ಶ್ರೀ ಸಾಯಿಮಂದಿರದಲ್ಲಿ ಬ್ರಹ್ಮ ಕಲಶೋತ್ಸವ
Team Udayavani, Apr 20, 2018, 12:48 PM IST
ಕೆ.ಆರ್.ನಗರ: ಪಟ್ಟಣದ ಹೊರವಲಯದಲ್ಲಿರುವ ಎಡತೊರೆ ಅರ್ಕೇಶ್ವರ ದೇವಸ್ಥಾನದ ಸಮೀಪ ನೂತನವಾಗಿ ನಿರ್ಮಿಸಿರುವ ಶ್ರೀ ಸಾಯಿಮಂದಿರದ ಉದ್ಘಾಟನೆ ಹಾಗೂ ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮ ಗುರುವಾರ ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಕಳೆದ ಮೂರು ದಿನಗಳಿಂದ ನಡೆದ ಶ್ರೀ ಸಾಯಿಬಾಬಾ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವದ ಸಲುವಾಗಿ ವಿವಧ ಪೂಜಾ ಕೈಂಕರ್ಯ, ಹೋಮ ಹವನಗಳನ್ನು ನೆರವೇರಿಸಲಾಯಿತು.
ಮೈಸೂರಿನ ವಿದ್ವಾನ್ ಶ್ರೀನಿವಾಸ ಉಪಾಧ್ಯಾಯ ಮತ್ತು ವಿಘ್ನೇಶ್ವರ ಭಟ್ ನೇತ್ರತ್ವದಲ್ಲಿ ಶ್ರೀ ಸಾಯಿಬಾಬಾ ಮಂದಿರದಲ್ಲಿ ಪ್ರತಿಷ್ಠಾ ಹೋಮ, ಶ್ರೀ ಸಾಯಿಬಾಬಾ ನೂತನ ಮೂರ್ತಿ ಪ್ರತಿಷ್ಠಾಪನೆ, ಬ್ರಹ್ಮ ಕಲಶಾಭಿಷೇಕ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ಮೊದಲಾದ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.
ಧಾರ್ಮಿಕ ಕಾರ್ಯಕ್ರಮದ ಪ್ರಯುಕ್ತ ಮಕ್ಕಳಿಂದ ಸಂಗೀತ ಹಾಗೂ ಸಾಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಶ್ರೀ ಸಾಯಿಬಾಬಾ ಮಂದಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಕ್ತ ಸಮೂಹ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಇಷ್ಟಾರ್ಥಗಳನ್ನು ನೆರವೇರಿಸುವಂತೆ ಪ್ರಾರ್ಥಿಸಿದರು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಎಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದ ಶ್ರೀಶಂಕರಭಾರತೀ ಸ್ವಾಮೀಜಿ ವಹಿಸಿದ್ದರು. ಶ್ರೀ ಸಾಯಿಬಾಬಾ ಮಂದಿರದ ಸ್ಥಾಪಕ ಹಾಗೂ ಗುತ್ತಿಗೆದಾರ ಮಂಜುನಾಥ್, ಶ್ರೀ ಸಾಯಿ ಮಂದಿರದ ಉದ್ಘಾಟನಾ ಸೇವಾ ಸಮಿತಿ ನಿರ್ದೇಶಕರಾದ ಗೌಡಪ್ಪ, ವಕೀಲೆ ಪದ್ಮ, ಶಿಕ್ಷಕಿ ಮಧು, ಸಂಗೀತಾ, ಕವಿತಾ ಮತ್ತು ಸೋಮಣ್ಣ ಹಾಗೂ ಅರುಣ್ಸಾಯಿರಾಂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
Mysuru Dasara: ಎದೆ ಝಲ್ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.