ಸವಾಲು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಿ


Team Udayavani, Jan 30, 2020, 3:00 AM IST

savalu-edu

ಮೈಸೂರು: 4ನೇ ತಂಡದ ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ತರಬೇತಿ ಪಡೆದ 239 ಮಂದಿ ಪ್ರಶಿಕ್ಷಾಣಾರ್ಥಿಗಳ ತಂಡ ಆಕರ್ಷಕ ನಿರ್ಗಮನ ಪಥ ಸಂಚಲನ ಪ್ರದರ್ಶಿಸಿದರು.

ಜ್ಯೋತಿನಗರದ ಡಿಎಆರ್‌ ಕವಾಯತು ಮೈದಾನದಲ್ಲಿ ಬುಧವಾರ ಪೊಲೀಸ್‌ ತರಬೇತಿ ಶಾಲೆ ವತಿಯಿಂದ 4ನೇ ತಂಡದ ಮಹಿಳಾ ನಾಗರಿಕ ಪೊಲೀಸ್‌ ಕಾನ್‌ಸ್ಟೆಬಲ್‌, ರೈಲ್ವೇಸ್‌ ಮತ್ತು ಕೆಎಸ್‌ಐಎಸ್‌ಎಫ್ ಪ್ರಶಿಕ್ಷಣಾರ್ಥಿಗಳ ಪಥ ಸಂಚಲನದಲ್ಲಿ 194 ಮಂದಿ ಮಹಿಳಾ ನಾಗರಿಕ ಪೊಲೀಸ್‌ ಕಾನ್‌ಸ್ಟೆಬಲ್‌, 27 ಮಂದಿ ರೈಲ್ವೇಸ್‌ ಮಹಿಳಾ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ 18 ಮಂದಿ ಕೆಎಸ್‌ಐಎಸ್‌ಎಫ್ ಕಾನ್‌ಸ್ಟೆಬಲ್‌ ಪ್ರಶಿಕ್ಷಾಣಾರ್ಥಿಗಳು ನಿರ್ಗಮನ ಪಥಸಂಚಲನ ನಡೆಸಿಕೊಟ್ಟರು.

ಅಚ್ಚು ಕಟ್ಟಾಗಿ ಕೆಲಸ ನಿರ್ವಹಿಸಬೇಕು: ಪ್ರಶಿಕ್ಷಾಣಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ತರಬೇತಿ ವಿಭಾಗದ ಪೊಲೀಸ್‌ ಮಹಾ ನಿರ್ದೇಶಕ ಎಸ್‌. ರವಿ ಮಾತನಾಡಿ, ಕಳೆದ ಎಂಟು ತಿಂಗಳಿನಿಂದ ಸೂಕ್ತ ತರಬೇತಿ ಪಡೆದು, ಕೆಲಸಕ್ಕೆ ನಿಯುಕ್ತಿಗೊಂಡ ಮೇಲೆ ಶ್ರೇಷ್ಠ ಕಾರ್ಯ ವೈಖರಿ ಮೂಲಕ ಅಚ್ಚು ಕಟ್ಟಾಗಿ ಕೆಲಸ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಧೈರ್ಯ ಮತ್ತು ಸಾಹಸ ಪ್ರವೃತ್ತಿ ಇರಲಿ: ಪೊಲೀಸ್‌ ಇಲಾಖೆ ತುಂಬಾ ಕಟ್ಟುನಿಟ್ಟಾದ ಇಲಾಖೆಯಾಗಿದ್ದು, ಇಲ್ಲಿ ಕೆಲಸ ಮಾಡಲು ಬರುವವರು ಧೈರ್ಯ ಮತ್ತು ಸಾಹಸ ಪ್ರವೃತ್ತಿ ಮನೋಭಾವ ಹೊಂದಿರುವವರಾಗಿರಬೇಕು. ಜೊತೆಗೆ ತರಬೇತಿಯಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ತುಂಬಲಾಗುತ್ತದೆ. ನೀವುಗಳು ಕೆಲಸಕ್ಕೆ ನಿಯುಕ್ತಿಯಾದ ನಂತರ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಲು, ಜ್ಞಾನ, ಕೌಶಲ್ಯ, ಮೌಲ್ಯ ಹಾಗೂ ಸರಿಯಾದ ಮನೋಭಾವವನ್ನು ತರಬೇತಿಯಲ್ಲಿ ತಿಳಿಸಿಕೊಡಲಾಗಿದೆ. ಈ ನಾಲ್ಕು ಅಂಶಗಳನ್ನು ಗಮನದಲ್ಲಿರಿಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಇತರರಂತೆ ಸಮರ್ಥವಾಗಿ ಕೆಲಸ ನಿರ್ವಹಿಸಿ: ಕರ್ತವ್ಯಕ್ಕೆ ಸೇರ್ಪಡೆಯಾದ ನಂತರ ಮಹಿಳಾ ಪೇದೆಗಳು ಸರಳ ಕೆಲಸಗಳಾದ ಸೆಂಟ್ರಿ, ವೈರ್‌ಲೆಸ್‌ ಹಾಗೂ ಕಂಪ್ಯೂಟರ್‌ ವಿಭಾಗಗಳಲ್ಲಿ ಕೆಲಸ ಮಾಡಲು ಹೆಚ್ಚು ಉತ್ಸುಕರಾಗುತ್ತಾರೆ ಎಂಬ ಅಪವಾದಗಳು ಇವೆ. ನೀವುಗಳು ಈ ಪ್ರವೃತ್ತಿಯನ್ನು ಬಿಟ್ಟು ಇತರರಂತೆ ಸಮರ್ಥವಾಗಿ ಕೆಲಸ ನಿರ್ವಹಿಸಬೇಕು. ರಾತ್ರಿ ಪಾಳಿ ಎಂದು ಹಿಂಜರಿಯದೇ ಇಲಾಖೆಯ ಎಲ್ಲಾ ಕೆಲಸಗಳಲ್ಲೂ ಭಾಗಿಯಾಗಿ ಎಂದು ಕಿವಿಮಾತು ಹೇಳಿದರು.

