ಹುಣಸೂರಿನಲ್ಲಿ ಅಪೋಲೋ ಅಸ್ಪತ್ರೆಯ ಎಮರ್ಜೆನ್ಸಿ ಮತ್ತು ಡೇ ಕೇರ್ ಸೆಂಟರ್‌

ಆಸ್ಪತ್ರೆಗಳು ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸಬೇಕು. ಯು.ಟಿಖಾದರ್

Team Udayavani, Jun 24, 2022, 10:22 PM IST

1-a

ಹುಣಸೂರು : ಹುಣಸೂರಿನಲ್ಲಿ ಅಪೋಲೋ ಅಸ್ಪತ್ರೆಯ ಎಮರ್ಜೆನ್ಸಿ ಮತ್ತು ಡೇ ಕೇರ್ ಸೆಂಟರ್‌ನ್ನು ಮಾಜಿ ಸಚಿವ ಯು.ಟಿ.ಖಾದರ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಮತ್ತಿತರ ಗಣ್ಯರೊಡಗೂಡಿ ಉದ್ಘಾಟಿಸಿದರು.

ಹುಣಸೂರಿನ ಹನಗೋಡು ಟೋಲ್ ಗೇಟ್ ಬಳಿಯ ಎಂ.ಆರ್.ಎನ್.ವಿ. ಕಟ್ಟಡದಲ್ಲಿ ಆರಂಭಿಸಿರುವ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಸಚಿವ ಯು.ಟಿ.ಖಾದರ್ ಮಾತನಾಡಿ, ಅಪೋಲೋ ಅಸ್ಪತ್ರೆಯು ಗ್ರಾಮಾಂತರ ಪ್ರದೇಶಗಳಲ್ಲಿ ಆಸ್ಪತ್ರೆ ತೆರೆದಿರುವುದು ಅಭಿನಂದನೀಯ, ಈ ನಿಟ್ಟಿನಲ್ಲಿ ಶಾಸಕ ಮಂಜುನಾಥ್ ಹಾಗೂ ಅವರ ಸಹೋದರರ ಶ್ರಮ ಅಭಿನಂದನೀಯ, ಆಸ್ಪತ್ರೆಗಳು ಜನರಲ್ಲಿ ರೋಗ ಬಾರದ ರೀತಿಯಲ್ಲಿ ಜನಜಾಗೃತಿ ಮೂಡಿಸುವುದು ಅತ್ಯವಶ್ಯವಾಗಿದೆ ಎಂದರು.ಶಾಸಕ ಎಚ್.ಪಿ.ಮಂಜುನಾಥರು ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮತ್ತಷ್ಟು ಶಕ್ತಿ ತುಂಬಬೇಕಿದೆ. ಮಾದರಿ ಕ್ಷೇತ್ರ ಮಾಡಲಿದ್ದಾರೆಂದರು.

ಅತಿಥಿಗಳಾಗಿದ್ದ ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ ದೇಶದಲ್ಲಿ ಜನಸಂಖ್ಯೆ ಹೆಚ್ಚಿದಂತೆ ಹೆಚ್ಚು ಆಸ್ಪತ್ರೆಗಳ ಅವಶ್ಯವಿದೆ. ಮೇಲ್ವರ್ಗ, ಮದ್ಯಮ ವರ್ಗದವರು ಹೆಚ್ಚಾಗಿ ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸಿದ್ದಾರೆ. ಹೀಗಾಗಿ ತಾಲೂಕು ಕೇಂದ್ರಗಳಲ್ಲಿ ಇಂತಹ ಆಸ್ಪತ್ರೆಗಳು ಅವಶ್ಯವಾಗಿವೆ ಎಂದು ಹೇಳಿ, ಇಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗಲೆಂದು ಆಶಿಸಿಸಿದರು.

