ಬಿಜೆಪಿ ಅಭ್ಯರ್ಥಿ ಹರ್ಷವರ್ಧನ ನಾಮಪತ್ರ


Team Udayavani, Apr 22, 2018, 12:50 PM IST

m2-bjp.jpg

ನಂಜನಗೂಡು: ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ್‌ ಶನಿವಾರ ಮೆರವಣಿಗೆಯೊಂದಿಗೆ ನಂಜನಗೂಡು ತಾಲೂಕು ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವರಾಮೇಗೌಡರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.  

ಶನಿವಾರ ಮಧ್ಯಾಹ್ನ 12 ಗಂಟೆಗೆ ನಗರಕ್ಕೆ ಆಗಮಿಸಿದ ಅವರು, ಸಹಸ್ರಾರು ಬೆಂಬಲಿಗರ ಜಯಘೋಷದ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಗರದ ಚಿಂತಾಮಣಿ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಯಲ್ಲಿ ಆಗಮಸಿ ನಾಮಪತ್ರ ಸಲ್ಲಿಸಿದರು. ಮರವಣಿಗೆಯಲ್ಲಿ ನಂಜನಗೂಡು ವಿಧಾನ ಸಭಾ ಕ್ಷೇತ್ರದ ಕಾರ್ಯಾಲಯಕ್ಕೆ ಆಗಮಿಸಿ ಮಾವ ಶ್ರೀನಿವಾಸ್‌ ಪ್ರಸಾದ್‌ ಆಗಮನಕ್ಕಾಗಿ 20 ನಿಮಿಷ ಕಾದಿದ್ದರು.

ಶ್ರೀನಿವಾಸ ಪ್ರಸಾದ ಆಗಮಿಸಿದ ಬಳಿಕ ತಾಲೂಕು ಬಿಜೆಪಿ ಅಧ್ಯಕ್ಷ ಕೆಂಡಗಣ್ಣಪ್ಪ, ಪಟ್ಟಣ ಅಧ್ಯಕ್ಷ ಬಾಲಚಂದ್ರ,  ಸೋಮಣ್ಣ, ಜಿಪಂ ಮಾಜಿ ಸದಸ್ಯ ಚಿಕ್ಕರಂಗನಾಯಕ ಅವರೊಂದಿಗೆ ಚುನಾವಣಾ ಕಾರ್ಯಾಲಯ ಪ್ರವೇಶಿಸಿ ಚುನಾವಣಾಧಿಕಾರಿ ಶಿವರಾಮೇಗೌಡರಿಗೆ ನಾಮಪತ್ರ ನೀಡಿದರು. ಅವರನ್ನು ಕೂಡಿಕೊಂಡ ಪ್ರಸಾದ್‌ ಆತ್ಮೀಯ ಶಂಕರ್‌ ನಾಮಪತ್ರ ಸಲ್ಲಿಕೆಗೆ ಸಾಕ್ಷಿಯಾದರು.

ಹೆದ್ದಾರಿ ಬಂದ್‌: ನಾಮಪತ್ರ ಸಲ್ಲಿಸಲು ಆಗಮಿಸಿದ ಹರ್ಷವರ್ಧನ್‌ ಜತೆ ಆಗಮಿಸಿದ ಅಪಾರ ಬೆಂಬಲಿಗರು ಕಾಂಗ್ರೆಸ್ಸಿಗಿಂತ ನಾವೇನು ಕಡಿಮೆ ಎನ್ನುತ್ತ ಪಠಾಕಿ ಸಿಡಿಸಿ ಜೈಕಾರ ಕೂಗಿದರು. ಬೆಂಬಲಿಗರ ನಿಯಂತ್ರಣಕ್ಕಾಗಿ ಹರಸಹಾಸ ಪಟ್ಟ ಪೊಲೀಸರು ಚುನಾವಣಾ ಕಾರ್ಯಾಲಯದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲಕಾಲ ಸ್ಥಗಿತಗೊಳಿಸಿದರು.

ತಾಯಿಯೂ ಭಾಗಿ: ಹರ್ಷವರ್ಧನನ ನಾಮಪತ್ರ ಸಲ್ಲಿಸುವ ವೇಳೆ ಅವರ ತಾಯಿ ಶೀಲಾಬಸವರಾಜು ಮಿನಿ ವಿಧಾನಸೌಧದ ಆವರಣಕ್ಕೆ ಆಗಮಿಸಿ ಮಗನನ್ನು ಹರಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಮಗನಿಗೆ ರಾಷ್ಟ್ರೀಯ ಪಕ್ಷ ಬಿಜೆಪಿ ಟಿಕಿಟ್‌ ನೀಡಿದ್ದು ಖುಷಿಯಾಗಿದ್ದು ತಾವು ಆತನ ಗೆಲುವಿಗಾಗಿ ಕ್ಷೇತ್ರಾದ್ಯಂತ ಪ್ರಚಾರಕ್ಕಿಳಿಯುವುದಾಗಿ ಘೋಷಿಸಿದರು.

ಅಳಿಯನನ್ನು ಆಶೀರ್ವದಿಸಿದ ಮಾವ: ಅಳಿಯ ಹರ್ಷವರ್ಧನ ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಕಾರ್ಯಾಲಯದ ಹೊರಾವರಣಕ್ಕೆ ಆಗಮಿಸಿದ ಮಾಜಿ ಸಚಿವ ಶ್ರೀನಿವಾಸ್‌ ಪ್ರಸಾದ್‌ ಅಲ್ಲಿಯೇ ಅಳಿಯನನ್ನು ಆಶಿರ್ವದಿಸಿ ಮೈಸೂರಿನ ಕೃಷ್ಣರಾಜನಗರದ ಅಭ್ಯರ್ಥಿ ರಾಮದಾಸರ ನಾಮಪತ್ರ ಸಲ್ಲಿಕೆಗಾಗಿ ತರಾತುರಿಯಲ್ಲಿ  ತೆರಳಿದರು.

ನಾಮಪತ್ರ ಸಲ್ಲಿಸಿ ಹೊರಬಂದ ಹರ್ಷವರ್ಧನ ಮಾತನಾಡಿ, ಜೀವನದಲ್ಲಿ ಇದೇ ಪ್ರಥಮ ಬಾರಿಗೆ ಚುನಾವಣಾ ಆಖಾಡಕ್ಕಿಳಿಯುತ್ತಿದ್ದೇನೆ. ಇದು ನನ್ನ ಸೌಭಾಗ್ಯ. ಮಾವ ಶ್ರೀನಿವಾಸ್‌ ಪ್ರಸಾದ್‌ ಈ ಕ್ಷೇತ್ರದ ಪ್ರತಿನಿಧಿಯಾಗಿ ಕೈ ಗೊಂಡ ಅಭಿವೃದ್ಧಿ, ಪ್ರಧಾನಿ ಮೋದಿಯವರ ಜನಪ್ರಿಯ ರಾಜಕಾರಣ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಯಡಯೂರಪ್ಪ ಸರ್ಕಾರದ ಸಾಧನೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

CTCM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

CM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.