ನಿರ್ವಹಣೆ ಇಲ್ಲದೇ ಸೊರಗಿದ ಬ್ರಿಟಿಷರ ಕಾಲದ ಕಟ್ಟಡ


Team Udayavani, Nov 29, 2021, 12:46 PM IST

ನಿರ್ವಹಣೆ ಇಲ್ಲದೇ ಸೊರಗಿದ ಬ್ರಿಟಿಷರ ಕಾಲದ ಕಟ್ಟಡ

ಎಚ್‌.ಡಿ.ಕೋಟೆ: ಬಹುವರ್ಷಗಳ ಹಿಂದೆ ಇಡೀ ತಾಲೂಕಿನ ನಿಯಂತ್ರಣದ ಹೊಣೆ ಹೊತ್ತ ತಾಲೂಕು ಕಚೇರಿ ಅನಿಸಿಕೊಂಡಿದ್ದ ಪಟ್ಟಣದ ಆಂಗ್ಲರ ಕಾಲದ ನಿರ್ಮಿತ ಹಳೆಯ ತಾಲೂಕು ಕಚೇರಿ ಕಟ್ಟಡ ನಿರ್ವಹಣೆ ಕಾಣದೆ ಅವಸಾನದ ಅಂಚು ತಲುಪುತ್ತಿದೆ. ಹೌದು, ಎಚ್‌.ಡಿ.ಕೋಟೆ ತಾಲೂಕಿನ ಹಳೆಯ ತಾಲೂಕು ಕಚೇರಿ ಬಹುವರ್ಷಗಳ ಹಿಂದೆ ಇಡೀ ತಾಲೂಕಿನ ಆಡಳಿತವನ್ನು ನಿಯಂತ್ರಿಸುವ ಕೇಂದ್ರ ಸ್ಥಾನವಾಗಿತ್ತು.

ತಹಶೀಲ್ದಾರ್‌ ಕಚೇರಿ, ಪೊಲೀಸ್‌ ಕಚೇರಿ, ಉಪಖಜಾನೆ ಸೇರಿದಂತೆ ಇನ್ನಿತರ ಹಲವಾರು ತಾಲೂಕು ಮಟ್ಟದ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದವು.

ಕಟ್ಟಡ ಗಟ್ಟಿಮುಟ್ಟಾಗಿದೆ: ಆಂಗ್ಲರ ಆಡಳಿತಾವಧಿಯಲ್ಲಿ ನಿರ್ಮಾಣಗೊಂಡ ಇಡೀ ತಾಲೂಕು ಕಚೇರಿ ಕಟ್ಟಡದ ಗೋಡೆಗಳು ಇಟ್ಟಿಗೆ ಮತ್ತು ಸುಣ್ಣದ ತಿಳಿಯಿಂದ ನಿರ್ಮಾಣವಾಗಿದ್ದು, ಮೇಲ್ಚಾವಣಿ ತೀರು ಮತ್ತು ರೀಪರ್‌ಗಳಿಂದ (ಮರಗಳು) ನಿರ್ಮಾಣವಾಗಿದ್ದರೂ ಇಂದಿಗೂ ಸುಸಜ್ಜಿತವಾಗಿ ಗಟ್ಟಿಮುಟ್ಟಾಗಿವೆ. ಕಟ್ಟಡದ ಮೇಲ್ಚಾವಣಿಯ ನಿರ್ಮಾಣವೂ ಆಕರ್ಷಣೀಯ ವಾಗಿದ್ದು, ನೋಡುಗರ ಮನ ಸೆಳೆಯುವಂತಿದೆ.

ಜನಸಂಖ್ಯೆ ಏರಿಕೆಯಾದಂತೆ ಪಟ್ಟಣದಲ್ಲಿ ನೂತನವಾಗಿ ಮಿನಿ ವಿಧಾನಸೌಧದ ಕಟ್ಟಡವೊಂದನ್ನು ನಿರ್ಮಿಸಿ ಹಳೆಯ ತಾಲೂಕು ಕಚೇರಿ ಸಂಪೂರ್ಣ ಆಡಳಿತವನ್ನು ಮಿನಿ ವಿಧಾನಸೌಧದ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಬಳಿಕ ಹಳೆಯ ತಾಲೂಕು ಕಚೇರಿ ಕಟ್ಟಡ ಖಾಲಿ ಇದ್ದರಿಂದ ಸ್ಥಳೀಯ ಪಟ್ಟಣ ಪಂಚಾಯಿತಿ, ಗೃಹರಕ್ಷಕ ದಳ, ರಾಜಸ್ವ ನಿರೀಕ್ಷಕರ ಕೊಠಡಿ, ಹಾಗೂ ಗ್ರಾಮ ಲೆಕ್ಕಿಗರ ಕಚೇರಿಗಳಾಗಿ ಮಾರ್ಪಟ್ಟು ಕಾರ್ಯ ನಿರ್ವಹಿಸುತ್ತಿದೆ.

