ನಿತ್ಯ 2 ಸಾವಿರ ರೆಮ್ಡೆಸಿವಿಯರ್ ಚುಚ್ಚುಮದ್ದಿಗೆ ಬೇಡಿಕೆ: ಸಚಿವ
Team Udayavani, May 11, 2021, 1:32 PM IST
ನಂಜನಗೂಡು: ಮೈಸೂರು ಜಿಲ್ಲೆಯ ಕೋವಿಡ್ ರೋಗಿಗಳಿಗೆ ಪ್ರತಿನಿತ್ಯ ಬೇಕಾಗಬಹುದಾದ ರೆಮ್ಡೆಸಿವಿಯರ್ ಕುರಿತು ಬೇಡಿಕೆ ಇಟ್ಟಿದ್ದೇವೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಸೋಮವಾರ ನಂಜನಗೂಡು ಕೈಗಾರಿಕಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜ್ಯುಬಿಲಿಯಂಟ್ಸ್ ಜೆನರಿಕ್ ಕಾರ್ಖಾನೆಗೆ ಮೈಸೂರಿನ ಸಂಸದ ಪ್ರತಾಪಸಿಂಹ ಅವರೊಡಗೂಡಿ ಆಗಮಿಸಿ ಮಾತನಾಡಿದರು.
ನಮಗೆ ರೆಮ್ಡೆಸಿವಿಯರ್ ಅತ್ಯಂತ ಅವಶ್ಯಕತೆಗಳಲ್ಲೊಂದಾಗಿದೆ. ಅದನ್ನು ಉತ್ಪಾದಿಸುವ ಕಂಪನಿಗಳಲ್ಲೊಂದಾದ ಜ್ಯುಬಿಲಿಯಂಟ್ಸ್ ಜೆನರಿಕ್ ಕಾರ್ಖಾನೆ ನಮ್ಮಲ್ಲೇ ಇದ್ದು ಅವರೊಂದಿಗೆ ಚರ್ಚಿಸಿದರೆ ಕೊರತೆ ನೀಗಬಹುದು ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದರಿಂದ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿದ್ದೇವೆಂದರು.
ಜಿಲ್ಲೆಗೆ ಬೇಕಾಗಬಹುದಾದ 2000 ರೆಮ್ಡೆಸಿವಿಯರ್ ಅನ್ನು ನೇರವಾಗಿ ಜಿಲ್ಲೆಗೇ ನೀಡುವಂತೆ ಬೇಡಿಕೆ ಸಲ್ಲಿಸಿದ್ದೇವೆ. ಆಡಳಿತ ಮಂಡಳಿಯೂ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದೆ ಎಂದರು.
ಬೇಡಿಕೆ ಪತ್ರ ಸಿದ್ಧಪಡಿಸಿ ಕಾರ್ಖಾನೆಯವರಿಗೆ ನೀಡುತ್ತಿದ್ದು ಶೀಘ್ರ ಕೊರತೆಗೆ ಮುಕ್ತಿಸಿಗಬಹುದು ಎಂಬ ಆಶಯ ವ್ಯಕ್ತಪಡಿಸಿದರು.ನಂಜನಗೂಡು ಶಾಸಕ ಹರ್ಷವರ್ಧನ್,ಕಾರ್ಖಾನೆಯ ಎಚ್ಆರ್ ವಿಭಾಗದ ನಿರ್ದೇಶಕ ಸುಬ್ರಹ್ಮಣ್ಯ, ಲಕ್ಷ್ಮೀ ನಾರಾಯಣ ,ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೀವ್, ನಂಜನಗೂಡು ನಗರಸಭಾ ಅಧ್ಯಕ್ಷ ಮಹದೇವಸ್ವಾಮಿ, ಮೈಸೂರು ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ,ನಂಜನಗೂಡು ತಾಲೂಕು ಅಧ್ಯಕ್ಷ ಮಹೇಶ, ನಗರಾಧ್ಯಕ್ಷ ಶ್ರೀನಿವಾಸರೆಡ್ಡಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ವಂತ್, ಡಿವೈಎಸ್ಪಿ ಗೋವಿಂದರಾಜ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
Mysuru Dasara: ಎದೆ ಝಲ್ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.