
Mysuru: ಹಣ ಸುಲಿಗೆಗೆ ಯತ್ನ: ದೂರು ದಾಖಲು
Team Udayavani, Oct 14, 2024, 11:38 PM IST

ಮೈಸೂರು: ಅಪಘಾತ ಎಸಗಿದ್ದಾರೆ ಎಂದು ಆರೋಪಿಸಿ ಕಾರು ಚಾಲಕನನ್ನು ಅಡ್ಡಗಟ್ಟಿದ ದುಷ್ಕರ್ಮಿಯೊಬ್ಬ ಹಣ ವಸೂಲಿಗೆ ಯತ್ನಿಸಿರುವ ಘಟನೆ ನಗರದ ಜೆಎಲ್ಬಿ ರಸ್ತೆಯ ದಾಸಪ್ಪ ವೃತ್ತದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಕಾರಿನಲ್ಲಿ ಬರುತ್ತಿದ್ದ ಯಾದವಗಿರಿಯ ನಿವಾಸಿ ಉದ್ಯಮಿಯನ್ನು ಸ್ಕೂಟರ್ನಲ್ಲಿ ಬಂದು ಅಡ್ಡಗಟ್ಟಿದ ಯುವಕನೊಬ್ಬ, ನಿಮ್ಮ ಕಾರು ಢಿಕ್ಕಿ ಹೊಡೆದುದರಿಂದ ನನ್ನ ತಮ್ಮ ಬಿದ್ದು ಗಾಯಗೊಂಡಿದ್ದಾನೆ. ಆತನಿಗೆ ಚಿಕಿತ್ಸೆ ಕೊಡಿಸಲು ಹಣ ನೀಡಿ ಎಂದು ಒತ್ತಾಯಿಸಿದ್ದಾನೆ.
ಯುವಕನ ವರ್ತನೆಯಿಂದ ಗಾಬರಿಯಾದ ಉದ್ಯಮಿ ಅಪಘಾತ ವಾಗಿರುವ ಬಗ್ಗೆ ಗೊತ್ತಾಗಿಲ್ಲ. ಆಸ್ಪತ್ರೆಗೆ ದಾಖಲಿಸೋಣ ನಾನು ಬರುತ್ತೇನೆ ಎಂದು ಹೇಳಿದ್ದಾರೆ. ಅದಕ್ಕೆ ಕಿಡಿಗೇಡಿ ನೀವು ಬರುವುದು ಏನು ಬೇಡ ಜನ ಸೇರಿದ್ದಾರೆ. ನೀವು ಬಂದರೆ ಗಲಾಟೆಯಾಗಲಿದ್ದು, 30 ಸಾವಿರ ರೂ. ಹಣ ನೀಡಿ ನಾನೇ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇನೆ, ಇಲ್ಲದಿದ್ದರೆ ಪೊಲೀಸರಿಗೆ ದೂರು ಕೊಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾನೆ.
ಅಷ್ಟರಲ್ಲಿ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಬಳಿಕ ಉದ್ಯಮಿ ಶೃಂಗಾರ ಹೊಟೇಲ್ ಬಳಿ ಬಂದರೆ ಹಣ ನೀಡುವುದಾಗಿ ಹೇಳಿ ಮುಂದೆ ಸಾಗಿದ್ದು, ಇನ್ನು ಹಣ ಸಿಗಲಾರದೆಂದು ಬೈಕ್ ಸವಾರ ಕೂಡ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.