ಶಿಕ್ಷಣ ಮಂಡಳಿ ಸಭೆಯಲ್ಲಿ ಕೆ-ಸೆಟ್‌ ಅಕ್ರಮ ಸದ್ದು


Team Udayavani, Dec 31, 2022, 3:35 PM IST

tdy-15

ಮೈಸೂರು: ವಿಶ್ವವಿದ್ಯಾಲಯ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್‌)ಗೆ ನ್ಯಾಕ್‌ ಪ್ರಶಂಸೆ ವ್ಯಕ್ತಪಡಿಸಿದೆ. ಆದರೆ, ಕೆಲವರು ಕೆ-ಸೆಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದರೂ ಮೈಸೂರು ವಿವಿ ಏಕೆ ಮೌನವಹಿಸಿದೆ ಎಂದು ವಿಶ್ವವಿದ್ಯಾಲಯದ ಶಿಕ್ಷಣ ಮಂಡಳಿ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು.

ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಶುಕ್ರವಾರ ನಡೆದ ಮೈಸೂರು ವಿಶ್ವವಿದ್ಯಾಲಯ ಶೈಕ್ಷಣಿಕ ಮಂಡಳಿ ಮೂರನೇ ಸಭೆಯಲ್ಲಿ ಸದಸ್ಯರು ಕೆ-ಸೆಟ್‌ ಪರೀಕ್ಷೆ ಅಕ್ರಮ ಆರೋಪ ಮತ್ತು ಪರೀಕ್ಷೆ ನಡೆಸುವ ಅಧಿಕಾರವನ್ನು ಕೆಇಎಗೆ ವರ್ಗಾಯಿಸಿರುವ ಬಗ್ಗೆ ಪ್ರಶ್ನಿಸಿದರು.

ಮೈಸೂರು ವಿವಿಗೆ ತನ್ನದೇ ಆದ ಇತಿಹಾಸ, ಹಿನ್ನೆಲೆ ಮತ್ತು ಘನತೆ ಇದೆ. ಹಲವು ವರ್ಷಗಳಿಂದ ಕೆ-ಸೆಟ್‌ ಪರೀಕ್ಷೆಯನ್ನು ವಿಶ್ವವಿದ್ಯಾಲಯ ನಡೆಸುತ್ತಾ ಬರುತ್ತಿದೆ. ಆದರೆ, ಕೆಲವರು ಪರಿಕ್ಷೆ ಅಕ್ರಮ ನಡೆಯುತ್ತಿದೆ ಎಂಬ ಆರೋಪ ಬಂದಾಕ್ಷಣ ಇತ್ತೀಚೆಗೆ ಸರ್ಕಾರ ಏಕಾಏಕಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಕೆ-ಸೆಟ್‌ ಪರೀಕ್ಷೆ ನಡೆಸಲು ಆದೇಶಿಸಿರುವುದು ಮೈಸೂರು ವಿಶ್ವವಿದ್ಯಾಲಯದ ಘನತೆಗೆ ಕಪ್ಪುಚುಕ್ಕೆಯಾಗಿದೆ. ಇತ್ತೀಚೆಗೆ ವಿಶ್ವವಿದ್ಯಾಲಯಕ್ಕೆ ನ್ಯಾಕ್‌ ಭೇಟಿ ನೀಡಿದಾಗ ಕೆ-ಸೆಟ್‌ ವಿಭಾಗದ ಕಾರ್ಯವೈಖರಿ ಪರಿಶೀಲಿಸಿ ಶ್ಲಾಘನೆ ಮಾಡಿತ್ತು. ಹೀಗಿದ್ದರೂ ಆರೋಪ ಬಂದಾಕ್ಷಣ ಏಕೆ ವಿವಿ ಸ್ಪಷ್ಟನೆ ನೀಡಿಲಿಲ್ಲ ಎಂದು ಪ್ರಶ್ನಿಸಿದರು.

