ಜ.31ರವೆರೆಗೆ ಸ್ವಚ್ಛ ಸರ್ವೇಕ್ಷಣೆ


Team Udayavani, Jan 7, 2019, 6:04 AM IST

m1-ja31.jpg

ಮೈಸೂರು: ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಸತತವಾಗಿ ಪ್ರಶಸ್ತಿ ಪಡೆಯುತ್ತಿರುವ ಸಾಂಸ್ಕೃತಿಕ ರಾಜಧಾನಿ ಮೈಸೂರು ನಗರವು ಮತ್ತೂಮ್ಮೆ ಸ್ವಚ್ಛ ಸರ್ವೇಕ್ಷಣೆಗೆ ಸಿದ್ಧವಾಗಿದೆ. ಪ್ರಸಕ್ತ ಸಾಲಿನ ಸರ್ವೇಕ್ಷಣೆ ಜ. 4 ರಿಂದ ಆರಂಭವಾಗಿದ್ದು, 31 ರವರೆಗೆ ನಡೆಯಲಿದೆ ಎಂದು ಮೇಯರ್‌ ಪುಷ್ಪಲತಾ ಜಗನ್ನಾಥ್‌ ಹೇಳಿದರು. 

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅವಧಿಯಲ್ಲಿ ಸರ್ವೇಕ್ಷಣಾ ತಂಡ ಮೈಸೂರಿಗೆ ಭೇಟಿ ನೀಡುವ ಸಾಧ್ಯತೆ ಇದೆ. 2015 ಮತ್ತು 2016ರಲ್ಲಿ ಸ್ವಚ್ಛತಾ ಸರ್ವೇಕ್ಷಣೆಯಲ್ಲಿ ದೇಶದಲ್ಲಿಯೇ ನಂ. 1 ಸ್ಥಾನದಲ್ಲಿದ್ದ ಮೈಸೂರು ನಗರ 2017ರಲ್ಲಿ ಐದನೇ ಸ್ಥಾನ ಮತ್ತು 2018ರಲ್ಲಿ 3 ರಿಂದ 10 ಲಕ್ಷದೊಳಗಿನ ಜನಸಂಖ್ಯೆ ಹೊಂದಿದ ನಗರಗಳ ಪೈಕಿ ಮೈಸೂರು ಪ್ರಥಮ ಸ್ಥಾನಗಳಿಸಿತ್ತು. ಅದರಂತೆ 2019ರ ಸರ್ವೇಕ್ಷಣೆ ಆರಂಭ‌ವಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.

ಟೋಲ್‌ ಫ್ರೀ ಸಂಖ್ಯೆಗೆ ಕರೆ ಮಾಡಿ: ಆರೋಗ್ಯಾಧಿಕಾರಿ ಡಾ. ಎಚ್‌. ನಾಗರಾಜು ಮಾತನಾಡಿ, ಜ. 20 ರಂದು ಸರ್ವೇಕ್ಷಣೆ ತಂಡದ ಅಧಿಕಾರಿಗಳು ಮೈಸೂರಿಗೆ ಭೇಟಿ ನೀಡುವ ಸಾಧ್ಯತೆ ಇದೆ. 1250 ಅಂಕಗಳಿಗೆ ಸಾರ್ವಜನಿಕರ ಅಭಿಪ್ರಾಯ ನೀಡುವ ಅಗತ್ಯವಿದೆ. ಸಾರ್ವಜನಿಕರು ಟೋಲ್‌ ಫ್ರೀ ಸಂಖ್ಯೆ 1969ಕ್ಕೆ ಕರೆ ಮಾಡಿ ಏಳು ಪ್ರಶ್ನೆಗಳಿಗೆ ಉತ್ತರಿಸಬೇಕು.

