Mysore: ರಾತ್ರೋರಾತ್ರಿ ರೈತ ಮುಖಂಡರ ಬಂಧನ; ಠಾಣೆ ಎದುರು ಪ್ರತಿಭಟನೆ
Team Udayavani, Nov 17, 2023, 5:41 PM IST
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಆಗಮಿಸುವ ಮೊದಲೇ ಪೊಲೀಸರು ಹಲವು ರೈತರನ್ನು ಬಂಧಿಸಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ತಿ.ನರಸೀಪುರದ ಅನೇಕ ರೈತ ಮುಖಂಡರನ್ನು ಬಂಧಿಸಿದ್ದಾರೆ.
ಇದು ಹಿಟ್ಲರ್ ಸರ್ಕಾರವೋ ಇಲ್ಲ ಜನ ಸಾಮಾನ್ಯರ ಸರ್ಕಾರವೋ. ವಿವಿಧ ಬೇಡಿಕೆ ಈಡೇರಿಸುವಂತೆ ನಾವು ಹಲವು ತಿಂಗಳಿಂದ ರೈತರು ಸರ್ಕಾರವನ್ನು ಒತ್ತಾಯ ಮಾಡುತ್ತಿದ್ದಾರೆ. ಕಳೆದ ವಾರ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲಿಕ್ಕೆ ಮುಂದಾಗಿದ್ದಾಗಲೂ ಏಕಾಏಕಿ ಬಂಧಿಸಿದ್ದರು. ಈಗ ಮತ್ತೆ ನಮ್ಮನ್ನು ಸಿಎಂ ಬರುತ್ತಾರೆಂದು ಬಂಧಿಸಿದ್ದಾರೆ. ಸಿದ್ದರಾಮಯ್ಯನವರು ರೈತರನ್ನ ಕರೆಸಿ ಮಾತನಾಡಬಹುದಿತ್ತು. ಅದನ್ನ ಬಿಟ್ಟು ರೈತರನ್ನ ಬಂಧಿಸಿರುವುದು ನಾಚಿಕೆಗೇಡು. ಮುಂದಿನ ದಿನಗಳಲ್ಲಿ ಜನ ನಿಮಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ರೈತ ಮುಖಂಡ ಕಿರಗಸೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾತ್ರೋರಾತ್ರಿ ರೈತ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಟಿ.ನರಸೀಪುರ ತಾಲ್ಲೂಕು ಬನ್ನೂರು ಪೊಲೀಸ್ ಠಾಣೆ ಬಳಿ ರೈತರು ಪ್ರತಿಭಟನೆ ನಡೆಸಿದರು. ಬಂಧಿತ ರೈತ ಮುಖಂಡರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.
ರೈತರ ಪ್ರತಿಭಟನೆಗೆ ಸರ್ಕಾರ ಹೆದರಿದೆ. ರೈತ ಮುಖಂಡರನ್ನು ಬಂಧಿಸುವ ಮೂಲಕ ರೈತರ ಚಳುವಳಿಯನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆಕ್ರೋಶ ಹೊರಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.