![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 25, 2021, 9:53 AM IST
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಅರಣ್ಯ-ವನ್ಯಜೀವಿಗಳ ಸಂರಕ್ಷಣೆಗಾಗಿ ವಿವಿಧ ವಲಯಗಳಲ್ಲಿ ಅಳವಡಿಸಿದ್ದ ಟ್ರ್ಯಾಪಿಂಗ್ ಕ್ಯಾಮರಾಗಳನ್ನು ಕಳ್ಳತನ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ನಾಗರಹೊಳೆ ಉದ್ಯಾನದೊಳಗೆ ಅಕ್ರಮ ಪ್ರವೇಶಿಸಿರುವ ಕಳ್ಳರು ವೀರನಹೊಸಳ್ಳಿ, ಹುಣಸೂರು, ಆನೆಚೌಕೂರು ಹಾಗೂ ಕಲ್ಲಹಳ್ಳ ವಲಯಗಳ ಬಫರ್ ಝೋನ್ನಲ್ಲಿ ಅಳವಡಿಸಿದ್ದ ತಲಾ 2 ರಂತೆ 8 ಕ್ಯಾಮರಾಗಳನ್ನು ಹೊತ್ತೊಯ್ದಿದ್ದಾರೆ.
ಅರಣ್ಯ ಸಿಬ್ಬಂದಿಗಳು ಕ್ಯಾಮರಾದಲ್ಲಿನ ಚಿಪ್ ಸಂಗ್ರಹಣೆಗೆ ತೆರಳಿದ್ದ ವೇಳೆ ಕಳ್ಳತನವಾಗಿರುವುದು ಪತ್ತೆಯಾಗಿದೆ. ಕಲ್ಲಹಳ್ಳ ಹೊರತು ಪಡಿಸಿ ಉಳಿದ ವಲಯಗಳಲ್ಲಿ ಬಫರ್ ಝೋನ್ನಲ್ಲಿ ಕ್ಯಾಮರಾ ಕಳ್ಳತನ ಮಾಡಿರುವುದು ಕಂಡು ಬಂದಿದೆ.
ಇದನ್ನೂ ಓದಿ: ಸಕ್ಸಸ್ ಸ್ಟೋರಿ : ಡಾಕ್ಟರ್ ಆಫ್ ಫಿಲಾಸಫಿ ಪಡೆದ ದೇಶದ ಮೊದಲ ತೃತೀಯ ಲಿಂಗಿ ಮಾನವಿ.!
ಉದ್ಯಾನದಲ್ಲಿ ಅಕ್ರಮ ಭೇಟೆ ನಡೆಸುವ ಹಾಗೂ ಮರಗಳ್ಳತನ ಮಾಡುವ ಖದೀಮರು ಈ ಕೃತ್ಯ ನಡೆಸಿರಬಹುದೆಂದು ಶಂಕಿಸಲಾಗಿದೆ.
ಈ ಸಂಬಂಧ ಹುಣಸೂರು ಗ್ರಾಮಾಂತರ ಠಾಣೆ, ಕೊಡಗಿನ ಪೊನ್ನಂಪೇಟೆ ಠಾಣೆಗಳಲ್ಲಿ ಆಯಾ ವಲಯ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಇಲಾಖೆ ವತಿಯಿಂದಲೂ ಕ್ಯಾಮರಾ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ಡಿಸಿಎಫ್ ಮಹೇಶ್ಕುಮಾರ್ ಉದಯವಾಣಿಗೆ ತಿಳಿಸಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.