![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 27, 2019, 3:00 AM IST
ಪಿರಿಯಾಪಟ್ಟಣ: ಜಲಕ್ಷಾಮ ನಿಯಂತ್ರಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಕುಸಿಯುತ್ತಿರುವ ಅಂತರ್ಜಲವನ್ನು ಸಂರಕ್ಷಿಸದಿದ್ದರೆ ಅನೇಕ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಚ್.ಬಿ.ಮಂಜುನಾಥ್ ಎಚ್ಚರಿಸಿದರು. ತಾಲೂಕಿನ ಕಿರನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಆಯೋಜಿಸಿದ್ದ ಜಲಶಕ್ತಿ ಮತ್ತು ಜಲಾಮೃತ ಅಭಿಯಾನದಲ್ಲಿ ಅವರು ಮಾತನಾಡಿದರು.
ನೀರಿನ ಸಮಸ್ಯೆ ಅರಿತು ಕೇಂದ್ರ ಸರ್ಕಾರ ಜಲಶಕ್ತಿ ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಹನಿ ನೀರಿನ ಸದ್ಬಳಕೆ ಮಾಡುವುದು ಈ ಯೋಜನೆ ಉದ್ದೇಶವಾಗಿದೆ. ಬೇಸಿಗೆ ಸಂದರ್ಭದಲ್ಲಿ ನೀರಿನ ಕೊರತೆ ನೀಗಿಸಲು ಮಳೆ ನೀರು ಕೊಯ್ಲು ವ್ಯವಸ್ಥೆಗೆ ಆದ್ಯತೆ ನೀಡಬೇಕು. ನೀರಿನ ಕೊರತೆ ನೀಗಿಸುವ ಉದ್ದೇಶದಿಂದ ದೇಶಾದ್ಯಂತ ಜನಶಕ್ತಿ ಮತ್ತು ಜೀವಾಮೃತ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರತಿಯೊಬ್ಬರಿಗೂ ನೀರಿನ ಮಹತ್ವ ತಲುಪಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಶಕ್ತಿ ಮತ್ತು ಜಲಾಮೃತ ಅಭಿಯಾನ ಆಯೋಜಿಸಲಾಗುವುದು ಎಂದು ತಿಳಿಸಿದರು. ಪಶುಪಾಲನೆ ಇಲಾಖೆ ಸಹಾಯಕ ಅಧಿಕಾರಿ, ಕಾರ್ಯಕ್ರಮದ ನೋಡಲ್ ಅಧಿಕಾರಿ ಸಂದೇಶ್ ಮಾತನಾಡಿ, ಹೆಚ್ಚುತ್ತಿರುವ ಅತಿವೃಷ್ಟಿ ಮತ್ತು ಅನಾವೃಷ್ಟಿಯಂತ ತುರ್ತು ಸಂದರ್ಭದಲ್ಲಿ ಸಂತ್ರಸ್ತರಿಗೆ ನೆರವಾಗಲು ನಿಧಿ ಸಂಗ್ರಹಿಸಲಾಗುತ್ತಿದೆ.
ಪಶುಪಾಲನಾ ಇಲಾಖೆಯಲ್ಲಿ ಹೈನುಗಾರಿಕೆ ಉತ್ತೇಜಿಸಲು ಇಲಾಖೆ ವತಿಯಿಂದ ರೈತರಿಗೆ ಪಶು, ಮೇವು ವಿತರಣೆ, ಕೊಟ್ಟಿಗೆ ನಿರ್ಮಾಣ ಮತ್ತಿತರ ಸೌಲಭ್ಯ ಕಲ್ಪಿಸಲಾಗಿದೆ. ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಸಲಹೆ ನೀಡಿದರು. ತೋಟಗಾರಿಕೆ ಇಲಾಖೆ ಸಹಾಯಕಿ ವಿದ್ಯಾ ಮಾತನಾಡಿ, ಇಲಾಖಾ ವತಿಯಿಂದ ರೈತರಿಗೆ ಬಾಳೆ, ಪೊಪ್ಪಾಯಿ, ತೆಂಗು, ಹನಿ ನೀರಾವರಿ ಇನ್ನಿತರ ಉದ್ದೇಶಗಳಿಗೆ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಸುಧಾ, ಉಪಾಧ್ಯಕ್ಷೆ ಅನಿತಾ, ಸದಸ್ಯರಾದ ಕೆ.ಪಿ.ಪವನ್ ಕುಮಾರ್, ಪರಮೇಶ್, ರುಕ್ಮಿಣಮ್ಮ, ಶಿಲ್ಪಾ, ಶಿಕ್ಷಕರಾದ ಮಮತಾ, ಶ್ರೀಧರ್ ಇತರರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.