ಪ್ರತಿ ವಾರ್ಡ್‌ಗೂ 75 ಲಕ್ಷ ಮೇಯರ್‌ ಅನುದಾನ


Team Udayavani, Jul 29, 2023, 3:27 PM IST

ಪ್ರತಿ ವಾರ್ಡ್‌ಗೂ 75 ಲಕ್ಷ ಮೇಯರ್‌ ಅನುದಾನ

ಮೈಸೂರು: ಅಭಿವೃದ್ಧಿ ಕೈಗೊಳ್ಳಲು ಮಹಾನಗರ ಪಾಲಿಕೆಯ 65 ವಾರ್ಡ್‌ಗೆ ತಲಾ 75 ಲಕ್ಷ ರೂ. ಮೇಯರ್‌ ಅನುದಾನ ನೀಡಲು ಶುಕ್ರವಾರ ನಡೆದ ಕೌನ್ಸಿಲ್‌ ಸಭೆಯಲ್ಲಿ ಒಪ್ಪಿಗೆ ದೊರೆಯಿತು. ಮಹಾನಗರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಭಾಂಗಣದಲ್ಲಿ ಮೇಯರ್‌ ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಸದಸ್ಯರ ಒತ್ತಾಯದ ಮೇರೆಗೆ ನಿರ್ಣಯ ಕೈಗೊಳ್ಳಲಾಯಿತು.

ಅನುದಾನ ನೀಡಿ: ಕಾರ್ಯಸೂಚಿ ಮಂಡನೆಗೂ ಮುನ್ನವೇ 1 ಕೋಟಿ ರೂ. ಅನುದಾನ ನೀಡುವಂತೆ ಬಿಜೆಪಿ, ಜೆಡಿಎಸ್‌ ಸದಸ್ಯರು ಮೇಯರ್‌ ಶಿವಕುಮಾರ್‌ ರನ್ನು ಒತ್ತಾಯಿಸಿದರು. 2022-23ರ ಅವಧಿಯಲ್ಲಿ ನೀಡಿರುವ 75 ಲಕ್ಷ ರೂ. ಅನುದಾನಕ್ಕೆ ಈಗ ಟೆಂಡರ್‌ ಪೂರ್ಣಗೊಂಡಿದೆ. ಪಾಲಿಕೆ ಈ ಅವಧಿ ಪೂರ್ಣಗೊಳ್ಳಲು ಕೆಲವೇ ತಿಂಗಳು ಬಾಕಿಯಿದ್ದು, ಈಗ ಅನುದಾನ ನೀಡಿದರೆ ಮಾತ್ರ ಬಳಸಲು ಸಾಧ್ಯವಾಗುತ್ತದೆ ಎಂದು ಆಗ್ರಹಿಸಿದರು.

ಈ ಸಂಬಂಧ ಪ್ರತಿಕ್ರಿಯೆ ನೀಡಿದ ಪಾಲಿಕೆ ನೂತನ ಆಯುಕ್ತ ಅಷಾದ್‌ ಉರ್‌ ರೆಹಮಾನ್‌ ಷರೀಫ್, ನಿನ್ನೆಯಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ಅಧಿಕಾರಿಗಳ ಸಭೆ ಮಾಡಲು ಸಾಧ್ಯವಾಗಿಲ್ಲ. ಪಾಲಿಕೆ ಆರ್ಥಿಕ ಪರಿಸ್ಥಿತಿ ಪರಿಶೀಲಿಸಲು ಸಮಯಬೇಕಾಗುತ್ತದೆ. ತಕ್ಷಣಕ್ಕೆ 25 ಲಕ್ಷ ರೂ. ನೀಡಲಾಗುವುದು. ಮುಂದಿನ ವಾರವೇ ಮತ್ತೂಂದು ಸಭೆ ಕರೆಯುವುದಾಗಿ ಹೇಳಿದರು.

ಅನುದಾನ ಕೇಳಿ: ಇದಕ್ಕೆ ಒಪ್ಪದ ಸದಸ್ಯರು ಈಗ 75 ಲಕ್ಷ ರೂ. ನೀಡಿ, ಮುಂದಿನ ಸಭೆಯಲ್ಲಿ 25 ಲಕ್ಷ ರೂ. ನೀಡುವಂತೆ ಒತ್ತಾಯಿಸಿದರು. ಬಿಜೆಪಿ ಸದಸ್ಯ ರಮೇಶ್‌ 50 ಲಕ್ಷ ರೂ. ನೀಡಿದರೆ ಸಾಕೆಂದು ಪ್ರತಿಕ್ರಿಯಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಕಾಂಗ್ರೆಸ್‌ ಸದಸ್ಯ ಅಯೂಬ್‌ ಖಾನ್‌ ಪಾಲಿಕೆ ಆರ್ಥಿಕ ಸ್ಥಿತಿ ಗಮನದಲ್ಲಿರಿಸಿಕೊಂಡು ಅನುದಾನ ಕೇಳಬೇಕಿದೆ ಎಂದರು. ಈ ವೇಳೆಯೂ ಬಿಜೆಪಿ, ಜೆಡಿಎಸ್‌ ಸದಸ್ಯರು 1 ಕೋಟಿ ರೂ. ನೀಡುವಂತೆ ಆಗ್ರಹಿಸಿದರು. ಆಯುಕ್ತ ರೊಂದಿಗೆ ಚರ್ಚಿಸಿದ ಮೇಯರ್‌ ಶಿವಕುಮಾರ್‌ ಪ್ರತಿ ಸದಸ್ಯರಿಗೆ 75 ಲಕ್ಷ ರೂ. ನೀಡುವುದಾಗಿ ಪ್ರಕಟಿಸಿ, ಶೀಘ್ರದಲ್ಲಿ ಟೆಂಡರ್‌ ಕರೆದು ವರ್ಕ್‌ ಆರ್ಡರ್‌ ನೀಡುವಂತೆ ಸೂಪರಿಂಟೆಂಡೆಂಟ್‌ ಎಂಜಿನಿಯರ್‌ ಅವರಿಗೆ ಸೂಚಿಸಿದರು.

