![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 10, 2019, 4:43 PM IST
ಮೈಸೂರು: ಕಳೆದ ಏಳೆಂಟು ವರ್ಷಗಳಿಂದ ಮೂಲೆಗುಂಪಾಗಿದ್ದ ಶ್ರೀ ಬಸವೇಶ್ವರ ಸಾಮಾಜಿಕ ಪರಿಷ್ಕರಣೆ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಸದ್ಯದಲ್ಲಿಯೇ ಸ್ವಂತ ಕಟ್ಟಡ ಹೊಂದುವ ನಿರೀಕ್ಷೆಯಲ್ಲಿದೆ.
ಸಮಾನತೆ ಮತ್ತು ಸಮಾಜಿಕ ಕ್ರಾಂತಿಯ ಹರಿಕಾರರಾದ ಬಸವಣ್ಣನವರ ತತ್ವ ಮತ್ತು ಸಿದ್ಧಾಂತ ಹಾಗೂ 12 ನೇ ಶತಮಾನದಲ್ಲಿ ಶರಣರು ವಚನ ಸಾಹಿತ್ಯಕ್ಕೆ ಕೊಟ್ಟ ಕೊಡುಗೆ, ವಚನ ಸಾಹಿತ್ಯದ ಮಹತ್ವ ಅರಿಯಲು, 2011ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬಸವೇಶ್ವರ ಸಾಮಾಜಿಕ ಪರಿಷ್ಕರಣೆ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರವನ್ನು ಆರಂಭಿಸಲಾಗಿತ್ತು. ಆದರೆ, ಸಮರ್ಪಕ ನಿರ್ವಹಣೆ, ಕ್ರಿಯಾಶೀಲತೆ ಹಾಗೂ ಸಮರ್ಥ ನೇತರರ ಕೊರತೆಯಿಂದ ಮೂಲೆಗುಂಪಾಗಿತ್ತು.
ಇತ್ತೀಚಿನ ದಿನಗಳಲ್ಲಿ ವಚನ ಸಾಹಿತ್ಯದ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆ ಮಾಡಲು ಹೆಚ್ಚು ಆಸಕ್ತಿ ವಹಿಸುವವರ ಸಂಖ್ಯೆ ಹೆಚ್ಚಾಗಿದ್ದು, ಜಗತ್ತಿನ ಅಮೆರಿಕ, ಯುರೋಪ್ ದೇಶಗಳಲ್ಲಿ ವಚನ ಸಾಹಿತ್ಯ ಹೆಚ್ಚು ಪ್ರಖ್ಯಾತಿ ಪಡೆದುಕೊಂಡಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಮತ್ತು ವಿಶ್ವವಿದ್ಯಾಲಯ ಬಸವ ಅಧ್ಯಯನ ಪೀಠಕ್ಕೆ ನೂತನ ಕಟ್ಟಡವನ್ನು ನಿರ್ಮಿಸಲು ಮುಂದಾ ಗಿದೆ. ಇದೇ ತಿಂಗಳ ಮೇ 11ರಂದು ಶನಿವಾರ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನಡೆಯಲಿದೆ.
ಒಂದು ಕೊಠಡಿಗೆ ಸೀಮಿತವಾಗಿದ್ದ ಕೇಂದ್ರ: ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ 2011ರಲ್ಲಿ ಬಸವ ಅಧ್ಯಯನ ಪೀಠ ಆರಂಭಿಸಲಾಗಿತ್ತಾದರೂ, ಅದು ಕೇವಲ ಒಂದು ಕೊಠಡಿಗೆ ಸೀಮಿತವಾಗಿತ್ತು. ಪುಸ್ತಕಗಳ ಪ್ರಕಟಣೆ ಮತ್ತು ವಿಶೇಷ ಉಪನ್ಯಾಸ ಹಾಗೂ ಸಂದರ್ಶನ ಕಾರ್ಯಕ್ರಮಗಳಿಗಷ್ಟೇ ಸೀಮಿತ ಎಂಬಂತಿತ್ತು.
ಸರ್ಕಾರದ ಅನುದಾನ: ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2018ರ ತನ್ನ ಕೊನೆಯ ಬಜೆಟ್ನಲ್ಲಿ ಮೈಸೂರು ವಿಶ್ವವಿದ್ಯಾಲಯದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಬಸವ ಅಧ್ಯಯನ ಪೀಠ ತೆರೆಯಲು ಅನುಮೋದನೆ ನೀಡಿತ್ತು. ನಂತರ ಒಂದು ವರ್ಷದ ಬಳಿಕ ರಾಜ್ಯ ಸರ್ಕಾರ ವಿವಿಗೆ 2 ಕೋಟಿ ರೂ. ಅನುದಾನ ಜಾರಿಗೊಳಿಸಿದ್ದು, ಕಟ್ಟಡ ನಿರ್ಮಾಣಕ್ಕೆ ಸದ್ದಿಲ್ಲದೇ ಸಕಲ ಸಿದ್ಧತೆ ನಡೆಯುತ್ತಿದೆ.