ಶಾಸಕ ಎಚ್.ಪಿ.ಮಂಜುನಾಥ್ ಮಾತನಾಡಿ, ತಾಲೂಕಿನ ಜನತೆಗೆ ಆರೋಗ್ಯ ಸೇವೆ ಕಲ್ಪಿಸಲು ಉದ್ದೇಶಿಸಿದ್ದ ದಾನಿ, ಎಂ.ಆರ್.ಎನ್.ವಿ.ಟ್ಟಸ್ಟ್ನ ಅಧ್ಯಕ್ಷರಾಗಿದ್ದ ದಿ.ನಾಗರಾಜ ಶ್ರೇಷ್ಠಿಯವರ ಆಶಯದಂತೆ ಇಲ್ಲಿ ಆಸ್ಪತ್ರೆ ಆರಂಭಿಸಲಾಗಿದೆ ಎಂದು ತಿಳಿಸಿ, ಅವರ ಆಶಯವನ್ನು ಈಡೇರಿಸಿರುವ ತೃಪ್ತಿ ಇದೆ ಎಂದರು.

ಹುಣಸೂರಲ್ಲಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ವೈದ್ಯರಿಗೆ ಕೊರತೆ ಇಲ್ಲಾ, ಇಲ್ಲಿ ಸಾಕಷ್ಟು ಉತ್ತಮ ವೈದ್ಯರಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವೈದ್ಯರು, ಆರೋಗ್ಯ-ಆಶಾ ಕಾರ್ಯಕರ್ತರು ಅತ್ಯುತ್ತಮ ಕೆಲಸ ಮಾಡಿದ್ದಾರೆಂದು ಪ್ರಶಂಸಿಸಿ, ಗುಣಮಟ್ಟದ ಚಿಕಿತ್ಸೆಯ ಜೊತೆಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಬೇಕೆಂದು ಅಪೋಲೋ ಆಸ್ಪತ್ರೆಯ ಉಪಾಧ್ಯಕ್ಷ ಭರತೇಶ್ ರೆಡ್ಡಿಯವರನ್ನು ಕೋರಿದರು.

ಉದ್ಘಾಟನೆಯ ಅಂಗವಾಗಿ ಎಂ.ಆರ್.ಎನ್.ವಿ.ಟ್ಟಸ್ಟ್ನ ಅಧ್ಯಕ್ಷ ಎಚ್.ಎಸ್. ಅಶೋಕ್‌ಕುಮಾರ್, ಹಿರಿಯ ವೈದ್ಯರಾದ ಡಾ.ಶಿವಣ್ಣ, ಡಾ.ಶಂಕರಪ್ಪ, ಡಾ.ಸರ್ವೆಶ್‌ರಾಜೇಅರಸ್, ಡಾ.ಉಮೇಶ್, ಡಾ.ಕೀರ್ತಿಕುಮಾರ್, ಡಾ.ಸರೋಜಿನಿವಿಕ್ರಂ, ಡಾ.ಸರಸ್ವತಿ. ಡಾ.ವೃಷಬೇಂದ್ರಪ್ಪ ಹಾಗೂ ಆಶಾ ಕಾರ್ಯಕರ್ತರ ಪರವಾಗಿ ತಾಲೂಕು ಮೇಲ್ವಿಚಾರಕಿ ಸರಿತಾರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಪೋಲೋ ಆಸ್ಪತ್ರೆಯ ಉಪಾಧ್ಯಕ್ಷ ಭರತೇಶ್‌ರೆಡ್ಡಿ, ಶಾಸಕರ ತಂದೆ ಎಚ್.ಎನ್.ಪ್ರೇಮ್‌ಕುಮಾರ್,ಡಾ.ಶ್ರೀನಾಥ್, ಅಮರ್‌ನಾಥ್, ನಗರಸಭೆ ಅಧ್ಯಕ್ಷೆ ಸಮೀನಾಬಾನು, ಉಪಾಧ್ಯಕ್ಷ ದೇವನಾಯ್ಕ, ಸದಸ್ಯರು, ಗುರುಪುರ ಟಿಬೆಟ್ ನಿರಾಶ್ರಿತರ ಕೇಂದ್ರದ ಮುಖ್ಯಸ್ಥರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.