ಸ್ಪಷ್ಟನೆ ನೀಡಬಹುದಿತ್ತು: ನಾಮ ನಿರ್ದೇಶಿತ ಸದಸ್ಯ ಶಶಿಧರ್‌ ಮಾತನಾಡಿ, ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಬಂದಾಕ್ಷಣ ಕುಲಪತಿ, ಕುಲಸಚಿವರು ಸುದ್ದಿಗೋಷ್ಠಿ ಅಥವಾ ಪತ್ರಿಕಾ ಪ್ರಕಟಣೆ ನೀಡಿ ಆರೋಪಕ್ಕೆ ಸ್ಪಷ್ಟನೆ ನೀಡುವ ಕೆಲಸ ಮಾಡಬೇಕಿತ್ತು. ಆದರೆ, ಈ ಯಾವ ಕೆಲಸ ಮಾಡದ ಹಿನ್ನೆಲೆ ಜನರು ಅಕ್ರಮ ಆರೋಪ ಹೇಳಿಕೆ ಸತ್ಯ ಎಂದು ಭಾವಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಿತಿ ರಚಿಸಿ ತನಿಖೆಗೆ ಆದೇಶ: ಈ ವೇಳೆ ಮಧ್ಯ ಪ್ರವೇಶಿಸಿದ ಕಲಾ ನಿಕಾಯದ ಡೀನ್‌ ಪ್ರೊ. ಮುಜಾಫ‌ರ್‌ ಅಸ್ಸಾದಿ, ಸರ್ಕಾರ ಈಗಾಗಲೇ ಆರೋಪ ಸಂಬಂಧ ಸಮಿತಿ ರಚನೆ ಮಾಡಿ, ತನಿಖೆಗೆ ಆದೇಶಿಸಿದೆ. ಜತೆಗೆ ಸಮಿತಿಯಲ್ಲಿರುವ ಸದಸ್ಯರು ಈ ಸಭೆ ಯಲ್ಲೂ ಇರುವುದರಿಂದ ಈ ಚರ್ಚೆ ಸಮಂಜಸವಲ್ಲ ಎಂದು ಸಲಹೆ ನೀಡಿದ ಬಳಿಕ ನಾಮನಿರ್ದೇಶಿತ ಸದಸ್ಯರು ಸಮಾಧಾನಗೊಂಡರು.

ಕೆಇಎಗೆ ಪರೀಕ್ಷೆ ನಡೆಸುವ ಅಧಿಕಾರ: ಈ ವೇಳೆ ಮಾತನಾಡಿದ ಪ್ರಭಾರ ಕುಲಪತಿ ಪ್ರೊ.ಎಚ್‌.ರಾಜಶೇಖರ್‌ ಮಾತನಾಡಿ, ಯುಜಿಸಿ ಕೆ-ಎಸ್‌ ಪರೀಕ್ಷೆ ನಡೆಸುವ ಅಧಿಕಾರವನ್ನು ಆಯಾಯ ರಾಜ್ಯ ಸರ್ಕಾರಗಳಿಗೆ ನೀಡಿದೆ. ಆರೋಪ ಕೇಳಿಬಂದ ಹಿನ್ನೆಲೆ ಕೆಇಎಗೆ ಪರೀಕ್ಷೆ ನಡೆಸುವ ಅಧಿಕಾರವನ್ನು ಕರ್ನಾಟಕ ಸರ್ಕಾರ ನೀಡಿದೆ ಎಂದು ವಿವರಿಸಿದರು.

ಅತಿಥಿ ಉಪನ್ಯಾಸಕರ ಖಾಯಂಗೆ ಚರ್ಚೆ: ವಿಶ್ವವಿದ್ಯಾಲಯ ದಲ್ಲಿನ ಸಿಬ್ಬಂದಿ ನೇಮಕಾತಿ ಕ್ರಮ ವಿಧಾನಗಳಿಗೆ ಸಂಬಂಧಿಸಿ ದಂತೆ ನಿಯಮಾವಳಿ ರಚಿಸುವ ಬಗ್ಗೆ ಅನುಮೋದನೆಗೆ ಸಭೆಯ ಗಮನಕ್ಕೆ ಬಂದಾಗ ಮಧ್ಯ ಪ್ರವೇಶಿಸಿದ ವಿಧಾನ ಪರಿಷತ್‌ ಸದಸ್ಯ ಸಿ.ಎನ್‌.ಮಂಜೇಗೌಡ, ಈಗಾಗಲೇ ಹತ್ತಾರು ವರ್ಷಗಳಿಗೂ ಹೆಚ್ಚು ಕಾಲ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಸೇವೆಯನ್ನು ಪರಿಗಣಿಸಿ ಎಂದರು.

