![ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ](https://www.udayavani.com/wp-content/uploads/2024/07/ks-es-415x229.jpg)
ವಿಜೃಂಭಣೆಯಿಂದ ನಡೆದ ಆಂಜನೇಯಸ್ವಾಮಿ ರಥೋತ್ಸವ
Team Udayavani, Apr 6, 2017, 1:12 PM IST
![mys6.jpg](https://www.udayavani.com/wp-content/uploads/2017/04/6/mys6.jpg)
ಹುಣಸೂರು: ತಾಲೂಕಿನ ಹೊಸಕೋಟೆ (ತಟ್ಟೆಕೆರೆ ಗೇಟ್)ಯಲ್ಲಿ ಶ್ರೀರಾಮ ನವಮಿಯಂದು ಪುಟ್ಟ ಕಂದಮ್ಮಗಳನ್ನು ರಥದ ಕೆಳಗೆ ಮಲಗಿಸಿ ತೇರು ಎಳೆಯುವ, ಉತ್ಸವ ಮೂರ್ತಿಯನ್ನು ಉಯ್ನಾಲೆಯಲ್ಲಿಟ್ಟು ಪೂಜೆ ಸಲ್ಲಿಸಿ ಉಯ್ನಾಲೆಯಾಡಿಸುವ ಹಾಗೂ ಹೆಂಗಸರು – ಮಕ್ಕಳು ಸೇರಿದಂತೆ ಎಲ್ಲರು ಸೇರಿ ರಥ ಎಳೆದು ಪುನೀತರಾಗುವ ವಿಶಿಷ್ಟ, ವಿಜೃಂಭಣೆಯ ಶ್ರೀ ಆಂಜನೇಯ ಸ್ವಾಮಿ ರಥೋತ್ಸವದಲ್ಲಿ ಜನರು ಉತ್ಸುಕತೆಯಿಂದ ಭಾಗವಹಿಸಿದ್ದರು.
ಬೆಳಗ್ಗೆಯಿಂದಲೇ ಪೂಜಾ ವಿಧಿವಿಧಾನ ಆರಂಭಗೊಂಡು 10 ಗಂಟಗೆ ಬಣ್ಣಬಣ್ಣದ ಬಾವುಟ – ಹೂವಿನಿಂದ ಅಲಂಕೃತಗೊಂಡಿದ್ದ ರಥವನ್ನು ಹೆಂಗಸರು, ಮಕ್ಕಳೆನ್ನದೆ ಎಲ್ಲರೂ ಭಕ್ತಿಭಾವದಿಂದ ಎಳೆದರು. ಹುಣಸೂರು – ಹನಗೋಡು ಮುಖ್ಯರಸ್ತೆಯ ಹೊಸಕೋಟೆ ಕೆರೆಯವರೆಗೆ ಎಳೆದು ಮತ್ತೆ ಹಿಮ್ಮುಖವಾಗಿ ಎಳೆತಂದು ಮುಖ್ಯರಸ್ತೆ ಬದಿಯಲ್ಲಿ ನಿಲ್ಲಿಸಿದರು. ಸಂಜೆ ರಥವನ್ನು ಮತ್ತೆ ದೇವಸ್ಥಾನದ ಆವರಣಕ್ಕೆ ಎಳೆದು ತರಲಾಯಿತು.
ಉತ್ಸವ ಮೂರ್ತಿಗೆ ಉಯ್ನಾಲೆ: ಶ್ರೀರಾಮ, ಸೀತಾ, ಲಕ್ಷಣ, ಆಂಜನೇಯ ಉತ್ಸವ ಮೂರ್ತಿಯನ್ನು ರಥಕ್ಕೇರಿಸುವ ಮುನ್ನಾ ದೇವಾಲಯದಿಂದ ಮೆರವಣಿಗೆಯಲ್ಲಿ ತಂದು ಮಹಿಳೆಯರು ಪೂಜೆ ಸಲ್ಲಿಸಿ ನಂತರ ಉಯ್ನಾಲೆಯಾಡಿಸಿದರು. ನಂತರ ಉತ್ಸವ ಮೂರ್ತಿಯನ್ನು ರಥದ ಸುತ್ತ ಪ್ರದಕ್ಷಿಣೆ ಹಾಕಿಸಿ ರಥದ ಮೇಲಕ್ಕೇರಿಸಿದರು.
