ದಸರೆಗೆ ದೀಪಾಲಂಕಾರವೇ ಮೆರುಗು


Team Udayavani, Sep 29, 2021, 3:31 PM IST

ದಸರೆಗೆ ದೀಪಾಲಂಕಾರವೇ ಮೆರುಗು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಸಿದ್ಧತೆ ಗರಿಗೆದರಿದ್ದು, ಈ ಬಾರಿಯ ದಸರಾ ಉತ್ಸವಕ್ಕೆ ದೀಪಾಲಂಕಾರವೇ ಪ್ರಮುಖ ಆಕರ್ಷಣೆಯಾಗಿದ್ದು, ನಗರದ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಗಳ ಜೋಡಣೆಕಾರ್ಯ ಹಾಗೂ ಹೊಸ ವಿನ್ಯಾಸದ ಪ್ರತಿಕೃತಿ ನಿರ್ಮಿಸುವ ಕೆಲಸ ಭರದಿಂದ ಸಾಗಿದೆ.

ಅರಮನೆಗೆ ಗಜಪಡೆ ಪ್ರವೇಶಿಸಿದ ಬಳಿಕ ಅಂಬಾ ವಿಲಾಸ ಅರಮನೆ ಆವರಣದಲ್ಲಿ ಗೋಡೆಗಳಿಗೆ ಬಣ್ಣ ಬಳಿಯುವ, ವಿದ್ಯುತ್‌ ಬಲ್ಬ್ ಬದಲಾಯಿಸುವುದು, ಹೂದೋಟ ಸೇರಿ ವಿವಿಧ ಕೆಲಸಗಳು ಆರಂಭಗೊಂಡಿದ್ದು, ವಾರದಲ್ಲಿ ಮುಕ್ತಾಯವಾಗಲಿವೆ. ಇದರ ಜೊತೆಗೆ ಅರಮನೆ ಸುತ್ತಲಿನ ರಸ್ತೆ, ರಾಜಮಾರ್ಗ, ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಮಾಡುವ ಕಾರ್ಯ ನಡೆಯುತ್ತಿದೆ.

ದೀಪಾಲಂಕಾರವೇ ಪ್ರಮುಖ ಆಕರ್ಷಣೆ: ಈ ಬಾರಿಯ ದಸರಾದಲ್ಲಿ ಆಹಾರ ಮೇಳ, ಫ‌ಲಪುಷ್ಪ ಪ್ರದರ್ಶನ, ಪಂಜಿನ ಕವಾಯತು ಸೇರಿದಂತೆ ಹಲವು ಕಾರ್ಯಕ್ರಮಗಳು ಇಲ್ಲದೇ ಇರುವುದರಿಂದ ದೀಪಾಲಂಕಾರವೇ ಪ್ರಮುಖ ಆಕರ್ಷಣೆಯಾಗಿದೆ. ಈ ಹಿನ್ನೆಲೆ ಅಧಿಕಾರಿಗಳು ಈ ಬಾರಿ ಅಚ್ಚುಕಟ್ಟಾಗಿ ದೀಪಾ ಲಂಕಾರ ವ್ಯವವಸ್ಥೆ ಮಾಡಲು ನಿರ್ಧರಿಸಿದ್ದಾರೆ.

100 ಕಿಲೋ ಮೀಟರ್‌ ದೀಪಾಲಂಕಾರ: ಕಳೆದ ಬಾರಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರಿಂದ ವಿದ್ಯುತ್‌ ದೀಪಾಲಂಕಾರ ಕೇವಲ 60 ಕಿ.ಮೀ ಸೀಮಿತವಾಗಿತ್ತು. ಆದರೆ ಈ ಬಾರಿ ಕೊರೊನಾ ಸೋಂಕು ಇಳಿಮುಖವಾಗಿರುವುದರಿಂದ ನಗರ ವ್ಯಾಪ್ತಿಯ ಸುಮಾರು 100 ಕಿ.ಮೀ ವ್ಯಾಪ್ತಿಯಲ್ಲಿ ದೀಪಾಲಂಕಾರ ಮಾಡಲು ನಿರ್ಧರಿಸಲಾಗಿದ್ದು,ನಗರದ 121 ರಸ್ತೆಗಳು, 50 ವೃತ್ತಗಳಿಗೆದೀಪಾಲಂಕಾರ ಮಾಡುವ ಕಾರ್ಯ ಹಾಗೂ ಹೊಸ ವಿನ್ಯಾಸದ ಪ್ರತಿಕೃತಿ ನಿರ್ಮಿಸುವ ಕೆಲಸ ಭರದಿಂದ ಸಾಗಿದೆ.

ಅಕ್ಟೋಬರ್‌ 7ರಂದು ನಗರದ ಸಯ್ನಾಜಿರಾವ್‌ ರಸ್ತೆಯಲ್ಲಿ ದಸರಾ ದೀಪಾಲಂಕಾರ ಉದ್ಘಾಟನೆಗೊಳ್ಳಲಿದ್ದು, ರಾತ್ರಿ 7 ಗಂಟೆಯಿಂದ 9.30ರವರೆಗೆ ದೀಪಾಲಂಕಾರ ಜಗಮಗಿಸಲಿದೆ. ಬಳಿಕ ಜಂಬೂಸವಾರಿ ದಿನವಾದ ಅ.17ರಂದು ದೀಪಾಲಂಕಾರ ಮುಕ್ತಾಯವಾಗಲಿದೆ.