ಸಭೆಯಲ್ಲಿ ಅನುಮೋದನೆ: ಈಗಾಗಲೇ ಬಹಳಷ್ಟು ಮಂದಿ ಅತಿಥಿ ಉಪನ್ಯಾಸಕರು ನಿವೃತ್ತಿ ಅಂಚಿಗೆ ಬಂದಿದ್ದಾರೆ. ನೇಮಕಾತಿ ಸಂದರ್ಭ ಹೊಸಬರಿಗೆ ಅವಕಾಶ ನೀಡುವ ಜತೆಗೆ ಇವರನ್ನೂ ಪರಿಗಣಿಸಿ. ಈ ಬಗ್ಗೆ ವಿಶ್ವವಿದ್ಯಾಲಯ ಸಿಂಡಿಕೇಟ್‌ ಸಭೆಯಲ್ಲಿ ಅನುಮೋದನೆ ಪಡೆದುಕೊಂಡು ಸರ್ಕಾರಕ್ಕೆ ಕಳುಹಿಸಿಕೊಟ್ಟರೆ ನಾವು ಧ್ವನಿ ಎತ್ತುತ್ತೇವೆ ಎಂದು ಹೇಳಿದರು.

ಸರ್ಕಾರಕ್ಕೆ ಒತ್ತಡ ಹೇರಬೇಕು: ಈ ವೇಳೆ ಮಧ್ಯ ಪ್ರವೇಶಿಸಿದ ವಿಜ್ಞಾನ ನಿಕಾಯ ಡೀನ್‌ ಪ್ರೊ.ಬಸವರಾಜು ಮಾತನಾಡಿ, ಈ ಸಮಸ್ಯೆ ಹಲವು ವರ್ಷಗಳಿಂದಲೂ ಇದೆ. ನ್ಯಾಯಾಲಯವೂ ಅವರ ಸೇವೆಯನ್ನು ಕಾಯಂ ಮಾಡುವಂತೆ ಆದೇಶಿಸಿದೆ. ಆದರೆ, ಸರ್ಕಾರ ಇನ್ನೂ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಈ ಬಗ್ಗೆ ವಿಶ್ವವಿದ್ಯಾಲಯ ಮತ್ತು ಎಲ್ಲಾ ಸಮಿತಿ, ಮಂಡಳಿಗಳು ಒಮ್ಮತದ ತೀರ್ಮಾನ ತೆಗೆದುಕೊಂಡು ಸರ್ಕಾರಕ್ಕೆ ಒತ್ತಡ ಹೇರಬೇಕು ಎಂದು ತಿಳಿಸಿದರು.

ಈ ವೇಳೆ ವಿಶ್ರಾಂತ ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್‌ ಚಿನ್ನದ ಪದಕ, ಪ್ರೊ. ಸರೋಜ ರಾಮಪ್ಪ ಚಿನ್ನದ ಪದಕ, ಕಮಲಮ್ಮ ಜಿ.ಎ.ಶಿವಲಿಂಗಯ್ಯ ನಗದು ಬಹುಮಾನ ದತ್ತಿ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಜತೆಗೆ ಸ್ವಾಯತ್ತ ಕಾಲೇಜುಗಳಾದ ಸರಸ್ವತಿಪುರಂ ಜೆಎಸ್‌ಎಸ್‌ ಮಹಿಳಾ ಕಾಲೇಜು, ಸೆಂಟ್‌ ಫಿಲೋಮಿನಾ ಕಾಲೇಜು, ಮಹಾಜನ ಪ್ರಥಮ ದರ್ಜೆ ಕಾಲೇಜು, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಮತ್ತು ಜೆಎಸ್‌ಎಸ್‌ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಸ್ವಾಯತ್ತ ಕಾಲೇಜುಗಳಿಗೆ ಪರಾಮರ್ಶನಾ ಸಮಿತಿ ಭೇಟಿ ನೀಡಿ ಸಲ್ಲಿಸಿದ ವರದಿಗೆ ಒಪ್ಪಿಗೆ ಸೂಚಿಸಲಾಯಿತು. ಸಭೆಯಲ್ಲಿ ಕುಲಸಚಿವೆ ವಿ.ಆರ್‌.ಶೈಲಜಾ, ಪರೀಕ್ಷಾಂಗ ಕುಲಸಚಿವ ಜ್ಞಾನಪ್ರಕಾಶ್‌ ಮತ್ತು ಹಣಕಾಸು ಅಧಿಕಾರಿ ಡಾ.ಸಂಗೀತಾ ಗಜಾನನಭಟ್‌ ಮತ್ತು ಸದಸ್ಯರು ಇದ್ದರು.

