ಕಾವೇರಿ ನೃತ್ಯ ತಂಡಕ್ಕೆ ಸಮಗ್ರ ಪ್ರಶಸ್ತಿ
Team Udayavani, Jun 15, 2018, 1:51 PM IST
ಹುಣಸೂರು: ಕರ್ನಾಟಕ ನ್ಪೋಟ್ಸ್ ಡ್ಯಾನ್ಸ್ ಅಸೋಷಿಯೇಷನ್ ಪ್ರಾಯೋಜಕತ್ವದಡಿ ಮೈಸೂರಿನಲ್ಲಿ ನಡೆದ ವಿಭಾಗ ಮಟ್ಟದ ವಿವಿಧ ನೃತ್ಯ ಸ್ಪರ್ಧೆಗಳಲ್ಲಿ ಹುಣಸೂರಿನ ಕಾವೇರಿ ಎಕ್ಸ್ಪ್ರೆಸ್ ಡ್ಯಾನ್ಸ್ ಅಕಾಡೆಮಿ ನೃತ್ಯ ತಂಡ ಸಮಗ್ರ ಚಾಂಪಿಯನ್ ಶಿಪ್ ಪಡೆದುಕೊಂಡಿದೆ.
ಮೈಸೂರಿನ ಟೆರೇಷಿಯನ್ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ನ್ಪೋರ್ಟ್ಸ್-ಡ್ಯಾನ್ಸ್ ಚಾಂಪಿಯನ್ಶಿಪ್-2018-19ರ ಸ್ಪರ್ಧೆಗಳಲ್ಲಿ ಡ್ಯಾನ್ಸ್ ಅಕಾಡೆಮಿಯ 14 ಮಂದಿ ನೃತ್ಯಪಟುಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆಂದು ಅಕಾಡೆಮಿಯ ಮುಖ್ಯಸ್ಥ ಬನ್ನಿಕುಪ್ಪೆ ಮಹದೇವಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜೂನಿಯರ್ ವಿಭಾಗದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ತಂಡ ಹಾಗೂ ಜಾನಪದ ವಿಭಾಗದ ಇಬ್ಬರು ಸ್ಪರ್ಧಿಗಳು ನಡೆಸುವ ನೃತ್ಯ ವಿಭಾಗದ 14 ವರ್ಷ ವಯೋಮಾನದ ಸ್ಪರ್ಧಿಗಳ ಪೈಕಿ ಅಕಾಡೆಮಿಯ ಅನಿಲ್ ಮತ್ತು ದೀûಾ ಜೋಡಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನಗಳಿಸಿದೆ. 12 ವರ್ಷದೊಳಗಿನ ವಿಭಾಗದಲ್ಲಿ ಚೈನ್ಯ ಹಾಗೂ ಸತ್ಯ ಬೆಳ್ಳಿ ಪದಕ ಪಡೆದಿದ್ದಾರೆ.
ಸೋಲೋ(ಪಾಶ್ಚಾತ್ಯ ನೃತ್ಯ) ಡ್ಯಾನ್ಸ್ ವಿಭಾಗದಲ್ಲಿ ಅನಿಲ್ ಚಿನ್ನ ಮತ್ತು ದೀûಾ ಬೆಳ್ಳಿ ಪದಕ ಗಳಿಸಿದ್ದರೆ, 19 ವರ್ಷ ವಯೋಮಾನದ ವಿಭಾಗದಲ್ಲಿ ಶಂಕರ್ ಬೆಳ್ಳಿಪದಕ ಗಿಟ್ಟಿಸಿಕೊಂಡಿದ್ದಾರೆ. 12 ವರ್ಷದ ವಿಭಾಗದಲ್ಲಿ ಚೈತನ್ಯ ಹಾಗೂ ಸತ್ಯ ಕಂಚಿನ ಪದಕ ಗಳಿಸಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
Mysuru Dasara: ಎದೆ ಝಲ್ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.