆಯುಳ್ಳದ್ದಾಗಿದ್ದು, ತುಂಬಾ ಚಟುವಟಿಕೆಯದ್ದಾಗಿತ್ತು. ಇದು ದೈವಕ್ಕೆ ಸಂಬಂಧಿಸಿದ ಹಾವು ಎನ್ನುತ್ತ, ಇದನ್ನು ಬೇರೆ ಯಾರಾದರೂ ಮಾಡಿದ್ದಾರೆ ಎನ್ನಲು, ಇಂತಹ ಚುರುಕಾದ ಹಾವಿಗೆ ವಿಭೂತಿ ಹಚ್ಚಿ ದೇವಸ್ಥಾನಕ್ಕೆ ಬರುವಂತೆ ಹೇಳುವ ಪರಿಣಿತರು ಸ್ಥಳೀಯವಾಗಿ ಯಾರೂ ಇಲ್ಲ ಎನ್ನುವುದು ಭಕ್ತರ ವಾದ. ಹಾವಿನ ಹೆಡೆಯ ಮೇಲ್ಭಾಗದಲ್ಲಿ ಮೂರು ಬೆರಳಿನಲ್ಲಿ ಹಚ್ಚಿದ ವಿಭೂತಿ ಪಟ್ಟೆಯಂತೆ ಇರುವ ಚಿತ್ರ ಚರ್ಮದ ಒಳಭಾಗದಲ್ಲಿ ಇರುವುದು ಕಂಡುಬಂದಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.