ಸಹಕಾರಿ ಸಂಘಗಳು ರೈತರ ಜೀವನಾಡಿ: ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ.ಡಿ.ಹರೀಶ್ ಗೌಡ


Team Udayavani, Jun 17, 2022, 6:58 PM IST

1-dsff

ಪಿರಿಯಾಪಟ್ಟಣ: ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳಾಗಿದ್ದು,ಇವುಗಳ ಪ್ರಗತಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ.ಡಿ.ಹರೀಶ್ ಗೌಡ ತಿಳಿಸಿದರು.

ತಾಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಿರ್ಮಿಸಿರುವ ನೂತನ ಗೋಡನ್ ಮತ್ತು ವಾಣಿಜ್ಯ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಜನತೆಗೆ ಸಹಕಾರ ಸಂಘಗಳು ಕಾಲಕಾಲಕ್ಕೆಅಗತ್ಯ ಸಾಲಸೌಲಭ್ಯಗಳನ್ನು ನೀಡುವ ಮೂಲಕ ರೈತರ ಪಾಲಿನ ಸಂಜೀವಿನಿಯಾಗಿದ್ದು, ಇವುಗಳಿಂದ ಸಾಲ ಪಡೆದುಕೊಂಡು ರೈತರು ಕೃಷಿ ಹಾಗೂ ಹೈನುಗಾರಿಕೆಯಲ್ಲಿ ಪ್ರಗತಿ ಸಾಧಿಸಿ ಆರ್ಥಿಕವಾಗಿ ಸಬಲರಾಗಬೇಕು. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ 275 ಕ್ಕೂ ಹೆಚ್ಚು ಕೃಷಿ ಪತ್ತಿನ ಸಹಕಾರ ಸಂಘಗಳಿದ್ದು ಇವುಗಳಲ್ಲಿ ಕೇವಲ 10 ರಿಂದ 20 ಮಾತ್ರ ವಿಶೇಷ ಗುಣಮಟ್ಟದ ಕಟ್ಟಡಗಳನ್ನು ಹೊಂದಿವೆ ಅವುಗಳಲ್ಲಿ ಹಿಟ್ನೆಹೆಬ್ಬಾಗಿಲು ಸಹಕಾರವು ಒಂದು ಕೂಡ ಒಂದು. ಸಹಕಾರ ಸಂಘಗಳನ್ನು ಸದೃಢ ಗೊಳಿಸುವ ನಿಟ್ಟಿನಲ್ಲಿ ರೈತರು ಸಹಕಾರ ನೀಡಬೇಕು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾಲಕಾಲಕ್ಕೆ ರೈತರಿಗೆ ಅಗತ್ಯವಾದ ರಸಗೊಬ್ಬರ, ಬಿತ್ತನೆಬೀಜ, ಸಾಲಸೌಲಭ್ಯಗಳನ್ನು ನೀಡುತ್ತಿವೆ. ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ 26 ಸಹಕಾರ ಸಂಘಗಳಿದ್ದು, ತಾಲ್ಲೂಕಿನ ಕಸಬಾ, ಹಿಟ್ನೆಹೆಬ್ಬಾಗಿಲು, ಹಲಗನಹಳ್ಳಿ, ದೊಡ್ಡಬ್ಯಾಲಾಳು ಸೇರಿದಂತೆ 6 ಸಹಕಾರ ಸಂಘಗಳ ಕಟ್ಟಡಕ್ಕಾಗಿ 2.9 ಕೋಟಿ ಹಣ ಬಿಡುಗಡೆ ಮಾಡಲಾಗಿ ಹಿಟ್ನೆಹೆಬ್ಬಾಗಿಲು ಸಹಕಾರ ಸಂಘದ ವತಿಯಿಂದ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ 16 ಲಕ್ಷ ಸಾಲ ನೀಡಲಾಗಿದೆ. ಇದಾದ ನಂತರ ತಾಲ್ಲೂಕಿನ ಕಸಬಾ ಸಹಕಾರ, ದೊಡ್ಡಬ್ಯಾಲಾಳು ಸಹಕಾರ ಸಂಘ, ಸೇರಿದಂತೆ 5 ಸಹಕಾರ ಸಂಘಗಳಿಗೆ ಕಟ್ಟಡ ನಿರ್ಮಿಸಲು ಅನುದಾನ ನೀಡಲಾಗಿದೆ. ತಾಲೂಕಿನ ಇತರೆ ಸಂಘಗಳಿಗೆ ಅನುದಾನ ನೀಡುತ್ತೇವೆ. ಹಿಟ್ನೆಹೆಬ್ಬಾಗಿಲು ಸಹಕಾರ ಸಂಘದಲ್ಲಿ ರೈತರಿಗೆ 738.92 ಲಕ್ಷ ಕೆಸಿಸಿ ಸಾಲ, 39.45 ಲಕ್ಷ ಸೌದೆ ಸಾಲ, 158.99 ಮಧ್ಯಮಾವಧಿ ಸಾಲ, 25.67 ಲಕ್ಷ ಲಿಂಕೇಜ್ ಸಾಲ, 85.74 ಲಕ್ಷ ಸ್ವಂತ ಬಂಡವಾಳ ಸಾಲ, 2021-22 ನೇ ಸಾಲಿನಲ್ಲಿ ಹುಸ ಸದಸ್ಯರಿಗೆ 11.27 ಲಕ್ಷ ಕೆಸಿಸಿ ಸಾಲ, 2022- 23 ನೇ ಸಾಲಿನಲ್ಲಿ 441.91 ಲಕ್ಷ ಸಾಲವನ್ನು ವಿತರಣೆ ಮಾಡಲಾಗಿದೆ ಎಂದರು.