ಕರೆ ಮಾಡಿದಾಗ ತಾವು ಸ್ವಚ್ಛತಾ ಸರ್ವೇಕ್ಷಣೆಯಲ್ಲಿ ಪಾಲ್ಗೊಂಡಿದ್ದೀರಾ? ಎಂಬ ಪ್ರಶ್ನೆಗೆ ಹೌದು ಎಂದು ಉತ್ತರಿಸಿದ ಕೂಡಲೇ  ಫೋನ್‌ ಕಟ್‌ ಆಗುತ್ತದೆ. ಬಳಿಕ ಸರ್ವೇಕ್ಷಣೆಯಿಂದಲೇ ಕರೆ ಬರುತ್ತದೆ. ಆಗ ಸ್ಥಳೀಯ ಎಸ್‌ಟಿಡಿ ಕೋಡ್‌ ನಮೂದಿಸಿದರೆ ಅವರು ನಗರದ ಸರ್ವೇಕ್ಷಣೆಗೆ ಸಂಬಂಧಿಸಿದಂತೆ ಏಳು ಪ್ರಶ್ನೆ ಕೇಳುತ್ತಾರೆ. ಅದಕ್ಕೆ ಸೂಕ್ತ ಉತ್ತರ ನೀಡಿಬೇಕು ಎಂದು ಅವರು ಕೋರಿದರು.

ಖುದ್ದು ಪರಿಶೀಲನೆ: ಇದಲ್ಲದೆ 1250 ಅಂಕಗಳಿಗೆ ನಗರದ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಈ ಖುದ್ದು ಪರಿಶೀಲನೆಯ ಸಂದರ್ಭದಲ್ಲಿ ಛಾಯಾಚಿತ್ರದೊಡನೆ ಎಲ್ಲಾ ಮಾಹಿತಿಯನ್ನು ಕಲೆಹಾಕುತ್ತಾರೆ. ಉಳಿದ 1250 ಅಂಕಗಳಿಗೆ ಅಗತ್ಯ ದಾಖಲಾತಿ ಸಲ್ಲಿಸಬೇಕಿರುತ್ತದೆ. ಇದಕ್ಕೆ ಸಂಬಂಧಿಸಿದಂತೆ ನಗರ ಪಾಲಿಕೆಯು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಕರಪತ್ರ ವಿತರಣೆ: ಸರ್ವೇಕ್ಷಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕರಪತ್ರ ಹಂಚಲಾಗುತ್ತಿದೆ. ಧ್ವನಿವಧ‌ìಕದ ಮೂಲಕ ಪ್ರಚಾರ ಮಾಡಲಾಗುತ್ತಿದೆ. ನಂತರ ಕಸವನ್ನು ಮೂಲೆಯಲ್ಲಿ ಬೇರ್ಪಡಿಸಲಾಗುತ್ತಿದೆ. ಪೌರ ಕಾರ್ಮಿಕರು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, ಈ ಸರ್ವೇಕ್ಷಣೆ ಕಾರ್ಯಕ್ಕಾಗಿ ಸಂಜೆ 5 ರವರೆಗೆ ಅವರ ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದರು.

ಮೊಬೈಲ್‌ ಆ್ಯಪ್‌: ಪ್ರಸ್ತುತ  ಸುಮಾರು 52 ಸಾವಿರ ಮಂದಿ ಮೊಬೈಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡಿದ್ದು, ಆ ಮೂಲಕವೂ ಸರ್ವೇಕ್ಷಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಫೀಡ್‌ಬ್ಯಾಕ್‌ ನೀಡಬಹುದು ಎಂದರು. ಮೇಯರ್‌ ಅಧ್ಯಕ್ಷತೆಯಲ್ಲಿ ಈಗಾಗಲೇ ನಗರದ ಎಲ್ಲಾ ವಾರ್ಡ್‌ನ ನಗರ ಪಾಲಿಕೆ ಸದಸ್ಯರ ಸಭೆ ನಡೆಸಿದ್ದು, ಅವರಿಗೆ ಸ್ವಚ್ಛ ಸರ್ವೇಕ್ಷಣೆ ಕುರಿತು ಅರಿವು ಮೂಡಿಸಲಾಗಿದೆ.

ಜತೆಗೆ ಅವರೂ ಕೂಡ ಸಾರ್ವಜನಿಕರಿಂದ ಅಗತ್ಯ ಫೀಡ್‌ಬ್ಯಾಕ್‌ ಕೊಡಿಸುವುದಾಗಿ ಒಪ್ಪಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಉಪ ಮೇಯರ್‌ ಶಫಿ ಅಹಮದ್‌, ನಗರ ಪಾಲಿಕೆ ಆಯುಕ್ತ ಕೆ.ಎಚ್‌. ಜಗದೀಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.