ಕೆಸರುಮಯ: ಆದರೆ, ಹಳೆಯದಾದ ಕಟ್ಟಡ ಸಮರ್ಪಕವಾಗಿ ನಿರ್ವಹಣೆ ಇಲ್ಲದೆ ಇರುವುದರಿಂದ ಕಟ್ಟಡ ಒಂದು ಕಡೆ ಶಿಥಲಾವಸ್ಥೆ ತಲುಪುತ್ತಿದ್ದರೆ ಇನ್ನೊಂದು ಕಡೆ ಇಡೀ ಕಚೇರಿಯ ವಿಶಾಲವಾದ ಆವರಣ ಕಲುಷಿತಗೊಂಡು ಗಿಡಗಂಟಿಗಳಿಂದ ಆವೃತ್ತವಾಗಿ ಕೊಳೆತು ಗಬ್ಬೆದ್ದು ನಾರುತ್ತಿದೆ.

ಇದನ್ನೂ ಓದಿ:- ಮತ್ತೆ ಲಾಕ್ ಡೌನ್ ಮಾಡುವ ಯಾವುದೇ ಚಿಂತೆನೆ ಇಲ್ಲ: ಸಚಿವ ಕೆ.ಸುಧಾಕರ್

ಕೊಂಚ ಮಳೆಯಾದರೂ ಹಳೆಯ ತಾಲೂಕು ಕಚೇರಿ ಆಚರಣದ ತುಂಬೆಲ್ಲಾ ಮಳೆಯ ನೀರು ಶೇಖರಣೆಯಾಗಿ ಕೊಳೆತು ನಾರುತ್ತಾ ಕಚೇರಿ ಆವರಣ ಕೆಸರುಮಯವಾಗುತ್ತಿದೆ. ಕಲುಷಿತ ನೀರು ನಿಂತಲ್ಲೇ ನಿಂತು ಕೊಳೆತುನಾರುವುದರಿಂದ ಸೊಳ್ಳೆಗಳ ವಂಶಾಭಿವೃದ್ಧಿಯ ಕೇಂದ್ರ ಸ್ಥಾನವಾಗಿ ಮಾರ್ಪಾಟುಗೊಂಡು, ಸಾಂಕ್ರಾಮಿಕ ರೋಗಗಳಾದ ಚಿಕೂನ್‌ ಗುನ್ಯಾ, ಮಲೇರಿಯಾ ಸೇರಿದಂತೆ ಇನ್ನಿತರ ಮಾರಕ ರೋಗಗಳ ಆಶ್ರಯ ತಾಣವಾಗುತ್ತಿದೆ ಎಂಬುದು ಸ್ಥಳೀಯರ ಆರೋಪ.

ಅಭಿವೃದ್ಧಿಗೊಳಿಸಿ ಯತಾಸ್ಥಿತಿ ಕಾಪಾಡಿ

ಸ್ವಾತಂತ್ರ್ಯ ಪೂರ್ವದ ಕಟ್ಟಡವೊಂದು ತಾಲೂಕು ಕೇಂದ್ರ ಸ್ಥಾನದಲ್ಲಿ ಉಳಿದಿರುವುದು ಸಂತಸದ ಸಂಗತಿ. ಹಾಗೆಂದು ಕಟ್ಟಡ ನಿರ್ವಹಣೆ ಜತೆಗೆ ಮೇಲ್ವಿಚಾರಣೆ ಇಲ್ಲದೆ ಶಿಥಿಲಗೊಂಡಿರುವುದು ಬೇಸರದ ಸಂಗತಿಯೇ ಸರಿ. ಇನ್ನಾದರೂ ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳು ಮತ್ತು ತಾಲೂಕಿನ ಚುನಾಯಿತ ಪ್ರತಿನಿಧಿಗಳು ತಾಲೂಕು ಕೇಂದ್ರ ಸ್ಥಾನದಲ್ಲಿ ಇತಿಹಾಸ ಹೊಂದಿರುವ ಹಳೆಯ ತಾಲೂಕು ಕಚೇರಿ ಕಟ್ಟಡದ ಶುಚಿತ್ವದ ಜತೆಗೆ ಕಟ್ಟಡದ ಯಥಾಸ್ಥಿತಿ ಕಾಪಾಡುವಂತೆ ಪಟ್ಟಣದ ಹಿರಿಯ ನಾಗರೀಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.