ಬಾಲಕನ ಬಲಿಗೆ ನೋಟು ಮುದ್ರಣದ ಕೆಮಿಕಲ್‌ ಕಾರಣವೇ?


Team Udayavani, Apr 18, 2017, 3:45 AM IST

17BNP-(18).jpg

ಮೈಸೂರು: ರಾಸಾಯನಿಕ ತ್ಯಾಜ್ಯಕ್ಕೆ ಸಿಲುಕಿ ಬಾಲಕನೊಬ್ಬ ಬಲಿಯಾಗಿರುವ ಘಟನೆ ರಾಜ್ಯದೆಲ್ಲೆಡೆ ತಲ್ಲಣ ಮೂಡಿಸಿದ್ದು,ವಾಟರ್‌ ಸೆನ್ಸಿಟಿವ್‌ ರಾಸಾಯನಿಕ ಪದಾರ್ಥಗಳಿಂದಲೇ ಈ ಅನಾಹುತ ಸಂಭವಿಸಿದೆ ಎನ್ನುವುದು ಖಚಿತವಾಗಿದೆ. ಆದರೆ, ಸ್ಪಷ್ಟವಾಗಿ ಯಾವ ರಾಸಾಯನಿಕ ವಸ್ತು ಮತ್ತು ಯಾರು ಇಲ್ಲಿ ತಂದು ಪೇರಿಸಿದ್ದಾರೆ ಎನ್ನುವುದು ಗೊತ್ತಾಗಿಲ್ಲ.

ಪರಿಸರ ಮಾಲಿನ್ಯ ಅಧಿಕಾರಿಗಳು ಮತ್ತು ಭೂಗರ್ಭ ವಿಜ್ಞಾನಿಗಳು ಜಿಲ್ಲಾಡಳಿತದ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ಮಣ್ಣಿನ ಸ್ಯಾಂಪಲ್‌ಗ‌ಳನ್ನು ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಘಟನಾ ಸ್ಥಳದಲ್ಲಿ ಮಣ್ಣಿನ ತಾಪಮಾನ 110 ಡಿಗ್ರಿ ಸೆ. ಇದ್ದು, ವಾತಾವರಣ ತಾಪಮಾನಕ್ಕಿಂತ ಹೆಚ್ಚಿದೆ. ಮಣ್ಣು ನಯವಾದ ಮರಳಿನಂತಿದ್ದು, ಬೂದು ಮಿಶ್ರಿತ ಕಂದು ಬಣ್ಣದಿಂದ ಕೂಡಿದೆ. ಸ್ಥಳದಲ್ಲಿ ಯಾವುದೇ ವಾಸನೆ ಅಥವಾ ಘಾಟು ಇಲ್ಲ ಎಂದು ತಜ್ಞರ ತಂಡ ಪ್ರಾಥಮಿಕ ವರದಿಯಲ್ಲಿ ತಿಳಿಸಿದೆ. 

