ಅಪಘಾತಕ್ಕೆ ಕಾರಣ ಗುರುತಿಸಿ ಸರಿಪಡಿಸಿ: ಡೀಸಿ


Team Udayavani, Jul 4, 2023, 3:03 PM IST

ಅಪಘಾತಕ್ಕೆ ಕಾರಣ ಗುರುತಿಸಿ ಸರಿಪಡಿಸಿ: ಡೀಸಿ

ಮೈಸೂರು: ಅಪಘಾತ ಉಂಟಾಗಲು ಇರುವ ಕಾರಣಗಳನ್ನು ಗುರುತಿಸಿ ಅಗತ್ಯ ಕ್ರಮಗಳನ್ನು ಕೈ ಗೊಂಡು ಅಪಘಾತ ಪ್ರಕರಣಗಳಿಂದ ಆಗುವ ಸಾವು, ನೋವುಗಳನ್ನು ಕಡಿಮೆ ಮಾಡಬೇಕು ಎಂದು ಡೀಸಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಲ್ಮೆಟ್‌ ಧರಿಸದೆ ಇರುವುದು, ಸೀಟ್‌ ಬೆಲ್ಟ್ ಹಾಕದೆ ಇರುವುದು, ಅಜಾಗರೂಕತೆಯಿಂದ ಚಾಲನೆ ಹಾಗೂ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವುದು, ಚಾಲಕರ ನಿರ್ಲಕ್ಷ್ಯ, ರಸ್ತೆಗಳ ದುರಸ್ತಿ ಅಥವಾ ಸರಿಯಾಗಿ ರಸ್ತೆ ಸಂಚಾರಿ ನಿಯಮಗಳನ್ನು ಪಾಲಿಸದೆ ಇರುವುದು ಅಪಘಾತಗಳಿಗೆ ಕಾರಣವಾಗಬಹುದು. ಈ ರೀತಿಯ ನಿಯಮಗಳ ಉಲ್ಲಂಘನೆಗಳನ್ನು ವಾಹನ ಚಾಲಕರು ಮಾಡಬಾರದು ಎಂದರು.

ನಗರದ ದೊಡ್ಡ ಆಲದ ಮರ, ವರಕೂಡು ಗೇಟ್‌, ಮೈಸೂರು ಹುಣಸೂರು ರಸ್ತೆ ಹಿನಕಲ್‌ ಜಂಕ್ಷನ್‌, ಬಂಡಿಪಾಳ್ಯ, ನಂಜನಗೂಡು ಎಪಿಎಂಸಿ ಹಾಗೂ ನಗರದ ಜೆಎಲ್‌ಬಿ ರಸ್ತೆ ಜಂಕ್ಷನ್‌ಗಳಲ್ಲಿ ಕಳೆದ ಫೆಬ್ರವರಿ ತಿಂಗಳಿನಿಟದ ಮೇ ತಿಂಗಳಿನವರೆಗೆ ಜಿಲ್ಲಾ ವ್ಯಾಪ್ತಿ ಯಲ್ಲಿ ಅತಿ ಹೆಚ್ಚು ಅಪಘಾತಗಳು ಸಂಭವಿಸಿದ್ದು, ಇವುಗಳನ್ನು ಬ್ಲ್ಯಾಕ್‌ ಸ್ಪಾಟ್‌ಗಳಾಗಿ ಗುರುತಿಸಲಾಗಿದೆ. ಹೆಚ್ಚು ಅಪಘಾತ ಆಗುತ್ತಿರುವ ವಲಯಗಳನ್ನು ಗುರುತಿಸಿ ಎಚ್ಚರಿಕೆ ಬೋರ್ಡ್‌ ಹಾಕಬೇಕು. ಈ ಬ್ಲಾಕ್‌ ಸ್ಪಾಟ್‌ಗ ಳಲ್ಲಿ ಚಾಲಕರು ಎಚ್ಚರಿಕೆಯಿಂದ ಚಾಲನೆ ಮಾಡಬೇಕು ಎಂದು ತಿಳಿಸಿದರು.

ಸಣ್ಣ ವಾಹನಗಳಿಗೆ ಚಲಿಸಲು ಅವಕಾಶ ನೀಡಿ: ದೊಡ್ಡ ವಾಹನಗಳನ್ನು ಚಾಲನೆ ಮಾಡುವವರು ಸಣ್ಣ ವಾಹನಗಳಿಗೆ ಚಲಿಸಲು ಅವಕಾಶ ಮಾಡಿಕೊಡ ಬೇಕು. ಮೆಟ್ರೋಪೋಲ್‌ ಸಿಗ್ನಲ್‌ ನಲ್ಲಿ ಕೆ.ಎಸ್‌.ಆರ್‌ .ಟಿ.ಸಿ ಬಸ್‌ಗಳನ್ನು ನಿಲುಗಡೆ ಮಾಡುತ್ತಿದ್ದು ಸ್ವಲ್ಪ ಮುಂದೆ ಬಸ್‌ಗಳನ್ನು ನಿಲ್ಲಿಸಬೇಕು. ಈ ಸಂಬಟಧ ಒಬ್ಬ ಸಿಬ್ಬಂದಿಯನ್ನು ನೇಮಿಸಿ ಕ್ರಮ ವಹಿಸುವಂತೆ ಕೆ. ಎಸ್‌.ಆರ್‌.ಟಿ.ಸಿ ವಿಭಾಗೀಯ ನಿಯಂತ್ರಣಾಧಿ ಕಾರಿಗಳಿಗೆ ಸೂಚಿಸಿದರು.

ಕೌನ್ಸಲಿಂಗ್‌ ಹಾಗೂ ಅರಿವು ಕಾರ್ಯಕ್ರಮ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್‌ ಮಾತನಾಡಿ, ಮೈಸೂರು ಜಿÇÉಾ ವ್ಯಾಪ್ತಿಯಲ್ಲಿ ಮೇ ತಿಂಗಳಿನಲ್ಲಿ 39 ಅಪಘಾತಗಳು ಸಂಭವಿಸಿದ್ದು 43 ಜನ ಮರಣ ಹೊಂದಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ ಚಾಲಕರು ರ್ಯಾಶ್‌ ಡ್ರೈವ್‌ ಮಾಡುತ್ತಿದ್ದು, ಕಳೆದ ತಿಂಗಳಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಂದ 10 ಅಪಘಾತಗಳು ಉಂಟಾಗಿದೆ. ಇದ ರಿಂದ 7 ಮಾರಣಾಂತಿಕ ಅಪಘಾತಗಳು ಮತ್ತು 8 ಸಾವು ಸಂಭವಿಸಿವೆ. ಆದ್ದರಿಂದ ಅವರಿಗೆ ಸೂಕ್ತ ತರಬೇತಿ, ಕೌನ್ಸಲಿಂಗ್‌ ಹಾಗೂ ಅರಿವು ಕಾರ್ಯಕ್ರಮಗಳನ್ನು ನೀಡಿ ಎಂದು ಸೂಚಿಸಿದರು.

ಸಭೆಯಲ್ಲಿ ಮೈಸೂರು ನಗರ ಸಂಚಾರ ವಿಭಾಗದ ಡಿಸಿಪಿ ಜಾಹ್ನವಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಜು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Udupi: ಸರಕಾರಿ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4 ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

8

Arrested: ಜಲಮಂಡಳಿಯ ಸೆಂಟ್ರಿಂಗ್‌ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.