![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 27, 2021, 6:01 PM IST
ಮೈಸೂರು: ಕೊರೊನಾ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವಶ್ರಮಿಕ ವರ್ಗದ ಕುಟುಂಬಗಳಿಗೆ ತಲಾ 10 ಸಾವಿರ ರೂ. ಪ್ಯಾಕೇಜ್ಘೋಷಿಸುವಂತೆ ಆಗ್ರಹಿಸಿ ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ಸಮಿತಿ ಕಾರ್ಮಿಕ ವಿಭಾಗದಿಂದ ಪ್ರತಿಭಟನೆ ನಡೆಯಿತು.
ನಗರದ ಕಾಂಗ್ರೆಸ್ ಭವನದ ಎದುರು ಬುಧವಾರ ಆಯೋಜಿಸಿದ್ದ”ಶ್ರಮಿಕ ವರ್ಗ ಉಳಿಸಿ’ ಅಭಿಯಾನದಲ್ಲಿ ಗುದ್ದಲಿ, ಮಟ್ಟಗೋಲು ಹಾಗೂ ಕಾರ್ಮಿಕರಿಗೆ ಸಂಬಂಧಿಸಿದ ಭಿತ್ತಿಪತ್ರ ಪ್ರದರ್ಶಿಸಿ, 10 ಸಾವಿರರೂ. ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿದರು.
ಕೊರೊನಾ ಹಿನ್ನೆಲೆ ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರುಜೀವನ ನಿರ್ವಹಣೆ ಮಾಡಲಾಗದ ಸ್ಥಿತಿಯಲ್ಲಿ ಇದ್ದಾರೆ. ಇಂತಹಸಂದರ್ಭ ದಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ 2-3 ಸಾವಿರ ರೂ.ಯಾವು ದಕ್ಕೂ ಸಾಲದು. ಹೀಗಾಗಿ ತಕ್ಷಣ ಹತ್ತು ಸಾವಿರ ರೂ. ನೀಡಬೇಕೆಂದರು. ಶ್ರಮಿಕ ವರ್ಗ ಕೋವಿಡ್ಗೆ ತುತ್ತಾಗಿ ಮರಣ ಹೊಂದಿದಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಬೇಕು.
ಅವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಜವಾಬ್ದಾರಿ ತೆಗೆದುಕೊಳ್ಳಬೇಕು. ಜತೆಗೆ ಕಾರ್ಮಿಕ ಕಲ್ಯಾಣಮಂಡಳಿ ಯಲ್ಲಿರುವ 7000 ಕೋಟಿ ರೂ.ಗಳನ್ನು ಬಳಸಿಕೊಂಡುಶ್ರಮಿಕ ವರ್ಗಕ್ಕೆ ನೆರವಾಗಬೇಕೆಂದರು.ಶ್ರಮಿಕ ವರ್ಗ ಉಳಿಸಿ ಅಭಿಯಾನಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ಕುಮಾರ್ ಚಾಲನೆ ನೀಡಿದರು.
ಮೈಸೂರು ಗ್ರಾಮಾಂತರಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಅಧ್ಯಕ್ಷ ಎಚ್.ಕೆ.ಮಂಜುನಾಥ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ಅಭಿಯಾನದಲ್ಲಿ ಕಾರ್ಮಿಕ ವಿಭಾಗದ ರಾಜ್ಯ ಸಮಿತಿ ಕಾರ್ಯದರ್ಶಿಮಾವಿನಹಳ್ಳಿ ರವಿ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಾದ ಎಡತಲೆಮಂಜುನಾಥ್, ಶಿವಪ್ರಸಾದ್, ಉತ್ತನಹಳ್ಳಿ ಶಿವಣ್ಣ, ಕಡಕೊಳ ಭರತ್,ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಡೊನಾಲ್ಡ್, ದಡದಳ್ಳಿ ಮಹದೇವ್,ಕವಿತಾ ಕಾಳೆ, ಸಕಳ್ಳಿ ಬಸವರಾಜ್, ಎಂ.ಪಿ ಹೇಮಂತ್, ಕೆ.ಮಹೇಶ್,ಪ್ರಭು, ಸುನಿಲ್ಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.