ಸುಟ್ಟಿದ್ದ ತಂಬಾಕು ಬೆಳೆ “ಹಾಲು ಸಕ್ಕರೆ’ ಆಯ್ತು!


Team Udayavani, Jun 24, 2019, 3:00 AM IST

suttida

ಹುಣಸೂರು: ಹಾಲುಗೆನ್ನೆಯ ಕಂದಮ್ಮಗಳಿಂದ ಹಿಡಿದು ವಯೋವೃದ್ಧರಿಗೂ ಹಾಲು ಪೌಷ್ಟಿಕಾಂಶಯುಕ್ತವಾಗಿದ್ದು, ಕಾಫಿ, ಚಹಾ ಸೇರಿದಂತೆ ವಿವಿಧ ಖಾದ್ಯಗಳಿಗೆ ಹಾಲು ಅತ್ಯಗತ್ಯವಾಗಿದೆ. ಆದರೆ, ಇದೀಗ ಹಾಲು ಹಾಗೂ ಸಕ್ಕರೆ ನೀರಿನ ಮಿಶ್ರಣವು ತಂಬಾಕು ಬೆಳೆಗಾರರ ಸಂಜೀವಿನಿಯಾಗಿದೆ. ಸುಟ್ಟು ಹೋಗುತ್ತಿದ್ದ ತಂಬಾಕಿಗೆ ಹಾಲು-ಸಕ್ಕರೆ ಮಿಶ್ರಣದ ಜೀವಾಮೃತ ಸಿಂಪಡಿಸಿದ್ದಕ್ಕೆ ತಂಬಾಕು ಬೆಳೆಗೆ ಇದೀಗ ಜೀವ ಕಳೆ ಬಂದಿದೆ.

ಐಟಿಸಿ ಟ್ಯಾಬಾಕೋ ಕಂಪನಿಯ ಕೃಷಿ ತಜ್ಞರು ತಮ್ಮ ಪ್ರಯೋಗಗಳ ಮೂಲಕ ಮತ್ತೆ ತಂಬಾಕು ಬೆಳೆಯಲ್ಲಿ ಜೀವ ಕಳೆ ತುಂಬುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಚಿಂತೆಯಲ್ಲಿದ್ದ ರೈತನ ಮೊಗದಲ್ಲಿ ಮಂದಹಾಸ ಮೂಡಿಸಿದ್ದಾರೆ.

ತಾಲೂಕಿನ ಗಾವಡಗೆರೆ ಹೋಬಳಿ ಶೀರೇನಹಳ್ಳಿಯ ತಂಬಾಕು ಬೆಳೆಗಾರ ಕುಮಾರ್‌ ಅವರ ಮಕ್ಕಳು ಅರಿಯದೇ ಜೂ.12 ರಂದು ಕ್ರಿಮಿನಾಶಕದ ಬದಲು ಕಳೆನಾಶಕ ಸಿಂಪಡಿಸಿದ್ದರಿಂದ 4 ಎಕರೆ ತಂಬಾಕು ಬೆಳೆಯು ಸಂಪೂರ್ಣ ಸುಟ್ಟು ಹೋಗುವ ಪರಿಸ್ಥಿತಿಗೆ ತಲುಪಿತ್ತು. ಬೆಳೆಗಾರನಂತೂ ಲಕ್ಷಾಂತರ ರೂ. ನಷ್ಟವಾಯಿತೆಂಬ ಚಿಂತೆಯಿಂದ ಕಂಗಾಲಾಗಿದ್ದರು.

“ಉದಯವಾಣಿ’ ಫಲಶೃತಿ: ಕಳೆನಾಶಕ ಸಿಂಪಡಿಸಿದ್ದರಿಂದ ತಂಬಾಕು ಬೆಳೆ ಸುಟ್ಟಿರುವ ಕುರಿತು ಉದಯವಾಣಿಯಲ್ಲಿ ವರದಿ ಪ್ರಕಟಿಸಲಾಗಿತ್ತು. ಪತ್ರಿಕೆಯ ಮೂಲಕ ವಿಷಯ ತಿಳಿದ ಐಟಿಸಿ ಕಂಪನಿಯ ಮಾರುಕಟ್ಟೆ ವ್ಯವಸ್ಥಾಪಕ ಪೂರ್ಣೇಶ್‌, ಸಹಾಯಕ ವ್ಯವಸ್ಥಾಪಕಿ ಸುಮಾ, ಕ್ಷೇತ್ರ ವಿಸ್ತಾರಣಾಧಿಕಾರಿ ಡಿ.ಪಿ. ಮಂಜು, ಸಹಾಯಕ ಅಧಿಕಾರಿ ಸೂರಣ್ಣ ರೈತನ ಜಮೀನಿಗೆ ಭೇಟಿ ನೀಡಿ ಕಂಪನಿಯ ಹಿರಿಯ ಅಧಿಕಾರಿ ರವೀಶ್‌ ಮತ್ತಿತರರ ತಜ್ಞರ ಮಾರ್ಗದರ್ಶನದಲ್ಲಿ ಕೈಗೊಂಡ ಕ್ರಮಗಳಿಂದಾಗಿ ಬೆಳೆ ಯಥಾಸ್ಥಿತಿಗೆ ಬರುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಸಕ್ಕರೆ, ಹಾಲಿನ ಔಷಧೋಪಚಾರ: ಸುಟ್ಟು ಹೋಗಿದ್ದ ತಂಬಾಕು ಬೆಳೆಗೆ 10 ಲೀಟರ್‌ ನೀರಿಗೆ 200 ಗ್ರಾಂ ಸಕ್ಕರೆ ಹಾಗೂ 20 ಎಂಎಲ್‌ ಹಸುವಿನ ಹಾಲು ಮಿಶ್ರಣದಿಂದ ಜೀವಾಮೃತ ತಯಾರಿಸಿ ವಾರಕಾಲ ಗಿಡಗಳಿಗೆ ಸಿಂಪಡಿಸಿ, ಹೊಲಕ್ಕೆ ತುಂತುರು ಹನಿ ನೀರು ಹಾಯಿಸಿ ಗಿಡಗಳನ್ನು ಉಪಚರಿಸಲು ಕೃಷಿ ತಜ್ಞರು ಸಲಹೆ ನೀಡಿದ್ದರು.

