ಬಿಜೆಪಿಗೆ ದಲಿತರ ಬಗ್ಗೆ ಧೃತರಾಷ್ಟ್ರ ಪ್ರೇಮ: ಧ್ರುವನಾರಾಯಣ
Team Udayavani, Jan 11, 2023, 12:22 AM IST
ಮೈಸೂರು: ಬಿಜೆಪಿಯವರು ಚುನಾವಣೆ ಸಂದರ್ಭದಲ್ಲಿ ಮಾತ್ರ ಡಾ| ಬಿ.ಆರ್.ಅಂಬೇಡ್ಕರ್ ಹಾಗೂ ದಲಿತರ ಸ್ಮರಣೆ ಮಾಡುತ್ತಾರೆ. ಅಧಿಕಾರಕ್ಕೆ ಬಂದಾಗ ಅವರನ್ನು ಶೋಷಿಸುವುದು ಅವರ ಸಂಸ್ಕೃತಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಲೇವಡಿ ಮಾಡಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ, ಬಿಜೆಪಿಗೆ ದಲಿತರ ಬಗ್ಗೆ ಧೃತರಾಷ್ಟ್ರ ಪ್ರೇಮವಿದೆ. ಮಹಾಭಾರತದಲ್ಲಿ ಧೃತರಾಷ್ಟ್ರನು ಭೀಮನನ್ನು ನಾಶ ಮಾಡುವ ಉದ್ದೇಶದಿಂದ ಮನದೊಳಗೆ ದ್ವೇಷವನ್ನು ಇಟ್ಟು, ಮೇಲ್ನೋಟಕ್ಕೆ ಪ್ರೀತಿ ತೋರಿಸುತ್ತಾನೆ. ದಲಿತರ ಬಗ್ಗೆ ಬಜೆಪಿಯ ಉದ್ದೇಶವೂ ಇದೇ ಆಗಿದೆ ಎಂದು ದೂರಿದರು.
ದಲಿತರು ಎಚ್ಚರವಹಿಸಲಿ
ದಲಿತರನ್ನು ಅಪ್ಪಿಕೊಳ್ಳುವ ಆಸೆ ತೋರುತ್ತಾ, ಅವರನ್ನು ನಾಶ ಮಾಡಲು ಸಂಚು ರೂಪಿಸುತ್ತಿದೆ. ಚುನಾವಣೆ ಬಂದಾಗ ದಲಿತರನ್ನು ಸ್ಮರಿಸೋದು, ಅಧಿಕಾರಕ್ಕೆ ಬಂದ ಮೇಲೆ ಅವರನ್ನು ಶೋಷಿಸುವುದು ಬಿಜೆಪಿ ಸಂಸ್ಕೃತಿ. ಈ ಬಗ್ಗೆ ದಲಿತರು ಎಚ್ಚರ ವಹಿಸಬೇಕು ಎಂದು ಹೇಳಿದರು.
ಕಾಂಗ್ರೆಸ್ ಅಥವಾ ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ. ದಲಿತರ ಏಳಿಗೆಗಾಗಿ ಅತಿ ಹೆಚ್ಚು ಕಾರ್ಯಕ್ರಮ ನೀಡಿದ ಹಾಗೂ ಅತಿ ಹೆಚ್ಚು ರಾಜಕೀಯ ಸ್ಥಾನಮಾನ ನೀಡಿದ ಪಕ್ಷ ಕಾಂಗ್ರೆಸ್. ಹೀಗಾಗಿ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಹೇಳಿದರು.
ಬಸವರಾಜ ಬೊಮ್ಮಾಯಿ ಅವರುನಾನೊಬ್ಬ ಅಂಬೇಡ್ಕರ್ ವಾದಿ ಎಂದು ಹೇಳಿಕೊಂಡಿದ್ದಾರೆ. ಆದರೆ, ಅಂಬೇಡ್ಕರ್ ಆಶಯಗಳನ್ನು ನಿಮ್ಮ ಆಡಳಿತದಲ್ಲಿ ಈಡೇರಿಸಿದ್ದೀರಾ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕುಟುಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Order: ಮುಡಾ ತನಿಖೆ ಚುರುಕು: ದೂರುದಾರರಿಗೆ ನೋಟಿಸ್
Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ
Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ
Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ
Bantwal: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!
Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು
ಸುರತ್ಕಲ್ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ
Lucknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.