ಶಾಸಕ ಕೆ.ಮಹದೇವ್ ಮಾತನಾಡಿ, ಹಿಂದೆ ತಾಲ್ಲೂಕಿನಲ್ಲಿ ಸಹಕಾರ ಸಂಘಗಗಳು ಪಟ್ಟಭದ್ರ ಹಿತಾಸಕ್ತಿಗಳ ಕೈಯಲ್ಲಿ ಸಿಲುಕಿ ಅಭಿವೃದ್ದಿ ಕಾಣದೆ ಭ್ರಷ್ಟಚಾರದ ಕೂಪವಾಗಿದ್ದವು, ಕಳೆದ 4 ವರ್ಷಗಳಿಂದ ಹೊಸದಾಗಿ ಆಯ್ಕೆಯಾಗಿ ಬಂದವರು ಉತ್ತಮವಾಗಿ ಕೆಲಸ ಮಾಡುವ ಮೂಲಕ ಜನರ ಕಷ್ಟಕಾರ್ಪಣ್ಯಗಳನ್ನು ಅರಿತು ಕೆಲಸ ಮಾಡುತ್ತಿದೆ. ಪ್ರತಿ ಸಹಕಾರಿ ಸಂಘಗಳು ರೈತರ ಕಷ್ಟಗಳನ್ನು ಅರಿತು ಅವರಿಗೆ ಸೂಕ್ತ ಕಾಲದಲ್ಲಿ ಸಾಲಗಳನ್ನು ವಿತರಿಸಬೇಕು. ಸಾಲ ಸೌಲಭ್ಯಗಳನ್ನು ಪಡೆದ ರೈತರು ಸಹ ಸಕಾಲಕ್ಕೆ ಸಾಲವನ್ನು ಮರು ಪಾವತಿ ಮಾಡಬೇಕು. ಆ ಮೂಲಕ ಕೃಷಿ ಪತ್ತಿನ ಸಂಘಗಳು ಜನರ ಆಶೊತ್ತರಗಳಿಗೆ ಪೂರವಕಾಗಿ ಕೆಲಸ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಎಂ.ಡಿಸಿಸಿ ಬ್ಯಾಂಕ್ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ಜನಾರ್ದನ್, ಉಪಾಧ್ಯಕ್ಷ ಸುನೀಲ್, ಸಂಘದ ಅಧ್ಯಕ್ಷ ಶಂಕರ್, ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ, ಎಂ.ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಸಿ.ಎನ್.ರವಿ, ನಿರ್ದೆಶಕ ಅನಿಲ್ ಕುಮಾರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಸಿಇಒ ಜಯರಾಂ, ಉಪಾಧ್ಯಕ್ಷೆ ಜ್ಯೋತಿ, ಸದಸ್ಯರಾದ ಪಿಕೆ.ಕೆ.ಹರೀಶ್, ಮುತ್ತೇಗೌಡ, ವಿನೋದ್ ಕುಮಾರ್, ರವಿ, ಗಾಯತ್ರಮ್ಮ, ಮಹದೇವ್, ನಾಗೇಂದ್ರ, ರಾಮನಾಯ್ಕ, ಜಗದೀಶ್, ಸಿಬ್ಬಂದಿಗಳಾದಹೆಚ್.ಕೆ.ನಟರಾಜ್, ಸಂತೋಷ್, ಶ್ರೀನಿವಾಸ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.