ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಜನಾಭಿಪ್ರಾಯ ಸಂಗ್ರಹ


Team Udayavani, Feb 22, 2019, 7:26 AM IST

m3-bjp.jpg

ಮೈಸೂರು: ಹಾಲಿ ಸಂಸದರಿಗೆ ಟಿಕೆಟ್‌ ನೀಡುವ ವಿಚಾರದಲ್ಲಿ ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಪಕ್ಷದ ಸಂಸದೀಯ ಮಂಡಳಿ ಸಭೆಯಲ್ಲಿ ಚರ್ಚಿಸಿ ಆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸಂಸದ ಅವಿನಾಶ್‌ ರಾಯ್‌ ಖನ್ನಾ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್‌ ಹಂಚಿಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದಲ್ಲದೆ, ಅಭ್ಯರ್ಥಿ ಆಯ್ಕೆ ಸಂಬಂಧ ಜನಾಭಿಪ್ರಾಯವನ್ನೂ ಸಂಗ್ರಹಿಸಲಾಗುವುದು ಎಂದರು. ಐದು ವರ್ಷಗಳ ಕಾಲ ಭ್ರಷ್ಟಾಚಾರ ರಹಿತ, ಸ್ವತ್ಛ, ದಕ್ಷ ಆಡಳಿತ ನೀಡಿರುವ ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು  ವಿಶ್ವಾಸ ವ್ಯಕ್ತಪಡಿಸಿದರು.

ನೇರ ಸಂಪರ್ಕ: ಪ್ರಪಂಚದ ಅತಿದೊಡ್ಡ ಪಕ್ಷವಾಗಿರುವ ಬಿಜೆಪಿಯನ್ನು ಸೋಲಿಸುವ ಶಕ್ತಿ ಕಾಂಗ್ರೆಸ್‌ಗೆ ಇಲ್ಲ. ಹಿಂದೆಲ್ಲಾ ಸರ್ಕಾರದ ಹಗರಣಗಳ ಬಗ್ಗೆಯೇ ಚರ್ಚೆ ನಡೆಯುತ್ತಿತ್ತು. ಆದರೆ, ಕಳೇದ ಐದು ವರ್ಷಗಳಿಂದ ನರೇಂದ್ರಮೋದಿ ಸರ್ಕಾರದ ಯೋಜನೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಜನ ಸಾಮಾನ್ಯರೊಂದಿಗೆ ನೇರ ಸಂಪರ್ಕ ಹೊಂದಿರುವ ಪ್ರಧಾನಿ ನರೇಂದ್ರಮೋದಿ ಅವರನ್ನು ದೇಶದ ಜನತೆ ಬೆಂಬಲಿಸಲಿದ್ದಾರೆ ಎಂದರು.

ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಸೋತಿರುವುದರಿಂದ ಧೃತಿಗೆಟ್ಟಿಲ್ಲ. ರಾಜಸ್ಥಾನದಲ್ಲಿ ನೋಟಾಗೆ 4.50 ಲಕ್ಷ ಮತ ಚಲಾವಣೆಯಾಗಿದೆ. ಹೀಗಾಗಿ ಅಲ್ಪ ಅಂತರದಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಎಂದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮೋದಿ ನಾಮಬಲವಿತ್ತು. ಈಗ ಮೋದಿ ನಾಮಬಲದೊಂದಿಗೆ ಅಭಿವೃದ್ಧಿ ಕಾರ್ಯಕ್ರಮಗಳ ಬಲವೂ ಸೇರಿಕೊಂಡಿದೆ. 

ಸಲಹೆ ನೀಡಿ: ಪ್ರಧಾನಿ ನರೇಂದ್ರ ಮೋದಿ ಜನರ ಪರವಾಗಿ ಇರುವಂತಹ ಪ್ರಣಾಳಿಕೆ ತಯಾರು ಮಾಡಬೇಕೆಂಬ ಉದ್ದೇಶ ಹೊಂದಿದ್ದು, ಅದಕ್ಕಾಗಿ ಎಲ್ಲಾ ರಾಜ್ಯಗಳಲ್ಲೂ ಜನರೊಂದಿಗೆ ಸಂವಾದ ನಡೆಸಿ ಸಲಹೆ ಪಡೆಯಲಾಗುತ್ತಿದೆ. ಜನರು ಪತ್ರ, ದೂರವಾಣಿ ಕರೆ, ಇ-ಮೇಲ್‌ ಮೂಲಕ ಸಲಹೆ ಕೊಡಬಹುದು ಎಂದರು.

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಯೋಧರ ಮೇಲೆ ನಡೆದ ಉಗ್ರರ ಆತ್ಮಾಹುತಿ ದಾಳಿಗೂ ಚುನಾವಣೆಗೂ ಯಾವುದೇ ಸಂಬಂಧ ಇಲ್ಲ. ಭಯೋತ್ಪಾದಕ ಸಂಘಟನೆಗಳನ್ನು ಮಟ್ಟ ಹಾಕುವ ವಿಚಾರದಲ್ಲಿ ಯಾವ ರಾಜಕೀಯವು ಇಲ್ಲ ಎಂದರು.

ಶಾಸಕ ಭರತ್‌ ಶೆಟ್ಟಿ, ರಾಜ್ಯ ಬಿಜೆಪಿ ವಕ್ತಾರ ಗೋ.ಮಧುಸೂದನ್‌, ವಿಧಾನಪರಿಷತ್‌ ಮಾಜಿ ಸದಸ್ಯ ತೋಂಟದಾರ್ಯ, ನಗರ ಬಿಜೆಪಿ ಅಧ್ಯಕ್ಷ ಡಾ.ಮಂಜುನಾಥ್‌, ಸಂಚಾಲಕ ಎನ್‌.ವಿ.ಫ‌ಣೀಶ್‌, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ. ರಾಜೇಂದ್ರ, ಎಸ್‌ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ನಾಗರಾಜ ಮಲ್ಲಾಡಿ,ಮಾಧ್ಯಮ ಪ್ರಮುಖ್‌ ಪ್ರಭಾಕರ ಶಿಂಧೆ, ನಗರ ಪ್ರಧಾನ ಕಾರ್ಯದರ್ಶಿ ಎಚ್‌.ವಿ.ರಾಜೀವ್‌, ಸತೀಶ್‌ ಹಾಜರಿದ್ದರು. 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.