ಚಾಮನಹಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ


Team Udayavani, Jan 30, 2018, 12:44 PM IST

m5-chamana.jpg

ತಿ.ನರಸೀಪುರ: ತಾಲೂಕಿನ ಚಾಮನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಿ.ವೈ.ರಂಗಸ್ವಾಮಿ, ಉಪಾಧ್ಯಕ್ಷರಾಗಿ ಚನ್ನಮಲ್ಲು ಅವರು ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗೊಂಡರು.

ತಾಲೂಕಿನ ಚಾಮನಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಿಂದಿನ ಅಧ್ಯಕ್ಷ ಬಿ.ವಿ.ವೆಂಕಟೇಗೌಡ ಹಾಗೂ ಉಪಾಧ್ಯಕ್ಷೆ ಪದ್ಮಮ್ಮ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಸಿ.ವೈ.ರಂಗಸ್ವಾಮಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚನ್ನಮಲ್ಲು ಅವರಿಬ್ಬರೇ ನಾಮಪತ್ರವನ್ನು ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಸಂಘದ 11 ಮಂದಿ ನಿರ್ದೇಶಕರಲ್ಲಿ 9 ಮಂದಿ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಅನುಮೋದನೆ ನೀಡಿದರು. ಚುನಾವಣಾಧಿಕಾರಿಯಾಗಿ ಎಂಡಿಸಿಸಿ ಬ್ಯಾಂಕ್‌ನ ರವಿ ಕಾರ್ಯನಿರ್ವಹಿಸಿದರು. ಆಯ್ಕೆ ಪ್ರಕ್ರಿಯೆಯ ನಂತರ ನಿರ್ದೇಶಕರು, ಷೇರುದಾರ ಸದಸ್ಯರು ಹಾಗೂ ಸಾರ್ವಜನಿಕರಿಗೆ ಸಿಹಿಯನ್ನು ವಿತರಿಸಲಾಯಿತು.

ನಿರ್ವಹಣೆ ಸುಭದ್ರವಾಗಿರಲಿ: ತಾಲೂಕಿನಲ್ಲಿ ಉತ್ತಮ ಹೆಸರು ಗಳಿಸಿರುವ ಚಾಮನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ವಹಣೆ ಸಮರ್ಪಕವಾಗಿ ನಡೆಸಿಕೊಂಡು ಹೋಗುವ ಮೂಲಕ ರೈತರಿಗೆ ಉತ್ತಮ ಸೇವೆಗಳನ್ನು ಸಲ್ಲಿಸಬೇಕು. ಸಂಘದ ಆಡಳಿತ ಮಂಡಳಿಯ ನಿರ್ದೇಶಕರು ಪûಾತೀತವಾಗಿ ಒಗ್ಗಟ್ಟನ್ನು ಕಾಪಾಡಿಕೊಳ್ಳಬೇಕು ಎಂದು ಮಾಜಿ ಶಾಸಕಿ ಜೆ.ಸುನೀತಾ ವೀರಪ್ಪಗೌಡ ಸಲಹೆ ನೀಡಿದರು.

ರೈತ ಸೇವೆಗೆ ಸಹಕಾರಿ: ತಾಲೂಕಿನ ಚಾಮನಹಳ್ಳಿನ ನಿವಾಸದಲ್ಲಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಂದ ಸನ್ಮಾನ ಹಾಗೂ ಕೃತಜ್ಞತೆಗಳನ್ನು ಸ್ವೀಕರಿಸಿ ಮಾತನಾಡಿ, ಸಂಘಟನೆಯನ್ನು ಕ್ರೂಡೀಕರಿಸಿ ರೈತಪರ ಸೇವೆಯನ್ನು ಸಲ್ಲಿಸಲು ಸಹಕಾರಿ ಕ್ಷೇತ್ರ ಯೋಗ್ಯವಾಗಿರುವುದರಿಂದ ಸಹಕಾರಿಗಳ ನಡುವಿನ ಒಗ್ಗಟ್ಟು ಭದ್ರವಾಗಿರಲಿ ಎಂದು ಕಿವಿಮಾತು ಹೇಳಿದರು.

ಮಾಜಿ ಅಧ್ಯಕ್ಷರಾದ ಬಿ.ವಿ.ವೆಂಕಟೇಗೌಡ, ಚಾಮೇಗೌಡ, ಸಿ.ಚಾಮು, ಮಾಜಿ ಉಪಾಧ್ಯಕ್ಷೆ ಪದ್ಮಮ್ಮ, ನಿರ್ದೇಶಕರಾದ ಲಕ್ಷ್ಮಮ್ಮ, ಎಂ.ಪ್ರವೀಣ್‌ಕುಮಾರ್‌, ನಿಂಗರಾಜು, ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಹೆಚ್‌.ಎಸ್‌.ಕೃಷ್ಣ, ಮುಖಂಡರಾದ ಸಿ.ಎಂ.ಶಶಿಭೂಷಣ್‌, ಸಿ.ಎಸ್‌.ಸತೀಶ್‌, ಹನುಮನಾಳು ದಯಾನಂದಕುಮಾರ್‌,

ಮಾದೇಗೌಡ, ಯಡಹಳ್ಳಿ ಪುಟ್ಟರಂಗಣ್ಣ, ಡಿ.ಸಿ.ನಾಗೇಂದ್ರ, ಮೀಸೆ ರಂಗಸ್ವಾಮಿ, ಮಹದೇವಣ್ಣ, ರಾಮಣ್ಣ, ಎಸ್‌.ಸಿ.ಪ್ರಕಾಶ್‌, ಜಗದೀಶ್‌, ಸಿದ್ದೇಗೌಡ, ವರದರಾಜು, ಸಂಘದ ಗುಮ್ಮಾಸ್ತ ಸಿ.ಪಿ.ಮಹದೇವ, ಸಿಬ್ಬಂಧಿಗಳಾದ ಮಂಚೇಗೌಡ, ಸಿ.ಆರ್‌.ಕೃಷ್ಣಮೂರ್ತಿ ಹಾಗೂ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.