ತೇರಿನ ಕೆಳಗೆ ಕೈಗೂಸುಗಳು: ಸಂಪ್ರ ದಾಯದಂತೆ ರಥೋತ್ಸವಕ್ಕೂ ಮುನ್ನಾ 10ಕ್ಕೂ ಹೆಚ್ಚು ಮಕ್ಕಳನ್ನು ರಥದ ಕೆಳೆಗೆ ಮಲಗಿಸಿ ಹರಕೆ ತೀರಿಸಿದರು. ಹರಕೆ ಹೊತ್ತ 6 ತಿಂಗಳಿಂದ 3 ವರ್ಷದ ಪುಟ್ಟ ಮಕ್ಕಳನ್ನು ದೊಡ್ಡವರ ರಕ್ಷಣೆಯೊಂದಿಗೆ ರಥದ ಕೆಳಗೆ ಸಾಲಾಗಿ ಮಲಗಿಸಿ ನಂತರ ರಥವನ್ನು ಭಕ್ತಿ ಭಾವದಿಂದ ಎಳೆದರು.
ಅನ್ನದಾನ: ಜಾತ್ರೆಗೆ ಸುತ್ತಮುತ್ತಲ ಗ್ರಾಮಸ್ಥರು ಹಾಗೂ ದೂರದ ಊರುಗಳಿಂದ ಬರುವ ಸುಮಾರು 5 ಸಾವಿರಕ್ಕೂ ಹೆಚ್ಚು ಭಕ್ತಾದಿಗಳಿಗೆ ದೇವಸ್ಥಾನ ಸಮಿತಿಯಿಂದ ಊಟ ವ್ಯವಸ್ಥೆ ಕಲ್ಪಿಸಲಾಗಿತ್ತು. ಹರಕೆ ಹೊತ್ತವರು ಹಾಗೂ ಭಕ್ತರು ಊಟದ ವ್ಯವಸ್ಥೆಗಾಗಿ ಅಕ್ಕಿ, ತರಕಾರಿ ನೀಡುವ ಮೂಲಕ ನೆರವಾದರು. ರಥೋತ್ಸವ ನಂತರ ಕೋಸಂಬರಿ, ಪಾನಕ ವಿತರಿಸಲಾಯಿತು. ಎಸ್ಐ ಪುಟ್ಟಸ್ವಾಮಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಇಂದು ತೆಪ್ಪೋತ್ಸವ: ಗುರುವಾರ ಸಂಜೆ 4 ಗಂಟೆಗೆ ತಟ್ಟೆಕೆರೆ ಗೇಟ್ ಹೊಸಕೋಟೆ ಕೆರೆಯಲ್ಲಿ ತೆಪ್ಪೋತ್ಸವ ನಂತರ ಹೊಸಕೋಟೆ ಗ್ರಾಮದಲ್ಲಿ ದೇವರ ಉತ್ಸವ ನಡೆಯಲಿದೆ.
ಟಾಪ್ ನ್ಯೂಸ್
![ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ](https://www.udayavani.com/wp-content/uploads/2024/07/ks-es-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![robbers](https://www.udayavani.com/wp-content/uploads/2024/06/robbers-1-150x89.jpg)
Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ
![Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!](https://www.udayavani.com/wp-content/uploads/2024/06/tiger-2-150x83.jpg)
Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!
![5-hunsur](https://www.udayavani.com/wp-content/uploads/2024/06/5-hunsur-1-150x90.jpg)
Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ
![Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು](https://www.udayavani.com/wp-content/uploads/2024/06/hunasur-1-150x78.jpg)
Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು
![Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ](https://www.udayavani.com/wp-content/uploads/2024/06/hunasur-150x86.jpg)
Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ
MUST WATCH
ಹೊಸ ಸೇರ್ಪಡೆ
![ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ](https://www.udayavani.com/wp-content/uploads/2024/07/ks-es-150x83.jpg)
Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ
![ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು](https://www.udayavani.com/wp-content/uploads/2024/07/8-150x90.jpg)
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
![ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!](https://www.udayavani.com/wp-content/uploads/2024/07/team-india-150x100.jpg)
ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!
![Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ](https://www.udayavani.com/wp-content/uploads/2024/07/hassan-150x104.jpg)
Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ
![Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…](https://www.udayavani.com/wp-content/uploads/2024/07/crocodile-150x93.jpg)
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.