ಆರ್ಯವೈಶ್ಯರು ರಾಜಕೀಯ ಶಕ್ತಿ ಪಡೆಯಿರಿ


Team Udayavani, Jan 7, 2019, 6:04 AM IST

m3-aryashiva.jpg

ಮೈಸೂರು: ಸಾಮಾಜಿಕ, ಆರ್ಥಿಕ ರಾಜಕೀಯ ಶಕ್ತಿಯನ್ನು ಆರ್ಯವೈಶ್ಯ ಸಮಾಜವು ಬಳಸಿಕೊಂಡು ಇತರ ಸಮಾಜಗಳಂತೆ ಮೇಲಕ್ಕೇರಬೇಕಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿ ರಾಜ್ಯಾಧ್ಯಕ್ಷ ಶಾಸಕ ಡಾ.ಟಿ.ಎ. ಶರವಣ ಸಲಹೆ ನೀಡಿದರು.

ನಗರದ ಜೆ.ಕೆ. ಮೈದಾನದ ಅಮೃತ ಮಹೋತ್ಸವ ಭವನದಲ್ಲಿ ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿಯಿಂದ ಭಾನುವಾರ ನಡೆದ ಮೈಸೂರು- ಚಾಮರಾಜನಗರ ಜಿಲ್ಲೆಗಳ ಮಹಾಮಂಡಳಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. 

ಆರ್ಯ ವೈಶ್ಯರು ಕೇವಲ ವ್ಯಾಪಾರ ಸೀಮಿತವಾಗದೇ ರಾಜಕೀಯ ಕ್ಷೇತ್ರದಲ್ಲಿಯೂ ಸಹ ಬೆಳೆಯುವ ಮೂಲಕ ರಾಜಕೀಯ ಶಕ್ತಿಯನ್ನು ಪಡೆಯಬೇಕು. ಆ ಮೂಲಕ ಸಮಾಜದ ಶಕ್ತಿಯನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ಆರ್ಯವೈಶ್ಯ ಅಥವಾ ಶೆಟ್ಟಿಗಳು ಎಂದರೆ ವ್ಯಾಪಾರಿ ಮಾಡಿಕೊಂಡಿರುವವರು, ಸರ್ಕಾರಕ್ಕೆ ಪ್ರಾಮಾಣಿಕವಾಗಿ ತೆರಿಗೆ ಕಟ್ಟುವವರು ಎನ್ನುವ ರೂಢಿ ಮಾತಿದೆ. ಶೆಟ್ಟಿಗಳೆಲ್ಲಾ ಶ್ರೀಮಂತರಲ್ಲ, ಬಡವರೂ ಇದ್ದಾರೆ. ಅಂತವರಿಗಾಗಿ ಸರ್ಕಾರದ ಮಟ್ಟದಲ್ಲಿ ಹೋರಾಟ ನಡೆಸಲು ರಾಜಕೀಯಕ್ಕೆ ಬರಬೇಕು ಎಂದು ಹೇಳಿದರು.

ಮನೆ ಮನೆಗೆ ಆರೋಗ್ಯ ಸೇವೆ: ನಾನು ಶಾಸಕನಾದ ನಂತರ ಆರ್ಯವೈಶ್ಯ ನಿಗಮ ಮಂಡಳಿ ಸ್ಥಾಪಿಸಲು ಯಶಸ್ವಿಯಾಗಿದ್ದೇನೆ. ಜಾತಿ ಪಟ್ಟಿಯಲ್ಲಿ ಆರ್ಯ ವೈಶ್ಯ ಜನಾಂಗವನ್ನು ಕೈಬಿಡಲಾಗಿತ್ತು. ಈಗ ಮತ್ತೆ ಸೇರಿಸಲಾಗಿದೆ. ವಾಸವಿ ಜಯಂತಿ ಆಚರಣೆಗೆ ಸರ್ಕಾರಕ್ಕೆ  ಮನವಿ ಮಾಡಲಾಗಿದೆ.