ಹತ್ತಾರು ಬಾರಿ ತಜ್ಞರೇ ಜಮೀನಿಗೆ ತೆರಳಿ ಮಾರ್ಗದರ್ಶನ ನೀಡಿದ್ದಂತೆ ಕ್ರಮಬದ್ಧ ಸಿಂಪಡಣೆಯಿಂದ ವಾರದಲ್ಲೇ ತಂಬಾಕು ಎಲೆಗಳು ಮತ್ತೆ ಹಸಿರು ತುಂಬಿಕೊಂಡು ಗರಿಗೆದರಿದವು. ನೋಡು ನೋಡುತ್ತಿದ್ದಂತೆ ಮತ್ತೆ ತಂಬಾಕು ಗಿಡಗಳು ಮೊದಲನೆ ಸ್ಥಿತಿಗೆ ಬಂದಿದ್ದು, ರೈತ ಕುಮಾರ್‌ ಕುಟುಂಬದವರ ಮೊಗದಲ್ಲಿ ಸಂತಸ ತಂದಿದೆ. ಈ ವಿಸ್ಮಯವನ್ನು ತಂಬಾಕು ಬೆಳೆಗಾರರು ಕುಮಾರ್‌ ಅವರ‌ ಜಮೀನಿಗೆ ಭೇಟಿ ನೀಡಿ ವೀಕ್ಷಿಸುತ್ತಿದ್ದಾರೆ.

ತಂಬಾಕು ಬೆಳೆಗೆ ರೈತರೇ ಮಾಡಿಕೊಂಡಿದ್ದ ಅನಾಹುತ ಕುರಿತು ಪತ್ರಿಕಾವರದಿಯನ್ನು ಗಮನಿಸಿ ಐಟಿಸಿ ಕಂಪನಿಯ ಹಿರಿಯ ಅಧಿಕಾರಿ ರವೀಶ್‌ ಮಾರ್ಗದರ್ಶನದಲ್ಲಿ ಹೊಲಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿತ್ತು. ಸಕ್ಕರೆ-ಹಾಲಿನ ದ್ರಾವಣ ಸಿಂಪಡಿಸಿ ಬೆಳೆ ಉಳಿಸುವ ಪ್ರಥಮ ಪ್ರಯತ್ನ ಫಲ ನೀಡಿದ್ದು, ಇದೀಗ ತಂಬಾಕು ಬೆಳೆ ಮೊದಲಿನ ಸ್ಥಿತಿಗೆ ಮರಳಿದೆ.
-ಸುಮಾ, ಕೃಷಿ ತಜ್ಞೆ, ಐಟಿಸಿ ಕಂಪನಿ

ಕುಟುಂಬದ ಆಧಾರವಾಗಿದ್ದ ತಂಬಾಕು ಬೆಳೆ ನಮ್ಮ ತಪ್ಪಿನಿಂದಾಗಿ ಹಾನಿಗೊಳಗಾಗಿದ್ದಕ್ಕೆ ಆತಂಕಗೊಂಡಿದ್ದೆವು. ಪತ್ರಿಕೆ ಮೂಲಕ ವಿಷಯ ತಿಳಿದು ಐಟಿಸಿ ಕಂಪನಿಯ ಕೃಷಿ ತಜ್ಞರಾದ ಪೂರ್ಣೇಶ್‌, ಸುಮಾ ಅವರ ಮಾರ್ಗದರ್ಶನದಂತೆ ಸಕ್ಕರೆ ಹಾಲು ಮಿಶ್ರಿತ ದ್ರಾವಣ ಸಿಂಪಡಿಸಿದ್ದರಿಂದ ಶೇ.70 ರಿಂದ 80 ರಷ್ಟು ಬೆಳೆ ಯಥಾಸ್ಥಿತಿಗೆ ಬಂದಿದೆ. ಸಕಾಲದಲ್ಲಿ ನೆರವಾದ ಐಟಿಸಿ ಕಂಪನಿ ಅಧಿಕಾರಿಗಳ ವೃಂದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.
-ಕುಮಾರ್‌, ಸೀರೇನಹಳ್ಳಿ ತಂಬಾಕು ಬೆಳೆಗಾರ

* ಸಂಪತ್‌ ಕುಮಾರ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.