ಬಿಜೆಪಿ ಸುಳ್ಳನ್ನು ಜನತೆ ನಂಬಲ್ಲ: ಸಿಎಂ ಸಿದ್ದರಾಮಯ್ಯ ಆಕ್ರೋಶ


Team Udayavani, Jan 25, 2018, 6:00 AM IST

Chief-Minister-Siddaramaiah.jpg

ಮೈಸೂರು: ನನ್ನ ರಾಜಕೀಯ ತೆರೆದ ಪುಸ್ತಕ. ನಾನು ಏನು? ರಾಜಕಾರಣದಲ್ಲಿ ಹೇಗೆ ಬದುಕುತ್ತಿದ್ದೇನೆ? ನನ್ನ ಹಿನ್ನೆಲೆ ಏನು ಎಂಬುದು ಜನತೆಗೆ ಗೊತ್ತಿದೆ. ಹೀಗಾಗಿ ಪರಿವರ್ತನಾ ಯಾತ್ರೆಯಲ್ಲಿ ಬಿಜೆಪಿ ನಾಯಕರು ನನ್ನ ಬಗ್ಗೆ ಮಾಡುವ ಅಪಪ್ರಚಾರವನ್ನು ಜನ ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡಲು ಏನೂ ಇಲ್ಲದ್ದಕ್ಕೆ ಸಿದ್ದರಾಮಯ್ಯದು ತುಘಲಕ್‌ ದರ್ಬಾರ್‌, ದುರಹಂಕಾರ ಅನ್ನುತ್ತಾರೆ. ನಾನು ಸ್ವಾಭಿಮಾನದಿಂದ ಇರುವುದೇ ಅವರಿಗೆ ದುರಹಂಕಾರವಾಗಿ ಕಾಣುತ್ತದೆ. ಸಿದ್ದರಾಮಯ್ಯನನ್ನು ಟೀಕೆ ಮಾಡಿ, ಬೈದುಕೊಂಡು ಅಧಿಕಾರಕ್ಕೆ ಬರಬೇಕು ಅಂತಿದ್ದರೆ ನಿಮ್ಮಂತ ಮೂರ್ಖರು ಬೇರಿಲ್ಲ. ಜನ ದಡ್ಡರಲ್ಲ, ಅವರಿಗೆ ಎಲ್ಲವೂ ಗೊತ್ತಿದೆ ಎಂದು ತಿರುಗೇಟು ನೀಡಿದರು.

ಜನರನ್ನು ಪದೇ ಪದೆ ಯಾಮಾರಿಸಲು ಆಗಲ್ಲ. ಅಧಿಕಾರಕ್ಕೆ ಬರುವ ಮುಂಚೆ ಹೇಗಿಧ್ದೋ, ಈಗ ಹೇಗಿದ್ದೇವೆ ಎಂದು ಲೂಟಿ ಹೊಡೆದವರು ಆತ್ಮಾವಲೋಕನ ಮಾಡಿಕೊಳ್ಳಲಿ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಇಟ್ಟುಕೊಂಡು, ಇನ್ನೊಬ್ಬರ ತಟ್ಟೆಯಲ್ಲಿ ನೊಣ ಹುಡುಕಲು ಹೋಗಬಾರದು ಎಂದರು.

ಸಿದ್ದರಾಮಯ್ಯ ಏನು ಎಂಬುದು ಮೈಸೂರು ಜಿಲ್ಲೆಯವರು ಸೇರಿದಂತೆ ರಾಜ್ಯದ ಜನತೆಗೆ ಗೊತ್ತಿದೆ. ನಾನು ನಿನ್ನೆ, ಮೊನ್ನೆ ರಾಜಕಾರಣಕ್ಕೆ ಬಂದವನಲ್ಲ, 1994ರಿಂದ ಈವರೆಗಿನ ಎಲ್ಲಾ ಚುನಾವಣಾ ಪ್ರಚಾರ ಮಾಡಿದ ಕೆಲವೇ ಕೆಲವು ನಾಯಕರಲ್ಲಿ ನಾನೂ ಒಬ್ಬ. ನನಗೂ ರಾಜ್ಯದ ಜನರ ನಾಡಿಮಿಡಿತ ಗೊತ್ತಿದೆ. ರಾಜ್ಯದ ಜನತೆ ನನ್ನನ್ನು ಗಮನಿಸುತ್ತಿದ್ದಾರೆ. ಪರಿವರ್ತನಾ ಯಾತ್ರೆ ಹೆಸರಲ್ಲಿ ಇಲ್ಲಿಗೆ ಬಂದು ನನ್ನ ಬಗ್ಗೆ ಸುಳ್ಳಿ ಹೇಳಿದರೆ ಜನ ನಂಬುತ್ತಾರಾ? ಪರಿವರ್ತನೆ ಆಗಬೇಕಿರುವುದು ಜನರಲ್ಲ, ನೀವು ಎಂದರು.

ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ ಜಿಲ್ಲೆಗಳಲ್ಲಿ ಬಿಜೆಪಿ ಎಲ್ಲಿದೆ? ಈ ಜಿಲ್ಲೆಗಳಲ್ಲಿ ಬಿಜೆಪಿಗೆ ಅಭ್ಯರ್ಥಿಗಳೇ ಇಲ್ಲ. ಹೀಗಾಗಿ ಪರಿವರ್ತನಾ ಯಾತ್ರೆಯಲ್ಲಿ ಸುಮ್ಮನೆ ತಮಟೆ ಬಾರಿಸಿ, ಪುಂಗಿ ಊದಿಕೊಂಡು ಓಡಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಬಿಜೆಪಿಯವರು ಜೈಲಿಗೆ ಹೋಗಿ ಬಂದಿದ್ದೇ ಸಾಧನೆ ಎಂದು ಜರಿದರು.

ನಾವು ಇನ್ನೊಬ್ಬರನ್ನು ಟೀಕೆ ಮಾಡುವಾಗ ನಮ್ಮ ಸಾರ್ವಜನಿಕ ಜೀವನ ಹೇಗಿದೆ ಎಂಬುದನ್ನು ನೋಡಿಕೊಂಡು ಮಾತನಾಡಬೇಕು ಎಂದರು.

ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದಿರುವ ಪ್ರಕಾಶ್‌ ಜಾವಡೇಕರ್‌ ಅವರಿಗೆ ಜ್ಯೋತಿಷ್ಯ ಏನಾದರೂ ಗೊತ್ತಾ? ಕರ್ನಾಟಕದ ಬಗ್ಗೆ ಅವರಿಗೇನು ಗೊತ್ತು? ಯಡಿಯೂರಪ್ಪ ಅವರಿಗೇ ಕರ್ನಾಟಕ ಗೊತ್ತಿಲ್ಲ ಎಂದು ಟೀಕಿಸಿದರು.

ನರೇಂದ್ರಮೋದಿ, ಅಮಿತ್‌ ಶಾ, ಪ್ರಕಾಶ್‌ ಜಾವಡೇಕರ್‌ ಮಾತ್ರವಲ್ಲ, ಯಾರು ಎಷ್ಟು ಬಾರಿ ಬೇಕಾದರೂ ರಾಜ್ಯಕ್ಕೆ ಬಂದು ಸುಳ್ಳು ಹೇಳಿಕೊಂಡು ತಿರುಗಿದರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಹೇಳಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.