ಸಂವಿಧಾನ ಆಪತ್ತಿನಲ್ಲಿಲ್ಲ, ಕಾಂಗ್ರೆಸ್‌ ಪಕ್ಷವೇ ಆಪತ್ತಿನಲ್ಲಿದೆ: ವಿ ಶ್ರೀನಿವಾಸ್ ಪ್ರಸಾದ್


Team Udayavani, Feb 29, 2024, 1:05 PM IST

ಸಂವಿಧಾನ ಆಪತ್ತಿನಲ್ಲಿಲ್ಲ, ಕಾಂಗ್ರೆಸ್‌ ಪಕ್ಷವೇ ಆಪತ್ತಿನಲ್ಲಿದೆ: ವಿ ಶ್ರೀನಿವಾಸ್ ಪ್ರಸಾದ್

ಮೈಸೂರು: ರಾಜ್ಯದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಅಂಬೇಡ್ಕರ್ ಸಂವಿಧಾನ ಜಾಥಾ ಅಲ್ಲ. ಅದು ಕಾಂಗ್ರೆಸ್ ಪ್ರೇರಿತ ಸಂವಿಧಾನ ಜಾಥಾ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಮಹದೇವಪ್ಪರ ಸಂವಿಧಾನ ಜಾಥಾ. ಐಕ್ಯತಾ ಸಮಾವೇಶದಲ್ಲಿ ಸಿದ್ದರಾಮಯ್ಯ ಆವೇಶಪೂರಿತ ಭಾಷಣ ಮಾಡಿದ್ದು ಸಂವಿಧಾನ ಜಾಗೃತಿ ಜಾಥಾನಾ?  ಸಂವಿಧಾನ ಆಪತ್ತಿನಲ್ಲಿಲ್ಲ, ಕಾಂಗ್ರೆಸ್‌ ಪಕ್ಷವೇ ಆಪತ್ತಿನಲ್ಲಿದೆ. ಕೇವಲ ಓಟಿಗಾಗಿ ಸಂವಿಧಾನ ಆಪತ್ತಿ‌ನಲ್ಲಿದೆ ಎಂದು ಗಿಮಿಕ್ ಮಾಡುತ್ತಿದ್ದಾರೆ ಎಂದು ಸಂಸದ ವಿ ಶ್ರೀನಿವಾಸ್ ಪ್ರಸಾದ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನಕ್ಕೆ ಆಪತ್ತು ಬಂದರೆ ನಾವೆಲ್ಲಾ ಸುಮ್ಮನಿರುತ್ತೇವಾ? ಸಂವಿಧಾನದ ಹೆಸರಿನಲ್ಲಿ ಕಾಂಗ್ರೆಸ್ ನವರು ರಾಜಕಾರಣ ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಸಂವಿಧಾನಕ್ಕೆ ಆಪತ್ತು ಬಂದಿದೆ ಎಂದು ಬಿಂಬಿಸುತ್ತಿದ್ದಾರೆ. ಸಂವಿಧಾನಕ್ಕೆ ಯಾವುದೇ ಅಪಾಯ ಬಂದಿಲ್ಲ ಎಂದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಈ ಮಾತನ್ನು ಐಎನ್ಡಿಐಎ ಮೈತ್ರಿಕೂಟದ ನಾಯಕರೇ ಹೇಳುತ್ತಿದ್ದಾರೆ. ನಾನು 25 ವರ್ಷ ಕಾಲ ಕಾಂಗ್ರೆಸ್ ನಲ್ಲಿದ್ದವನು. ಆಗ ಮುಂದೊಂದು ದಿನ ಕಾಂಗ್ರೆಸ್ ಗೆ ಇಂತಹ ದುಸ್ಥಿತಿ ಬರುತ್ತದೆ ಎಂದು ಊಹೆ ಕೂಡ ಮಾಡಿರಲಿಲ್ಲ. ತುರ್ತು ಪರಿಸ್ಥಿತಿ ಬಳಿಕ ಕಾಂಗ್ರೆಸ್ ಗೆ ಪರ್ಯಾಯವಾಗಿ ಜನತಾ ಪಕ್ಷ ಉದಯವಾದರೂ ಅದು ಮುಂದೆ ಬೆಳೆಯಲಿಲ್ಲ. ಆದರೀಗ ಕಾಂಗ್ರೆಸ್ ಗೆ ಪರ್ಯಾಯವಾಗಿ ಬಿಜೆಪಿ ದೊಡ್ಡ ಪಕ್ಷವಾಗಿ ಬೆಳೆದಿದೆ. ಪರಿಣಾಮ ಕಾಂಗ್ರೆಸ್ ದುಸ್ಥಿತಿಗೆ ತಲುಪಿದೆ ಎಂದರು.

ಸುವರ್ಣ ಮಹೋತ್ಸವ: ಮಾರ್ಚ್ 17 ರಂದು ಸಂಸದ ಶ್ರೀನಿವಾಸ್ ಪ್ರಸಾದ್ ರಾಜಕೀಯ ಪಯಣಕ್ಕೆ 50ವರ್ಷ ಪೂರೈಕೆ ಹಿನ್ನೆಲೆಯಲ್ಲಿ ಚುನಾವಣಾ ರಾಜಕೀಯ ಸುವರ್ಣ ಮಹೋತ್ಸವ ಅಭಿನಂದನೆ ಸಮಾರಂಭ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಈ ಬಗ್ಗೆ ಮಾತನಾಡಿದ ಶ್ರೀನಿವಾಸ ಪ್ರಸಾದ್, 1974 ಮಾರ್ಚ್ 17ರಿಂದ ಇಲ್ಲಿಯ ತನಕ ನಾನು 17 ಭಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೇನೆ. ವಿಧಾನಸಭೆ, ಲೋಕಸಭೆಯಲ್ಲಿ ಸ್ಪರ್ಧೆ ಮಾಡಿ ಸೋಲು ಗೆಲುವನ್ನು ಕಂಡಿದ್ದೇನೆ. ನನ್ನ ಅಭಿಮಾನಿಗಳೆಲ್ಲ ಸೇರಿ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರದ ಮಾಜಿ ಸಚಿವ ಪಿ ಜಿ ಆರ್ ಸಿಂದ್ಯಾ ಭಾಗಿಯಾಗಲಿದ್ದಾರೆ. ನನ್ನ ರಾಜಕೀಯ ಜೀವನದ ಕುರಿತು ನಾನೆ ಪುಸ್ತಕ ಬರೆದಿದ್ದೇನೆ. ಡಾ ಚಂದ್ರಶೇಖರ್ ರವರು ಅಭಿನಂದನಾ ಗ್ರಂಥ ಬಿಡುಗಡೆ ಮಾಡಲಿದ್ದಾರೆ ಎಂದರು.

ಸಂಸದರ ಅವಧಿ ಮುಗಿದ ಬಳಿಕ ನಾನು ಮತ್ತೆ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ಐವತ್ತು ವರ್ಷದ ರಾಜಕೀಯ ಅನುಭವದಲ್ಲಿ ಪಾರದರ್ಶಕ ಆಡಳಿತ ನೀಡಿದ್ದೇನೆ. ಅನೇಕ ಹೋರಾಟಗಳು ಏಳು ಬೀಳುಗಳು ನೋಡಿದ್ದೇನೆ. ಪಾರದರ್ಶಕ ಆಡಳಿತ ನೀಡಿದ್ದ ಆತ್ಮತೃಪ್ತಿ ನನಗಿದೆ ಎಂದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.