ಮೈಸೂರು-ಕುಶಾಲನಗರ ರೈಲು ಮಾರ್ಗಕ್ಕೆ 1,855 ಕೋಟಿ ಮೀಸಲು

87 ಕಿ.ಮೀ. ರೈಲು ಮಾರ್ಗ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ

Team Udayavani, Jul 12, 2019, 12:17 PM IST

mysuru-tdy-2..

ಮೈಸೂರು: ಮೈಸೂರು-ಕುಶಾಲನಗರ ನಡುವೆ ನೂತನ ರೈಲು ಮಾರ್ಗ ನಿರ್ಮಾ ಣಕ್ಕಾಗಿ ಕೇಂದ್ರ ಸರ್ಕಾರ 2019-20ನೇ ಸಾಲಿನ ಆಯವ್ಯಯದಲ್ಲಿ 1855 ಕೋಟಿ ರೂ. ಮೀಸಲಿರಿಸಿದೆ.

ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಮೈಸೂರು (ಬೆಳಗೊಳ)-ಕುಶಾಲ ನಗರ ನಡುವಿನ 87 ಕಿ.ಮೀ. ರೈಲು ಮಾರ್ಗ ನಿರ್ಮಾಣವಾದಲ್ಲಿ ಹುಣಸೂರು, ಪಿರಿಯಾಪಟ್ಟಣ, ಟಿಬೆಟಿಯನ್ನರ ಪುನರ್‌ವಸತಿ ಕೇಂದ್ರ ಬೈಲಕುಪ್ಪೆ, ಕುಶಾಲ ನಗರದ ಜನತೆಗೆ ಅನುಕೂಲವಾಗಲಿದ್ದು, ಇದರೊಂದಿಗೆ ಪ್ರವಾಸೋದ್ಯಮ ಅಭಿವೃದ್ಧಿ ಜೊತೆಗೆ ವಾಣಿಜ್ಯೋದ್ಯಮವು ಬೆಳವಣಿಗೆಯಾಗಲಿದೆ.

ಹಲವು ಅಡೆತಡೆಗಳ ನಡುವೆಯೂ ಕೇಂದ್ರ ಸರ್ಕಾರ ನೂತನ ರೈಲು ಮಾರ್ಗಕ್ಕೆ ಒಪ್ಪಿಗೆ ನೀಡಿ ಹಣ ಕಾದಿರಿಸಿದ್ದು, ರಾಜ್ಯ ಸರ್ಕಾರ ತನ್ನ ಪಾಲಿನ ಶೇ.50 ಸಹಭಾಗಿತ್ವದ ಭೂಮಿಯನ್ನು ಸ್ವಾಧೀನಪಡಿಸಿಕೊಡಬೇಕಿದೆ.

ಇದರೊಂದಿಗೆ ನೈಋತ್ಯ ರೈಲ್ವೆ ವಲಯದಲ್ಲಿ ಪ್ರಯಾಣಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿಕೊಡಲು ಬಜೆಟ್‌ನಲ್ಲಿ ಒಟ್ಟಾರೆ 3,516 ಕೋಟಿ ಹಣ ನೀಡಲಾಗಿದ್ದು, ಕಳೆದ ಬಜೆಟ್‌ನಲ್ಲಿ ನೀಡಲಾಗಿದ್ದ 2,990 ಕೋಟಿಗಿಂತ ಶೇ.18ರಷ್ಟು ಹೆಚ್ಚು ಹಣ ನೀಡಲಾಗಿದೆ.

ಕೇಂದ್ರ ಸರ್ಕಾರ ಈ ಹಣವನ್ನು ಮೈಸೂರು (ಬೆಳಗೊಳ)-ಕುಶಾಲ ನಗರ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ 1855 ಕೋಟಿ, ಮೈಸೂರು ನಗರ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ 50 ಕೋಟಿ, ನಿಲ್ದಾಣದಲ್ಲಿನ ಶೌಚಾಲಯ, ಪ್ಲಾಟ್ಫಾರಂ, ಲಿಫ್ಟ್ ವ್ಯವಸ್ಥೆ ಕಲ್ಪಿಸಲು, ಅಶೋಕ±‌ುರಂ ಮತ್ತು ಕಡಕೊಳ ರೈಲು ನಿಲ್ದಾಣದಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ 50 ಕೋಟಿ.

ಚಾಮರಾಜ ಪುರಂ, ನಂಜನಗೂಡು ಟೌನ್‌, ಕೆ.ಆರ್‌.ನಗರ, ಬದನಗುಪ್ಪೆ, ಕೊಣನೂರು, ಅರ್ಜುನಹಳ್ಳಿ, ಬೀರಹಳ್ಳಿ, ಕವಲಂದೆ, ಚಿನ್ನದಗುಡಿ ಹುಂಡಿ ಹಾಲ್r, ಅಕ್ಕಿ ಹೆಬ್ಟಾಳ್‌, ಸುಜಾತಪುರಂ ಹಾಲ್r, ತಾಂಡವಪುರ ಹಾಲ್r, ಕೆಆರ್‌ಎಸ್‌, ಬೆಳಗೊಳ, ಸಾಗರಕಟ್ಟೆ, ಹೊಸ ಅಗ್ರಹಾರ ನಿಲ್ದಾಣಗಳಲ್ಲಿ ಹೈಲೆವಲ್ ಪ್ಲಾಟ್ಫಾರಂಗಳ ನಿರ್ಮಾಣ.

ಅಶೋಕಪುರಂ – ಕಡಕೊಳ, ನಂಜನಗೂಡು ಟೌನ್‌- ಚಾಮರಾಜ ನಗರ ನಡುವೆ ಸಬ್‌ವೇಗಳ ನಿರ್ಮಾಣಕ್ಕಾಗಿ 5.70 ಕೋಟಿ. ಬೆಳಗೊಳ- ಸಾಗರಕಟ್ಟೆ, ಹೊಸ ಅಗ್ರಹಾರ- ಅಕ್ಕಿ ಹೆಬ್ಟಾಳು, ಅಕ್ಕಿ ಹೆಬ್ಟಾಳು- ಮಂದಗೆರೆ ನಡುವೆ ಸಬ್‌ವೇ ನಿರ್ಮಾಣಕ್ಕಾಗಿ 9.5 ಕೋಟಿ ಹಣ ಮೀಸಲಿಡಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.