ಬಲಿಷ್ಠ ರಾಷ್ಟ್ರ ನಿರ್ಮಿಸಲು ಒಟ್ಟಾಗಿ ಶ್ರಮಿಸೋಣ: ತಹಶೀಲ್ದಾರ್ ಕೆ.ಚಂದ್ರಮೌಳಿ
Team Udayavani, Jan 26, 2022, 6:46 PM IST
ಪಿರಿಯಾಪಟ್ಟಣ: ಮಹಾತ್ಮ ಗಾಂಧಿ, ಡಾ.ಅಂಬೇಡ್ಕರ್ರವರ ತ್ಯಾಗ ಬಲಿದಾನದ ಸ್ವಾತಂತ್ರ್ಯವನ್ನು ಎಲ್ಲರೂ ಜವಾಬ್ದಾರಿಯಿಂದ ಕಾಪಾಡಿಕೊಂಡು ಮುನ್ನಡೆಯಬೇಕಿದೆ ಎಂದು ತಹಶೀಲ್ದಾರ್ ಕೆ.ಚಂದ್ರಮೌಳಿ ತಿಳಿಸಿದರು.
ಪಟ್ಟಣದ ಗೋಣಿಕೊಪ್ಪ ರಸ್ತೆಯ ಜೂನೀಯರ್ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದ ಪ್ರಜೆಗಳಾದ ನಾವೆಲ್ಲರೂ ಜಾತಿ, ಧರ್ಮ, ಭಾಷೆ, ಪಂಗಡ, ಗಳೆಂಬ ಸಂಕುಚಿತ ಭಾವನೆಯಿಂದ ಹೊರಬರಬೇಕು ಆ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡಬೇಕಿದೆ. ದೇಶದ ಪ್ರತಿಯೊಬ್ಬ ಪ್ರಜೆಯೂ ನಮ್ಮ ಭವ್ಯ ಪರಂಪರೆ ಮತ್ತು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಿದೆ, 2020 ರಿಂದ ಹಿಂದೆಂದೂ ಕಂಡರಿಯದ ಕೊರೋನಾ ವೈರಸ್ ಎಂಬ ಮಹಾಮಾರಿ ಜಗತ್ತನ್ನೆ ನುಂಗುತ್ತಿರುವ ಸಮಯದಲ್ಲಿ ಕೊರೋನಾಕ್ಕೆ ಲಸಿಕೆಯನ್ನು ಕಂಡು ಹಿಡಿದು ಭಾರತ ಜಗತ್ತಿಗೆ ಮಾದರಿಯಾಗಿದೆ. ತಾಲ್ಲೂಕು ಆಡಳಿತವು ಕೂಡ ಜನತೆಗೆ ಅಗತ್ಯವಾದ ಸಲಹೆ ಸಹಕಾರ ನೀಡಿ ಕೊರೋನಾ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದೆ. ದೇಶದ ಪ್ರಗತಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಇವುಗಳನ್ನು ಸದ್ಬಳಕೆ ಮಾಡಿಕೊಂಡು ಪ್ರಗತಿಯತ್ತ ಸಾಗಬೇಕಿದೆ ಎಂದರು.
ಕಾರ್ಯಕ್ರಮದ ಮುಖ್ಯ ಭಾಷಣಕಾರ ಸಿಡಿಪಿಒ ಕುಮಾರ್ ಮಾತನಾಡಿ ಡಾ. ಅಂಬೇಡ್ಕರ್ ರವರು ದೇಶಕ್ಕೆ ಬಲಿಷ್ಠ ಸಂವಿಧಾನವನ್ನು ನೀಡುವ ಮೂಲಕ ಇಡೀ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಮಾಡಿದ್ದಾರೆ. ದೇಶದಲ್ಲಿ ಸಮಗ್ರ ಏಕತೆಯನ್ನು ಸಾರುವ ಉದ್ದೇಶದಿಂದ ಎಲ್ಲಾ ಜಾತಿ, ಧರ್ಮ ಒಳಗೊಂಡಂತೆ ಎಲ್ಲರೂ ಒಗ್ಗಟ್ಟಿನಿಂದ ಸಮಾನತೆಯಿಂದ ಸಂವಿಧಾನದ ಅಡಿಯಲ್ಲಿ ಕಾನೂನು ಹಾಗೂ ಜನಪ್ರತಿನಿಧಿಗಳು ಆಡಳಿತ ನಡೆಸುವಂತೆ ಮಾಡಿದ್ದಾರೆ ಎಂದರು.
ಶಾಸಕ ಕೆ.ಮಹದೇವ್ ಮಾತನಾಡಿ ಭಾರತ ಸಂಪತ್ಬರಿತ ರಾಷ್ಟ್ರ ಆದರೆ ಅದನ್ನು ಸದ್ಬಳಕೆ ಮಾಡಿಕೊಳ್ಳುವ ಮಟ್ಟಕ್ಕೆ ನಾವು ಬೆಳೆದಿಲ್ಲ, ದೇಶ ಆಡಳಿತದಲ್ಲಿ ಹಿನ್ನಡೆ ಅನುಭವಿಸುತ್ತಿದೆ ಇದಕ್ಕೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಸಮನ್ವಯದ ಕೊರತೆಯೇ ಕಾರಣ, ಎಲ್ಲರೂ ನೆಮ್ಮದಿಯಿಂದ ಬದುಕಲಿ ಎಂಬ ಕಾರಣಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನವನ್ನು ನಮಗೆ ಕೊಟ್ಟು, ವ್ಯಕ್ತಿಯ ಬೆಳವಣಿಗೆಗೆ ಬೇಕಾದ ಶಿಕ್ಷಣ, ಸಮಾನತೆ, ಸ್ವತಂತ್ರ, ಧರ್ಮ, ಸಂಸ್ಕೃತಿ, ಹಕ್ಕು ಮತ್ತು ಕರ್ತವ್ಯಗಳು ಹಾಗೂ ಸಮಾನ ಅವಕಾಶಗಳನ್ನು ನೀಡಿದ್ದಾರೆ ಆದರೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ನಾವು ವಿಫಲರಾಗಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ಪ್ರಸನ್ನ, ಅಧ್ಯಕ್ಷ ಮಂಜುನಾಥ ಸಿಂಗ್, ಟಿಎಪಿಸಿಎಂಎಸ್ ಅಧ್ಯಕ್ಷ ತಿಮ್ಮೇಗೌಡ, ಎಪಿಎಂಸಿ ಅಧ್ಯಕ್ಷ ಶಂಕರಪ್ಪ, ವೃತ್ತ ನಿರೀಕ್ಷಕರಾದ ಜಗದೀಶ್, ಪ್ರಕಾಶ್, ಪಿಎಸ್ಐ ಪುಟ್ಟರಾಜು ಎಇಇ ಮಂಜುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಪ್ರಸಾದ್ ವಿವಿಧ ಇಲಾಖೆಗಳ ಅಧಿಕಾರಿಗಳಾದ ಭಾರತಿ, ಚಿಕ್ಕಣ್ಣ, ಪ್ರಕಾಶ್, ಕರುಣಾಕರ್, ರಾಕೇಶ್, ಶೇಖರ್ ಡಾ.ಸೋಮಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ಕುಮಾರ್, ಸೇರಿದಂತೆ ಮತ್ತಿತರರು ಹಾಜರಿದದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.