ನಿಗಮ ಮಂಡಳಿಯಿಂದ ವರ್ಷಕ್ಕೆ ಶೇ. 4ರ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆ ತರಲಾಗುವುದು. ಆರ್ಯವೈಶ್ಯ ಮಂಡಳಿಯಿಂದ ಮನೆ ಮನೆಗೆ ಧಾವಿಸಿ ಅನಾರೋಗ್ಯ ಪೀಡಿತರನ್ನು ಕರೆ ತಂದು ಚಿಕಿತ್ಸೆ ಕೊಡಿಸಲು ಕಾಯಕ್ರಮ ರೂಪಿಸಲಾಗುತ್ತಿದೆ ಎಂದು ಹೇಳಿದರು.

ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ಮಾತನಾಡಿ, ಸರ್ಕಾರ‌ ಮಹನೀಯರ ಜಯಂತಿ ಆಚರಿಸುವುದಕ್ಕೆ ಅಡ್ಡಿಯಿಲ್ಲ, ಅವರ ಹೆಸರಿನಲ್ಲಿ ಸರ್ಕಾರ ರಜೆ ನೀಡಿ, ಸರ್ಕಾರಿ ನೌಕರರಿಗೆ ಅನುಕೂಲ ಮಾಡಿಕೊಡುವುದು ಬೇಡ. ಕಡ್ಡಾಯವಾಗಿ ರಜೆ ರದ್ದುಪಡಿಸಿ ಅಂದು ಹೆಚ್ಚುವರಿ 2 ಗಂಟೆ ಕೆಲಸ ಮಾಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವೈದ್ಯ ಡಾ. ರಾಘವೇಂದ್ರ ಶೆಟ್ಟಿ ಅವರಿಗೆ “ಜಿಲ್ಲಾ ಸಮಾಜ ಭೂಷಣ’ ಪ್ರಶಸ್ತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ. ಮಹೇಶ್‌, ಶಾಸಕ ಎಲ್‌. ನಾಗೇಂದ್ರ, ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿ ಕಾರ್ಯಾಧ್ಯಕ್ಷ ಗಿರೀಶ್‌ ಪೆಂಡಕೂರ್‌, ಮೈಸೂರು ವಿಭಾಗೀಯ ಉಪಾಧ್ಯಕ್ಷ ಎಚ್‌.ಎಸ್‌. ಮಂಜುನಾಥ ಶೆಟ್ಟಿ,

ಮಂಡಳಿಯ ಜಿಲ್ಲಾಧ್ಯಕ್ಷ ಕೆ.ಆರ್‌. ನಾರಾಯಣಮೂರ್ತಿ, ಪದಾಧಿಕಾರಿಗಳಾದ ರವೀಂದ್ರ, ರಾಮಪ್ರಸಾದ್‌, ಜಿ. ಲಕ್ಷ್ಮೀಪತಿ, ಡಿ.ವಿ. ಸತ್ಯನಾರಾಯಣ, ಸತ್ಯನಾರಾಯಣ ಶೆಟ್ಟಿ, ಜಿ.ವಿ. ರಾಜೇಶ್‌, ಸಚ್ಚಿನ್‌, ಪಿ.ಜೆ. ನಿವೇದಿತಾ, ಶೋಭಾ ಶ್ರೀಧರ್‌ ಕಂಪ್ಲಿ, ಭಾರತಿ ಎಂ. ಪ್ರಕಾಶ್‌ ಇದ್ದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ನೂರಾರು ಮಹಿಳೆಯರು ಏಕ ಕಾಲದಲ್ಲಿ “ವಾಸವಿ ನವರತ್ನ ಮಾಲಿಕಾ’ ಭಜನೆಯನ್ನು ಹಾಡಿದರು.

ಟಾಪ್ ನ್ಯೂಸ್

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

1 ವರ್ಷದ ಆಶೀರ್ವಾದ ಕೇಳಿದ ಸಿಎಂ ಸಿದ್ದರಾಮಯ್ಯ: ಕುತೂಹಲ

1 ವರ್ಷದ ಆಶೀರ್ವಾದ ಕೇಳಿದ ಸಿಎಂ ಸಿದ್ದರಾಮಯ್ಯ: ಕುತೂಹಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.