B.Y. Vijayendra “ಅಭ್ಯರ್ಥಿ ಇನ್ನೂ ತೀರ್ಮಾನ ಆಗಿಲ್ಲ’; ನಾಡಿದ್ದು ದಿಲ್ಲಿಗೆ ತೆರಳಿ ಚರ್ಚೆ
Team Udayavani, Jun 24, 2024, 12:02 AM IST
ಮೈಸೂರು: ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬುಧವಾರ ದಿಲ್ಲಿಗೆ ತೆರಳಿ ಹೈಕಮಾಂಡ್ ಜತೆ ಚರ್ಚಿಸುತ್ತೇನೆ. ಜೆಡಿಎಸ್ಗೆ ಸೀಟು ಬಿಟ್ಟು ಕೊಡುವ ಅಥವಾ ತೆಗೆದುಕೊಳ್ಳುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸುದ್ದಿಗಾರರಿಗೆ ತಿಳಿಸಿದರು.
ಈ ವಿಚಾರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಚರ್ಚಿಸುತ್ತೇವೆ. ಸಿ.ಪಿ. ಯೋಗೇಶ್ವರ್ ಅವರನ್ನೂ ಕರೆದು ಮಾತನಾಡುತ್ತೇನೆ.ಕಾಂಗ್ರೆಸ್ನಿಂದ ಯಾರೇ ಸ್ಪರ್ಧಿಸಿದರೂ ಅದು ಅವರಿಗೆ ಬಿಟ್ಟದ್ದು. ಜನ ಮನಸ್ಸು ಮಾಡಿದರೆ ಎಂತಹ ಫಲಿತಾಂಶ ಬರುತ್ತದೆ ಎಂಬುದಕ್ಕೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಫಲಿತಾಂಶವೇ ಸಾಕ್ಷಿ. ಯಾರು ಎಷ್ಟು ಬಲಾಡ್ಯರು ಎಂದುಕೊಂಡರೂ ಜನರ ತೀರ್ಮಾನವೇ ಅಂತಿಮ ಎಂದರು.
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು.
ಡಿಕೆಶಿ ಆಟ ನಡೆಯದು: ಬಿ.ವೈ. ವಿಜಯೇಂದ್ರ
ಮೈಸೂರು: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ವಿಚಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಂತ್ರ ಮಾಡುತ್ತಿದ್ದಾರೋ ಅಥವಾ ಕುತಂತ್ರ ಮಾಡುತ್ತಿದ್ದಾರೋ ಗೊತ್ತಿಲ್ಲ. ಉಪ ಚುನಾವಣೆಯಲ್ಲಿ ಅವರ ಆಟವೇನೂ ನಡೆಯದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆ ಫಲಿತಾಂಶದಲ್ಲೇ ಕಾಂಗ್ರೆಸ್ ಬಂಡವಾಳ ಬಯಲಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ನ ಒಬ್ಬರೇ ಸಂಸದರು ಇದ್ದರು; ಈಗ 9 ಸಂಸದರು ಇದ್ದಾರೆ ಎಂಬ ಮುಖ್ಯಮಂತ್ರಿ ಹೇಳಿಕೆಗೆ, ರಾಜ್ಯದ 146 ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಕ್ಕೆ ಲೀಡ್ ಬಂದಿದೆ. ಮುಖ್ಯಮಂತ್ರಿಗಳು ಇದನ್ನೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!
Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ
Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು
Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ
Fake ಷೇರು ಮಾರುಕಟ್ಟೆಯಲ್ಲಿ ಹೂಡಿಕೆ: 3 ಕೋಟಿ ರೂ. ಕಳೆದುಕೊಂಡ ಯುವಕ!
MUST WATCH
ಹೊಸ ಸೇರ್ಪಡೆ
ಶಿರಸಿಯ ಅದ್ವೈತನಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
PCOD (ಪಾಲಿಸಿಸ್ಟಿಕ್ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ
T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು
Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.