ಈಗಾಗಲೇ ಬೆಂಗಳೂರು ರಸ್ತೆ, ಅಂಬೇಡ್ಕರ್‌ ವೃತ್ತ, ಸಯ್ನಾಜಿರಾವ್‌ ರಸ್ತೆ, ಹಾರ್ಡಿಂಜ್‌ ವೃತ್ತ, ಕೆ.ಆರ್‌. ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ದೀಪಾಲಂಕಾರ ಮಾಡಲಾಗಿದ್ದು, ಉಳಿದ ರಸ್ತೆ ಮತ್ತು ವೃತ್ತಗಳಲ್ಲಿ ದೀಪಗಳ ಅಲಂಕಾರ ಮಾಡಲು ರಸ್ತೆ ಎರಡು ಬದಿಯಲ್ಲಿ ಮರದ ಕಂಬಗಳನ್ನು ನೆಡಲಾಗುತ್ತಿದೆ. ಒಟ್ಟಾರೆ ದಸರಾ ದೀಪಾಲಂಕಾರ ಕಾರ್ಯದಲ್ಲಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ ಅಧಿಕಾರಿಗಳು ತೊಗಿಸಿಕೊಂಡಿದ್ದು, ಅನಗತ್ಯವಾಗಿ ವಿದ್ಯುತ್‌ ಪೋಲಾಗದಂತೆ ತಡೆಯಲು ರಾಜ ಮಾರ್ಗದಲ್ಲಿ ಅರಮನೆಗೆ ಬಳಸಿರುವ ಬಲ್ಬ್ಗಳನ್ನು ಬಳಸಿ, ಉಳಿದೆಲ್ಲಾ ರಸ್ತೆಗಳಿಗೆ ಎಲ್‌ಇಡಿ ಬಲ್ಬ್ಗಳನ್ನು ಬಳಸಲಾಗುತ್ತಿದೆ. ಇದರಿಂದ 1ಲಕ್ಷದ 25 ಸಾವಿರ ಯೂನಿಟ್‌ ವಿದ್ಯುತ್‌ ಸಾಕಾಗಲಿದೆ ಎಂದು ಸೆಸ್ಕ್ನ ಅಧೀಕ್ಷಕ ಎಂಜಿನಿಯರ್‌ ಪತ್ರಿಕೆಗೆ ತಿಳಿಸಿದ್ದಾರೆ.

ಒಟ್ಟಾರೆ ಅ.7ರಂದು ದಸರಾ ದೀಪಾಲಂಕಾರ ಉದ್ಘಾಟನೆಗೊಳ್ಳಲಿರುವುದರಿಂದ ದೀಪಾಲಂಕಾರಜೋಡಣೆ ಕಾರ್ಯ ಬಿರುಸಿನಿಂದ ಸಾಗಿದ್ದು, ಮಳೆ ಕಡಿಮೆಯಾದರೆ ಮತ್ತಷ್ಟು ವೇಗ ಪಡೆದುಕೊಳ್ಳಲಿದೆ.

24 ವಿಶೇಷ ಪ್ರತಿಕೃತಿ:

ಈ ಬಾರಿಯ ದಸರಾ ದೀಪಾಲಂಕಾರಕ್ಕೆ ಒಲಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ನೀರಜ್‌ ಚೋಪ್ರಅವರ ಪ್ರತಿಕೃತಿ ನಿರ್ಮಿಸಲಾಗುತ್ತಿರುವುದು ವಿಶೇಷ. ಹಾಗೆಯೇ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಅಮೃತೋತ್ಸವದ ಅಂಗವಾಗಿ ನಗರದ ವಿವಿಧ ರಸ್ತೆ ಮತ್ತು ವೃತ್ತಗಳಲ್ಲಿ ಭಾರತದ ಭೂಪಟ, ಸ್ವಾತಂತ್ರ್ಯ ಹೋರಾಟಗಾರರು,ದೇಶದ ನಾಯಕರು, ಮೈಸೂರು ಅರಮನೆ,ವಿಷ್ಣು, ಶ್ರೀಕೃಷ್ಣ ರಥ, ಸುತ್ತೂರು ರಾಜೇಂದ್ರ ಸ್ವಾಮೀಜಿ ಅವರ ಪ್ರತಿಕೃತಿ ವಿಶೇಷವಾಗಿದೆ.ಜೊತೆಗೆ ನಗರದ ಎಲ್‌ಐಸಿ ಕಚೇರಿ ವೃತ್ತದಲ್ಲಿವಿವಿಧ ಪ್ರಾಣಿಗಳ ಕಲಾಕೃತಿಗಳು ಮತ್ತುಚಾಮುಂಡಿ ಬೆಟ್ಟದಲ್ಲಿ ಸ್ವಾಗತ ಕೋರುವ ಪ್ರತಿಕೃತಿ ಮಾಡುವ ಕೆಲಸ ನಡೆಯುತ್ತಿದೆ.

ಅ.7ರಂದು ಸಯ್ನಾಜಿ ರಾವ್‌ ರಸ್ತೆಯಲ್ಲಿನ ಹಸಿರು ಚಪ್ಪರದಲ್ಲಿದೀಪಾ ಲಂಕಾರ ಉದ್ಘಾಟಿಸಲಾಗುತ್ತದೆ.ನಿತ್ಯ ರಾತ್ರಿ 7 ಗಂಟೆಯಿಂದ 9.30ರವರೆಗೆ ದೀಪಾಲಂಕಾರ ಇರಲಿದೆ. ಈ ಬಾರಿ ದೀಪಾಲಂಕಾರವೇ ಪ್ರಮುಖ ಆಕರ್ಷಣೆ ಯಾಗಿರುವುದರಿಂದ ಒತ್ತು ನೀಡಲಾಗಿದೆ.– ನಾಗೇಶ್‌, ಅಧೀಕ್ಷಕ ಎಂಜಿನಿಯರ್‌ ಸೆಸ್ಕ್

– ಸತೀಶ್‌ ದೇಪುರ

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.