![Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ](https://www.udayavani.com/wp-content/uploads/2024/07/chirate-415x229.jpg)
ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಸಹೋದರಿ ರಂಜಿತಾ ಜೆಡಿಎಸ್ ಸೇರ್ಪಡೆ
Team Udayavani, Dec 14, 2022, 9:36 PM IST
![1-asdsadda](https://www.udayavani.com/wp-content/uploads/2022/12/1-asdsadda-620x387.jpg)
ಹುಣಸೂರು: ಮಾಜಿ ಶಾಸಕ ಎಸ್.ಚಿಕ್ಕಮಾದುರವರ ಪುತ್ರಿ, ಎಚ್.ಡಿ.ಕೋಟೆಯ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಅವರ ಸಹೋದರಿ ರಂಜಿತಾ ಚಿಕ್ಕಮಾದುರವರು ಜೆಡಿಎಸ್ ಪಕ್ಷವನ್ನು ಸೇರುತ್ತಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನ ಜೆ.ಪಿ.ಭವನದಲ್ಲಿ ಡಿ.15 ಮಧ್ಯಾಹ್ನ 1 ಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡರ ಸಮ್ಮುಖದಲ್ಲಿ ಪಕ್ಷ ಸೇರುತ್ತಿದ್ದು, ನಮ್ಮ ತಂದೆಗೆ ಎಂಎಲ್ಸಿ ಸ್ಥಾನ ಕಲ್ಪಿಸಿ ರಾಜಕೀಯ ಪುನರ್ಜನ್ಮ ನೀಡಿದ್ದು ಜೆಡಿಎಸ್ ಪಕ್ಷ, ಹೀಗಾಗಿ ತಮ್ಮ ತಂದೆಯವರ ಬೆಂಬಲಿಗರ ಆಶಯದಂತೆ ಯಾವುದೇ ಷರತ್ತುಗಳಿಲ್ಲದೆ ಪಕ್ಷ ಸೇರ್ಪಡೆಯಾಗುತ್ತಿದ್ದು, ಮುಂದೆ ಹುಣಸೂರಿನಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ತಮ್ಮ ತಂದೆಯವರ ಸಮಕಾಲಿನರು ಹಾಗೂ ಅಪಾರ ಬೆಂಬಲಿಗರೊಂದಿಗೆ ಸೇರ್ಪಡೆಯಾಗುವುದಾಗಿ ಉದಯವಾಣಿಗೆ ರಂಜಿತಾ ತಿಳಿಸಿದ್ದಾರೆ.
ಕೆಲವು ದಿನಗಳಿಂದ ಶಾಸಕ ಮಂಜುನಾಥ್ ಅವರ ಜೊತೆಯಲ್ಲಿ ಕ್ಷೇತ್ರದ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡುವ ವೇಳೆ ಕಾಣಿಸಿಕೊಂಡಿದ್ದ ರಂಜಿತಾ, ವಾರದಿಂದೀಚೆಗೆ ಹರೀಶ್ ಗೌಡ ಅವರ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದು ತಾಲೂಕಿನಲ್ಲಿ ಚರ್ಚೆಯಾಗಿತ್ತು. ಇದೀಗ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ರಂಜಿತಾರವರೇ ಹೇಳಿಕೆ ನೀಡಿರುವುದರಿಂದ ಚರ್ಚೆಗೆ ತೆರೆ ಎಳೆದಂತಾಗಿದೆ.
ಟಾಪ್ ನ್ಯೂಸ್
![Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ](https://www.udayavani.com/wp-content/uploads/2024/07/chirate-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
![Hunasuru](https://www.udayavani.com/wp-content/uploads/2024/07/Hunasuru-150x90.jpg)
Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು
![MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು](https://www.udayavani.com/wp-content/uploads/2024/07/vishwanarh-150x83.jpg)
MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು
![Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ](https://www.udayavani.com/wp-content/uploads/2024/07/hdk-150x83.jpg)
Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ
![Dengue-nagendra](https://www.udayavani.com/wp-content/uploads/2024/07/Dengue-nagendra-150x90.jpg)
Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.