ಕುಲಪತಿಗಳು ಸಭೆ ನಡೆಸಬಹುದೇ? :

ಮೈಸೂರು: ಕೆ-ಸೆಟ್‌ ಸಂಯೋಜನಾಧಿಕಾರಿಯೂ ಆಗಿದ್ದ ಪ್ರಭಾರ ಕುಲಪತಿಗಳು ಆಗಿರುವ ಪ್ರೊ.ಎಚ್‌.ರಾಜಶೇಖರ್‌ ಅವರ ಮೇಲೆ ಆರೋಪ ಕೇಳಿಬಂದಿದೆ. ಜತೆಗೆ ಈ ಬಗ್ಗೆ ವಿಚಾರಣೆಗೆ ಸಮಿತಿಯೂ ನೇಮಕವಾಗಿರುವುದರಿಂದ ಅವರ ಅಧ್ಯಕ್ಷತೆ ಯಲ್ಲಿ ಸಭೆ ನಡೆಸುವುದು ಸೂಕ್ತವೇ ಎಂದು ವಿಜ್ಞಾನ ನಿಕಾಯ ಡೀನ್‌ ಪ್ರೊ.ಬಸವರಾಜು ಪ್ರಶ್ನಿಸಿದರು.

ಶುಕ್ರವಾರ ಮೈಸೂರು ವಿಶ್ವವಿದ್ಯಾಲಯ ಶೈಕ್ಷಣಿಕ ಮಂಡಳಿ ಮೂರನೇ ಸಭೆ ಆರಂಭವಾಗುತ್ತಿದ್ದಂತೆ ಎದ್ದುನಿಂತು ಮಾತನಾಡಿದ ಅವರು, ಮೈಸೂರು ವಿಶ್ವವಿದ್ಯಾಲಯವು ನಡೆಸಿರುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್‌)ಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಹಿನ್ನೆಲೆ ಉನ್ನತ ಶಿಕ್ಷಣ ಇಲಾಖೆ ತನಿಖೆಗೆ ಆದೇಶಿಸಿದೆ. ಕುಲಪತಿಗಳ ವಿರುದ್ಧವೂ ಆರೋಪ ಕೇಳಿಬಂದಿದೆ. ಹಾಗೆಯೇ ಪ್ರಭಾರ ಕುಲಪತಿಗಳಾಗಿರುವುದರಿಂದ ಸಭೆ ನಡೆಸುವುದು ಸೂಕ್ತವೇ ಎಂದರು.

ಈ ವೇಳೆ ಮಧ್ಯ ಪ್ರವೇಶಿಸಿದ ವಿಧಾನಪರಿಷತ್‌ ಸದಸ್ಯ ಸಿ.ಎನ್‌.ಮಂಜೇಗೌಡ, ಆರೋಪ ಕೇಳಿಬಂದಾಕ್ಷಣ ಯಾರೂ ಅಪರಾಧಿಗಳಾಗುವುದಿಲ್ಲ. ಪ್ರಭಾರ ಕುಲಪತಿ ಎಂದು ಸರ್ಕಾರ ನೇಮಿಸಿದರೆ ಅವರು ಕುಲಪತಿ ಎಂದೇ ಅರ್ಥ. ಈ ನಿಟ್ಟಿನಲ್ಲಿ ಯಾವುದೇ ಗೊಂದಲ ಮಾಡಿಕೊಳ್ಳದೇ ಸಭೆ ಮುಂದುವರಿಸಿ ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.