![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 19, 2023, 6:57 PM IST
ಹುಣಸೂರು: ಶಾಲೆಯ ಪುಟ್ಟ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಮುಖ್ಯಶಿಕ್ಷಕನನ್ನು ಸ್ಥಳಕ್ಕೆ ಕರೆಸಬೇಕು. ಆತನ ವಿರುದ್ದ ಕಠಿಣ ಕ್ರಮವಾಗಬೇಕೆಂದು ಆಗ್ರಹಿಸಿ ತಾಲೂಕಿನ ಹೊಸವಾರಂಚಿಯ ಗ್ರಾಮಸ್ಥರು, ಪೋಷಕರು ಆಗ್ರಹಿಸಿದ ಘಟನೆ ನಡೆಸಿದೆ.
ಹೊಸವಾರಂಚಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ 58ವರ್ಷದ ಎಸ್.ಕೃಷ್ಣಮೂರ್ತಿಯೇ ಆರೋಪಿಯಾಗಿದ್ದು. ಈತನ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತ ತಲೆ ಮರೆಸಿಕೊಂಡಿದ್ದಾನೆ.
ಘಟನೆಯಿಂದ ಆಕ್ರೋಶಭರಿತರಾದ ಪೋಷಕರು ಹಾಗೂ ಗ್ರಾಮಸ್ಥರು ಮಂಗಳವಾರ ಶಾಲೆ ಬಳಿ ಜಮಾಯಿಸಿ ಮುಖ್ಯಶಿಕ್ಷಕನ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.ಈತ ಹಲವಾರು ದಿನಗಳಿಂದ ಶಾಲೆಯ ಹೆಣ್ಣು ಮಕ್ಕಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ. ಅಲ್ಲದೆ ಯಾರಿಗೂ ಹೇಳದಂತೆ ಬೆದರಿಕೆ ಹಾಕುತ್ತಿದ್ದ. ಕಳೆದ ಶನಿವಾರ ಶಾಲೆಗೆ ಗೈರುಹಾಜರಾಗಿದ್ದನ್ನು ಕಂಡ ಮಕ್ಕಳು ಸಹ ಶಿಕ್ಷಕರ ಮುಂದೆ ತಮ್ಮಗೋಳನ್ನು ಹೇಳಿಕೊಂಡಿದ್ದಾರೆ.
ಪೋಷಕರಿಗೂ ಮಾಹಿತಿ ನೀಡಿದ್ದಾರೆ. ಈ ವಿಷಯವನ್ನು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮುಟ್ಟಿಸಿದ್ದಾರೆ.
ವಿಷಯ ತಿಳಿದ ಬಿಇಓ ರೇವಣ್ಣ ಮತ್ತಿತರ ಅಧಿಕಾರಿಗಳ ತಂಡ ಮಂಗಳವಾರದಂದು ಶಾಲೆಗೆ ಭೇಟಿ ನೀಡಿತ್ತು. ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡರು. ಈ ವೇಳೆ ಮಕ್ಕಳು ಮುಖ್ಯ ಶಿಕ್ಷಕ ಕೃಷ್ಣಮೂರ್ತಿಯಿಂದ ಆಗುತ್ತಿದ್ದ ಕಿರುಕುಳವನ್ನು ಅಧಿಕಾರಿಗಳೊಂದಿಗೆ ತಿಳಿಸಿದ್ದಾರೆ.
ಮಕ್ಕಳೊಂದಿಗೆ ಅನುಚಿತವಾಗಿ ವರ್ತಿಸಿರುವ ಮುಖ್ಯ ಶಿಕ್ಷಕನನ್ನು ಕೆಲಸದಿಂದಲೇ ವಜಾ ಮಾಡಬೇಕೆಂದು ಪೋಷಕರು, ಗ್ರಾಮದ ಮುಖಂಡರು ಆಗ್ರಹಿಸಿದರು.
ಈ ಬಗ್ಗೆ ಬಿಇಓ ರೇವಣ್ಣರಿಗೆ ದೂರು ನೀಡಿದ ಗ್ರಾಮದ ಯಜಮಾನರಾದ ಮಹೇಶ್, ಶಿವಕುಮಾರ್, ಎಸ್.ಡಿ.ಎಂ.ಸಿ.ಅಧ್ಯಕ್ಷೆ ರಜನಿ, ಮುಖಂಡರಾದ ಮಹೇಶ್, ಎಚ್.ಕೆ.ರಮೇಶ್, ಚಂದ್ರೇಗೌಡ ಒತ್ತಾಯಿಸಿದರು.
ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಆರೋಪಿ ವಿರುದ್ದ ಕ್ರಮವಹಿಸುವಂತೆ ಡಿಡಿಪಿಐಯವರಿಗೆ ವರದಿ ನೀಡಿದ್ದೇನೆ. ಅಲ್ಲದೇ ಗ್ರಾಮಾಂತರ ಪೊಲೀಸ್ ಠಾಣೆಗೂ ಸಹ ಕ್ರಮಕ್ಕೆ ದೂರು ನೀಡಲಾಗಿದೆ ಎಂದು ಬಿಇಓ ರೇವಣ್ಣ ತಿಳಿಸಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.