![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 12, 2021, 4:26 PM IST
ಪಿರಿಯಾಪಟ್ಟಣ: ತಾಲೂಕಿನ ಕಲ್ಕೆರೆ ಮತ್ತು ದೊಡ್ಡ ಬ್ಯಾಲಾಳು ಗ್ರಾಮದ ಅದಾನಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ದಲ್ಲಿ ಗುರುವಾರ ಬೆಳಗಿನ ಜಾವ 7 ಗಂಟೆಸಮಯದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆ ಯಲ್ಲಿ ಇಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ಭಯಭೀತರಾದ ಘಟನೆ ಗುರುವಾರ ನಡೆದಿದೆ.
ಚಿರತೆ ಇರುವ ಬಗ್ಗೆ ಇಲ್ಲಿನ ಸೋಲಾರ್ ಘಟಕದ ಸುರಕ್ಷತಾ ಅಧಿಕಾರಿ ಬಿ.ಸಿ.ತಮ್ಮಣ್ಣೇಗೌಡ ಎಂಬವರು ಕೂಡಲೇ ಪಿರಿಯಾಪಟ್ಟಣ ತಾಲೂಕು ವಲಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಗಾಬರಿಗೊಂಡ ಚಿರತೆ ಸೋಲಾರ್ ಘಟಕದ ಸುತ್ತಲೂ ಹಾಕಿರುವ ತಂತಿ ಹಾಗೂ ಮುಳ್ಳಿನ ಬೇಲಿ ಹಾರಲು ಪ್ರಯತ್ನಿಸಿದರೂ ಸಾಧ್ಯವಾ ಗಿಲ್ಲ. ನಂತರ ಸೋಲಾರ್ ಘಟಕದ ಮುಖ್ಯ ದ್ವಾರದ ವಾಹನ ನಿಲುಗಡೆ ಶೆಡ್ನಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ತಂಗಿದ್ದು, ನಂತರ ಗೇಟ್ ಮೂಲಕ ಹೊರ ಹೋಗಿ ಪಕ್ಕದಲ್ಲೇ ಇರುವ ಸಾಮಾಜಿಕ ಅರಣ್ಯ ಪ್ರದೇಶದತ್ತ ಹೊರಟಿದ್ದು, ನಂತರ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಚಿರತೆ ಹಿಡಿದು ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಡುವುದಾಗಿ ಸಿಬ್ಬಂದಿಗೆ ಧೈರ್ಯ ತುಂಬಿದ ನಂತರ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.