ಸುತ್ತಮುತ್ತಲಿನ ಕೆಲವು ಕಾರ್ಖಾನೆಗಳು ವಿಷಯುಕ್ತ ರಾಸಾಯನಿಕ ಪದಾರ್ಥವನ್ನು ಸಂಸ್ಕರಿಸದೆ ಎಲ್ಲೆಂದರಲ್ಲಿ ವಿಲೇವಾರಿ ಮಾಡುತ್ತಿರುವುದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಮೈಸೂರಿನಲ್ಲಿರುವ ನೋಟು ಮುದ್ರಣ ಸಂಸ್ಥೆಯಿಂದ ತ್ಯಾಜ್ಯ ರಾಸಾಯನಿಕ ತಂದು ಅಲ್ಲಿ ಸುರಿಯಲಾಗುತ್ತಿದೆ. ಈ ತ್ಯಾಜ್ಯದಿಂದ ಬೆಂಕಿ ಹೊತ್ತಿಕೊಂಡು ಬಾಲಕನ ಸಾವು ಸಂಭವಿಸಿದೆ ಎಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ. ಇದಕ್ಕೆ  ದನಿಗೂಡಿಸಿರುವ ಮೈಸೂರು ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ಸುರೇಶ್‌ ಕುಮಾರ್‌ ಜೈನ್‌, ಭಾರತೀಯ ನೋಟು ಮುದ್ರಣ ಘಟಕದತ್ತ ಬೊಟ್ಟು ಮಾಡುತ್ತಾರೆ. ಪ್ರಿಂಟಿಂಗ್‌ ಕೆಮಿಕಲ್‌ ಅನ್ನು ಅವೈಜಾnನಿಕವಾಗಿ ಆರ್‌ಬಿಐ ವಿಲೇವಾರಿ ಮಾಡುತ್ತಿದೆ ಎಂದು ನಾಲ್ಕೈದು ವರ್ಷಗಳ ಹಿಂದೆಯೇ ಸಂಘದಿಂದ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ತ್ಯಾಜ್ಯ ಸಂಸ್ಕರಣಾ ಘಟಕವನ್ನೂ ಸ್ಥಾಪಿಸಿಲ್ಲ ಎಂದು ಆರೋಪಿಸಿದ್ದಾರೆ.

ಫಾಸ್ಪರಸ್‌, ಸೋಡಿಯಂ ಹೈಡ್ರೇಡ್‌ನ‌ಂಥ ವಾಟರ್‌ ಸೆನ್ಸಿಟಿವ್‌ ಕೆಮಿಕಲ್‌ಗ‌ಳಿಂದ ಈ ದುರಂತ ಸಂಭವಿಸಿರಬಹುದು. ಈ ರಾಸಾಯನಿಕ ತ್ಯಾಜ್ಯಗಳು ನೀರಿನ ಅಂಶ ಬಿದ್ದ ಕೂಡಲೇ ಪ್ರತಿಕ್ರಿಯೆ ನೀಡುತ್ತವೆ ಎನ್ನುವುದು ವಿಜ್ಞಾನಿಗಳ ಹೇಳಿಕೆ. 

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್‌ , ಈ ಬಗ್ಗೆ ಪ್ರತಿಕ್ರಿಯಿಸಿರುವ ಮಣ್ಣಿನ ಮಾದರಿಯನ್ನು ಪರೀಕ್ಷಿಸಿದಾಗ ಅದರಲ್ಲಿ ಪಿಎಚ್‌-7.0 ಇತ್ತು. ಇದು ಸಾಮಾನ್ಯವಾಗಿದ್ದು,  ಫಾಸ್ಪರಸ್‌, ಸೋಡಿಯಂ ಹೈಡ್ರೇಡ್‌ ಇದೆಯಾ, ಇದ್ದರೆ ಎಷ್ಟು ಪ್ರಮಾಣದಲ್ಲಿದೆ ಹಾಗೂ ಎಲ್ಲಿಂದ ಅದು ಬರುತ್ತಿದೆ ಈ ಮಾಹಿತಿಗಳೆಲ್ಲವೂ ಪ್ರಯೋಗಾಲಯದಿಂದ ವರದಿ ಬಂದ ನಂತರ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ. 

ನನ್ನ ಮಗನ ಸಾವಿಗೆ ಸುತ್ತಮುತಲಿನ ಕಾರ್ಖಾನೆಗಳವರೇ ಕಾರಣ. ಮುಂಚೆಯೇ ಅಧಿಕಾರಿಗಳು ಎಚ್ಚರವಹಿಸಿದ್ದರೆ ನನ್ನ ಮಗನಿಗೆ ಈ ಸ್ಥಿತಿ ಬರುತ್ತಿರಲಿಲ್ಲ. ಇನ್ನೊಬ್ಬರಿಗೆ ಈ ರೀತಿ ಆಗದಂತೆ ಇನ್ನಾದರೂ ಎಚ್ಚರವಹಿಸಲಿ.
– ಮೂರ್ತಿ, ಮೃತ ಬಾಲಕ ಹರ್ಷಲ್‌ ತಂದೆ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.