ಹೊಣೆಗಾರಿಕೆ ನಿಮ್ಮ ಮೇಲಿದೆ: ಕೆಎಸ್‌ಐಎಸ್‌ಎಫ್ ವಿಭಾಗವು ಹೊಸದಾಗಿದ್ದು, ಈ ಕೆಲಸ ಸವಾಲಿನದ್ದಾಗಿದೆ. ಇಲ್ಲಿ ಕೆಲಸ ಮಾಡುವವರು ಮೈಯೆಲ್ಲ ಕಣ್ಣಾಗಿ ಕಾರ್ಯನಿರ್ವಹಿಸಬೇಕು. ಮೆಟ್ರೋ ರೈಲ್ವೇ ಸ್ಟೇಷನ್‌ನಂತಹ ಸ್ಥಳಗಳಲ್ಲಿ ನಿಮ್ಮನ್ನು ನಿಯುಕ್ತಿಗೊಳಿಸಲಾಗುತ್ತದೆ. ಜೊತೆಗೆ ರೈಲ್ವೇ ವಿಭಾಗದ ಪೊಲೀಸರಿಗೂ ಹೆಚ್ಚು ಸವಾಲುಗಳಿವೆ. ಲಕ್ಷಾಂತರ ಜನರು ಪ್ರತಿನಿತ್ಯ ಸಂಚರಿಸುವ ರೈಲು ಹಾಗೂ ನಿಲ್ದಾಣಗಳಲ್ಲಿ ಕೆಲಸ ಮಾಡುವುದು ಸುಲಭವಲ್ಲ. ಪ್ರತಿ ಕೆಲಸಗಳಲ್ಲೂ ಸವಾಲುಗಳು ಇರುತ್ತವೆ. ಆದರೆ ಅದನ್ನು ಸಮರ್ಥವಾಗಿ ನಿಭಾಯಿಸುವ ಹೊಣೆಗಾರಿಕೆ ನಿಮ್ಮ ಮೇಲಿದೆ ಎಂದರು.

ಕೌಶಲ್ಯಗಳನ್ನು ಪ್ರತಿನಿತ್ಯವೂ ಮುಂದುವರೆಸಿ: ಇಲಾಖೆಗೆ ಸೇರಿದ ಮೇಲೆ ಕರ್ತವ್ಯಕ್ಕೆ ಎಷ್ಟು ಒತ್ತು ನೀಡುತ್ತೀರೋ ಹಾಗೆಯೇ ವೈಯಕ್ತಿಕ ಜೀವನದತ್ತಲೂ ಗಮನ ಹರಿಸಬೇಕು. ಸುಂದರವಾಗಿ ಬದುಕು ನಡೆಸಲು ವೈಯಕ್ತಿಕ ಜೀವನವನ್ನು ಸರಿಯಾದ ರೀತಿ ರೂಪಿಸಿಕೊಳ್ಳಿ. ಹಾಗೆಯೇ ತರಬೇತಿಯಲ್ಲಿ ಪಡೆದುಕೊಂಡ ವ್ಯಾಯಾಮ, ಇತರೆ ಕೌಶಲ್ಯಗಳನ್ನು ಪ್ರತಿನಿತ್ಯವೂ ಮುಂದುವರೆಸಿ ಎಂದು ಹೇಳಿದರು. ಪೊಲೀಸ್‌ ತರಬೇತಿ ಶಾಲೆಯ ಪ್ರಾಂಶುಪಾಲರಾದ ಡಾ. ಧರಣಿದೇವಿ ಮಾಲಗತ್ತಿ ಇದ್ದರು.