ಅನುಪಯುಕ್ತ ಟ್ಯಾಬ್‌: ಪಾಲಿಕೆ ಸದಸ್ಯರಿಗೆ ನೀಡಿರುವ ಟ್ಯಾಬ್‌ ನಿರ್ವಹಣೆ ಕುರಿತಂತೆ ಸದಸ್ಯ ಕೆ.ವಿ.ಶ್ರೀಧರ್‌ ಸಭೆಯ ಗಮನ ಸೆಳೆದರು. ಟ್ಯಾಬ್‌ ಅನುಪಯುಕ್ತವಾಗಿದ್ದು, ಜನತೆ ಹಣ ವ್ಯರ್ಥವಾಗುತ್ತಿದೆ. ಸರ್ಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು. ಈ ವೇಳೆ ಪರ ವಿರೋಧ ವ್ಯಕ್ತವಾಯಿತು.

ಅಜೆಂಡಾಗೆ ಆಗ್ರಹ: ಅಜೆಂಡಾ ನೀಡದೆ ಸಭೆ ನಡೆಸುತ್ತಿರುವುದಕ್ಕೆ ಜೆಡಿಎಸ್‌ ಸದಸ್ಯ ಎಸ್‌ಬಿಎಂ ಮಂಜು ಆಕ್ರೋಶ ವ್ಯಕ್ತಪಡಿಸಿ ಕೌನ್ಸಿಲ್‌ ಕಾರ್ಯದರ್ಶಿ ಉತ್ತರಿಸಬೇಕೆಂದು ಒತ್ತಾಯಿಸಿದರು. ಮೇಯರ್‌ ಶಿವಕುಮಾರ್‌ ಮಾತನಾಡಿ, ನನ್ನ ಅವಧಿ ಸೆಪ್ಟೆಂಬರ್‌ಗೆ ಮುಗಿಯಲಿದೆ. ಮುಂದಿನ ಸಭೆಯಲ್ಲಿ ಅಜೆಂಡದ ಮೇಲೆ ಚರ್ಚೆ ಮಾಡೋಣ ಎಂದು ಸಮಾಧಾನಪಡಿಸಿದರು.

ಹೆಚ್ಚುವರಿ ಪೌರ ಕಾರ್ಮಿಕರ ನೇಮಕ: ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ಕೊರತೆ ಇದೆ. 5ರಿಂದ 10 ಪೌರಕಾರ್ಮಿಕರು ಪ್ರತಿನಿತ್ಯ ಕರ್ತವ್ಯಕ್ಕೆ ಗೈರಾಗುತ್ತಿದ್ದಾರೆ. ಇದರಿಂದ ಕಸ ವಿಲೇವಾರಿ ಕಷ್ಟವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆಯೂಬ್‌ ಖಾನ್‌ ಸಭೆಯ ಗಮನಸೆಳೆದು ಪ್ರಥಮ ಸ್ಥಾನ ಪಡೆಯಲು ಎಲ್ಲರೂ ಸಂಘಟಿತರಾಗಿ ಕೆಲಸ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ಮೇಯರ್‌ ಶಿವಕುಮಾರ್‌ ಪ್ರತಿಕ್ರಿಯಿಸಿ, ಇಂಧೋರ್‌ ಅಧ್ಯಯನ ಪ್ರವಾಸದ ವೇಳೆ ಪೌರ ಕಾರ್ಮಿಕರು 2 ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರು ವುದು ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಸುದೀರ್ಘ‌ವಾಗಿ ಚರ್ಚೆ ಮಾಡಿದ್ದೇವೆ. ಪ್ರತಿ ವಾರ್ಡಿಗೆ ಮೂವರು ಪೌರಕಾರ್ಮಿಕರನ್ನು ಕೊಡಬಹುದು. ಈ ಬಗ್ಗೆ ಚರ್ಚಿಸಿ ನಿರ್ಣಯಿಸುವುದಾಗಿ ತಿಳಿಸಿದರು.

ಆಡಳಿತ ಪಕ್ಷದ ನಾಯಕರ ನೇಮಕ: ಇದಕ್ಕೂ ಮುನ್ನ ಸಭೆ ಯಲ್ಲಿ ಆಡಳಿತ ಪಕ್ಷದ ನಾಯಕರನ್ನಾಗಿ ವಾರ್ಡ್‌ ಸಂಖ್ಯೆ 55ರ ಸದಸ್ಯ ಮ.ವಿ.ರಾಮಪ್ರಸಾದ್‌ರನ್ನು ನೇಮಕ ಮಾಡಲಾಯಿತು. ಉಪ ಮೇಯರ್‌ ಡಾ.ಜಿ.ರೂಪಾ, ಶಾಸಕ ಟಿ.ಎಸ್‌. ಶ್ರೀವತ್ಸ ಮತ್ತಿತರರು ಇದ್ದರು.

 

ಟಾಪ್ ನ್ಯೂಸ್

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

GRUHALAKHMI

Congress Guarantee: ರಾಜ್ಯದ 1.82 ಲಕ್ಷ ಗೃಹಲಕ್ಷ್ಮೀಯರಿಗೆ ಇನ್ನೂ 1 ಕಂತೂ ಸಿಕ್ಕಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.