ದಿನೇ ದಿನೆ ಹೆಚ್ಚು ಜನಪ್ರಿಯವಾಗುತ್ತಿರುವ ಶಿವಶರಣ ವಚನ ಸಾಹಿತ್ಯ ವಿಶ್ವದ ಎಲ್ಲಾ ಸಾಹಿತ್ಯಕ್ಕಿಂತ ತನ್ನದೇ ಆದ ವೈಶಿಷ್ಟ್ಯವನ್ನು ಪಡೆದುಕೊಂದೆ. ಯಾವುದೇ ದೇಶ, ಭಾಷೆಯಲ್ಲಿ ಇಂತಹ ಸಾಹಿತ್ಯ ಇಲ್ಲದಿರುವುದು ಕನ್ನಡ ಸಾಹಿತ್ಯ, ಕನ್ನಡಿಗರ ಹಮ್ಮೆಯ ವಿಚಾರ. ಆದರೆ, ಕರ್ನಾಟಕದ ಮೊದಲ ವಿಶ್ವ ವಿದ್ಯಾಲಯ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಮೈಸೂರು ವಿವಿಯಲ್ಲಿ ಸಾಮಾಜಿಕ ಹರಿಕಾರ ಬಸವಣ್ಣ ನವರ ಅಧ್ಯಯನ ಪೀಠವನ್ನು ಸ್ವತಂತ್ರವಾಗಿ ಆರಂಭಿ ಸಲು ಈವರೆಗೆ ಕೈ ಹಾಕದಿರುವುದು ಸಾಹಿತ್ಯಾಭಿಮಾನಿಗಳಲ್ಲಿ ಬೇಸರ ತರಿಸಿತ್ತು. ಜೊತೆಗೆ ಹಲವು ಬಾರಿ ಈ ಬಗ್ಗೆ ಖಂಡನೆಯನ್ನು ವ್ಯಕ್ತಪಡಿಸಿದ್ದರು.
ಮುಕ್ತ ಆಯ್ಕೆ ಕೋರ್ಸ್ ಆರಂಭ: 2018-19ರ ಶೈಕ್ಷಣಿಕ ವರ್ಷದಿಂದ ಸ್ನಾತ್ತಕೋತ್ತರ ವಿದ್ಯಾರ್ಥಿಗಳಿಗೆ ಮುಕ್ತ ಆಯ್ಕೆ (ಓಪನ್ ಎಲೆಕ್ಟಿವ್) ಪತ್ರಿಕೆಯನ್ನು ಶ್ರೀ ಬಸವೇಶ್ವರ ಸಾಮಾಜಿಕ ಪರಿಷ್ಕರಣೆ ಸಂಶೋಧನೆ ಮತ್ತು ವಿಸ್ತರಣಾ ಕೆಂದ್ರದಲ್ಲಿ ಪರಿಚಯಿಸಿದ್ದು, ಮೊದಲ ವರ್ಷವೇ 44 ವಿದ್ಯಾರ್ಥಿಗಳು ಅರ್ಜಿಸಿಲ್ಲಿಸಿ ತರಗತಿಯಲ್ಲಿ ಪಾಲ್ಗೊಂಡಿದ್ದಾರೆ. ಜೊತೆಗ ಮೇ-ಜೂನ್ನಲ್ಲಿ ಪರೀಕ್ಷೆಯನ್ನು ಬರೆಯಲಿದ್ದಾರೆ.
ಹೊಸ ಕಟ್ಟಡದಿಂದ ಪ್ರಯೋಜನಗಳು: ಶ್ರೀ ಬಸವೇಶ್ವರ ಸಾಮಾಜಿಕ ಪರಿಷ್ಕರಣೆ ಸಂಶೋಧನೆ ಮತ್ತು ವಿಸ್ತರಣಾ ಕೆಂದ್ರಕ್ಕೆ ಸ್ವಂತ ಕಟ್ಟಡ ಸಿಕ್ಕರೆ ಸ್ವತಂತ್ರವಾಗಿ ತರಗತಿಗಳನ್ನು ನಡೆಸಲು, ವಚನ ಸಾಹಿತ್ಯ ಮತ್ತು ಪರಂಪರೆ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆಗೆ ಪೂರಕವಾಗಲಿದೆ. ಅಗತ್ಯ ತರಗತಿಗಳು, ಗ್ರಂಥಲಯ, ಸಭಾಂಗಣವೂ ಇರಲಿದೆ. ಈ ಎಲ್ಲದರಿಂದ ಶರಣ ಸಾಹಿತ್ಯವನ್ನು ಮುಂದಿನ ಪಿಳಿಗೆಗೂ ಕೊಂಡೊಯ್ಯಲು ಸಹಕಾರಿಯಾಗಬಲ್ಲದು ಎಂಬುದು ಕೇಂದ್ರದ ಸಂದರ್ಶಕ ಪ್ರಾಧ್ಯಾಪಕರ ಆಶಯ.
ಬಡ್ಡಿ ಹಣದಲ್ಲಿ ಕಾರ್ಯ ಚಟುವಟಿಕೆ: ಸರಕಾರ ಒಂದು ನಿರ್ದಿಷ್ಟ ಮೊತ್ತವನ್ನು ನೀಡಿದ್ದು, ಇದರಲ್ಲಿ ಬರುವ ಬಡ್ಡಿ ಹಣದಿಂದ ಬಸವೇಶ್ವರ ಸಾಮಾಜಿಕ ಪರಿಷ್ಕರಣೆ ಸಂಶೋಧನೆ ಮತ್ತು ವಿಸ್ತರಣಾ ಕೆಂದ್ರದ ಕಾರ್ಯ ಚಟುವಟಿಕೆಗಳು ನಡೆಯುತ್ತದೆ. ಇದೇ ಹಣದಿಂದ ಹೊಸ ಕೋರ್ಸ್, ಅಧ್ಯಯನ, ಸಂಶೋಧನೆ ನಡೆಸಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಸರಕಾರ ಹೆಚ್ಚು ಗಮನಹರಿಸಬೇಕಿದೆ ಎಂಬುದು ಪ್ರಾಧ್ಯಾಪಕರೋಬ್ಬರ ಅಭಿಪ್ರಾಯ.
ಸತೀಶ್ ದೇಪುರ
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.