ಪ್ರಶಸ್ತಿ ವಿಜೇತರ ವಿವರ: 4ನೇ ತಂಡದ ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ತರಬೇತಿಯಲ್ಲಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದವರಿಗೆ ಬಹುಮಾನ ವಿತರಿಸಲಾಯಿತು.

ಅತ್ಯತ್ತಮ ಪ್ರಶಿಕ್ಷಣಾರ್ಥಿ: ಬಳ್ಳಾರಿ ಜಿಲ್ಲೆಯ ರಾಧಾ ಅತ್ಯುತ್ತಮ ಪ್ರಶಿಕ್ಷಣಾರ್ಥಿಯಾಗಿ ಹೊರಹೊಮ್ಮಿದ್ದು ಸರ್ವೋತ್ತಮ ಪ್ರಶಸ್ತಿಯನ್ನು ಪಡೆದುಕೊಂಡರು.

ಒಳಾಂಗಣ ವಿಭಾಗ: ರೈಲ್ವೇಸ್‌ ಪೊಲೀಸ್‌ ಕಾನ್‌ಸ್ಟೆಬಲ್‌ ಪ್ರಬೀತಾ ಜಿ.ಎಲ್‌. ಅವರು ಒಳಾಂಗಣದಲ್ಲಿ ಪ್ರಥಮ ಬಹುಮಾನ ಪಡೆದರೆ, ಬಳ್ಳಾರಿ ಜಿಲ್ಲೆಯ ರಾಧ ದ್ವಿತೀಯ ಹಾಗೂ ರಾಯಚೂರು ಜಿಲ್ಲೆಯ ಶೇಖವ್ವ ತೃತೀಯ ಸ್ಥಾನ ಪಡೆದುಕೊಂಡರು.

ಹೊರಾಂಗಣ ವಿಭಾಗ: ಬಳ್ಳಾರಿ ಜಿಲ್ಲೆಯ ಎಂ. ದುರ್ಗಾ ಹೊರಾಂಗಣ ವಿಭಾಗದಲ್ಲಿ ಪ್ರಥಮ, ವಾಣಿಶ್ರೀ ಕೊಳ್ಳಿ ದ್ವಿತೀಯ, ಬೀದರ್‌ ಜಿಲ್ಲೆಯ ಸೋನಾಲಿ ದ್ವಿತೀಯ, ಲಕ್ಷ್ಮೀ ಪ್ರಕಾಶ್‌ ಗಡಾದ ತೃತೀಯ ಬಹುಮಾನ ಪಡೆದುಕೊಂಡರು.

ಫೈರಿಂಗ್‌ ವಿಭಾಗ: ರಾಯಚೂರು ಜಿಲ್ಲೆಯ ಅಂಬಿಕಾ ಫೈರಿಂಗ್‌ನಲ್ಲಿ ಪ್ರಥಮ, ಶೋಭಾ ಸಂಗಪ್ಪ ಬಳವಾಡ ದ್ವಿತೀಯ ಹಾಗೂ ಎಂ. ದುರ್ಗ ತೃತೀಯ ಬಹುಮಾನ ಪಡೆದರು. ಕೆಎಸ್‌ಐಎಸ್‌ಎಫ್ ವಿಭಾಗದಲ್ಲಿ ಶಿವಲೀಲಾ ಕೊಟ್ಟೂರು ಅತ್ಯುತ್ತಮ ಪ್ರಶಿಕ್ಷಣಾರ್ಥಿ ಪ್ರಶಸ್ತಿ ಪಡೆದುಕೊಂಡರು. ನಿರ್ಗಮನ ಪಥಸಂಚಲನ ನೋಡಲು ಪ್ರಶಿಕ್ಷಣಾರ್ಥಿಗಳ ಪೋಷಕರು ದೂರದ ಊರುಗಳಿಂದ ಆಗಮಿಸಿ ಆಕರ್ಷಕ ಪಥ ಸಂಚಲನವನ್ನು ವೀಕ್ಷಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.