ಮೈಸೂರಲ್ಲಿ 3 ಕ್ಷೇತ್ರಗಳ ಮತ ಎಣಿಕೆ ಇಂದು


Team Udayavani, Jun 12, 2018, 2:07 PM IST

m1-mysorenalli.jpg

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆದಿರುವ ಚುನಾವಣೆಯ ಮತ ಎಣಿಕೆ ಮಂಗಳವಾರ ಬೆಳಗ್ಗೆ 8ರಿಂದ, ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದ್ದು, ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿಗಳಾದ ಮೈಸೂರು ಪ್ರಾದೇಶಿಕ ಆಯುಕ್ತೆ ಪಿ.ಹೇಮಲತಾ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತ ಎಣಿಕೆಯ ಸಿದ್ಧತೆ ಕುರಿತು ವಿವರ ನೀಡಿ, ಮೂರು ಕ್ಷೇತ್ರಗಳಿಗೂ ಒಬ್ಬರೇ ಚುನಾವಣಾಧಿಕಾರಿಗಳಾಗಿರುವುದರಿಂದ ಒಂದೇ ಹಾಲ್‌ನಲ್ಲಿ ಪ್ರತಿ ಕ್ಷೇತ್ರಕ್ಕೆ 14 ಟೇಬಲ್‌ಗ‌ಳಂತೆ  ಮೂರು ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. ಮೂರು ಕ್ಷೇತ್ರಗಳ ವ್ಯಾಪ್ತಿಗೆ ಹತ್ತು ಜಿಲ್ಲೆಗಳು ಬರುವುದರಿಂದ ಸಹಾಯಕ ಚುನಾವಣಾಧಿಕಾರಿಗಳಾಗಿರುವ ಹತ್ತು ಜಿಲ್ಲಾಧಿಕಾರಿಗಳು ಹಾಜರಿರಲಿದ್ದಾರೆ ಎಂದರು.

ಎಷ್ಟೆಷ್ಟು ಸಿಬ್ಬಂದಿ: ಮತ ಎಣಿಕೆಗೆ 35 ಅಧಿಕಾರಿಗಳು, 145 ಮಂದಿ ಎಣಿಕೆ ಮೇಲ್ವಿಚಾರಕರು ಮತ್ತು ಸಹಾಯಕರು, 60 ಮಂದಿ ಎಣಿಕೆ ಸಿಬ್ಬಂದಿ, 50 ಮಂದಿ ಡಿ ದರ್ಜೆ ನೌಕರರು, 25 ಮಂದಿ ಇತರೆ ಸಿಬ್ಬಂದಿ, 120 ಮಂದಿ ಪೊಲೀಸರು ಸೇರಿದಂತೆ ಎಣಿಕೆ ಕಾರ್ಯಕ್ಕೆ 435 ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಮತ ಎಣಿಕೆ ಟೇಬಲ್‌ ಬಳಿ ಅಭ್ಯರ್ಥಿ ಅಥವಾ ಎಜೆಂಟ್‌ ಮಾತ್ರ ಹಾಜರಿರಬಹುದು. ಚುನಾವಣಾಧಿಕಾರಿಗಳಿಂದ ಅನುಮತಿ ಪಡೆದ ಅಧಿಕಾರಿಗಳು, ಸಿಬ್ಬಂದಿ ಹೊರತುಪಡಿಸಿ ಇತರರು ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್‌ ಮತ್ತು ಕ್ಯಾಮರಾ ತರುವಂತಿಲ್ಲ. 

ಬೆಳಗ್ಗೆ 7.30ಕ್ಕೆ ಅಭ್ಯರ್ಥಿಗಳು ಅಥವಾ ಚುನಾವಣಾ ಏಜೆಂಟರ ಎದುರು ಭದ್ರತಾ ಕೊಠಡಿ ತೆರೆದು ಮತ ಪೆಟ್ಟಿಗೆಗಳನ್ನು ಎಣಿಕೆ ಕೊಠಡಿಗೆ ತರಲಾಗುವುದು, ಪದವೀಧರರ ಕ್ಷೇತ್ರದಲ್ಲಿ ಅಂಚೆ ಮತಪತ್ರಗಳನ್ನು ಮೊದಲಿಗೆ ಎಣಿಕೆ ಮಾಡಿದ ನಂತರ ಮತಪೆಟ್ಟಿಗೆಗಳನ್ನು ತೆರೆದು 25 ಮತಪತ್ರಗಳ ಮಿಶ್ರಣದ ಬಂಡಲ್‌ ಮಾಡಿ ಪ್ರತಿ ಟೇಬಲ್‌ಗೆ 500 ಮತಪತ್ರಗಳನ್ನು ಎಣಿಕೆಗೆ ನೀಡಲಾಗುವುದು. 

13ರ ಬೆಳಗ್ಗೆವರೆಗೂ ಮತ ಎಣಿಕೆ ಪ್ರಕ್ರಿಯೆ: ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿ ಯಾರೊಬ್ಬರೂ ನಿಗದಿತ ಕೋಟಾ ತಲುಪದಿದ್ದಲ್ಲಿ, ಕಡಿಮೆ ಮತ ಪಡೆದವರ ಮತಗಳನ್ನು ವರ್ಗಾವಣೆ ಮಾಡುತ್ತಾ ಬರಲಾಗುವುದು, ಹೀಗಾಗಿ ಜೂ.13ರ ಬೆಳಗ್ಗೆವರೆಗೂ ಮತ ಎಣಿಕೆ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿಸಿದರು.

ದಕ್ಷಿಣ ಶಿಕ್ಷಕರ ಕ್ಷೇತ್ರದ ಒಟ್ಟು 20677 ಮತದಾರರ ಪೈಕಿ 16707 ಮಂದಿ ಮತಚಲಾಯಿಸಿದ್ದರೆ, ನೈರುತ್ಯ ಶಿಕ್ಷಕರ ಕ್ಷೇತ್ರದ 20481 ಮತದಾರರ ಪೈಕಿ 16477 ಮಂದಿ ಮತ ಚಲಾಯಿಸಿದ್ದಾರೆ. ನೈರುತ್ಯ ಪದವೀಧರರ ಕ್ಷೇತ್ರದ 67306 ಮತದಾರರ ಪೈಕಿ 47124 ಮಂದಿ ಮತಚಲಾಯಿಸಿದ್ದಾರೆ. ಇದರಲ್ಲಿ ತಿರಸ್ಕೃತಗೊಳ್ಳುವ ಮತಪತ್ರಗಳನ್ನು ಹೊರತುಪಡಿಸಿ  ಎಣಿಕೆಗೆ ಸಿಂಧುವಾದ ಮತಗಳ ಆಧಾರದ ಮೇಲೆ ಅಭ್ಯರ್ಥಿಯ ಕೋಟಾ ನಿಗದಿಪಡಿಸಲಾಗುವುದು ಎಂದು ಅವರು ವಿವರಿಸಿದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.