ಉದ್ಯೋಗ ದೊರೆತ ಬಳಿಕ ಊರು ಮರೆಯಬೇಡಿ


Team Udayavani, Sep 15, 2019, 3:00 AM IST

udyoga

ಕೆ.ಆರ್‌.ನಗರ: ಉದ್ಯೋಗ, ಹಣ, ಅಧಿಕಾರ ಬಂದ ತಕ್ಷಣ ಗ್ರಾಮೀಣ ಪ್ರದೇಶಗಳನ್ನು ಮರೆಯಬಾರದು. ಹುಟ್ಟೂರಿನ ಋಣ ತೀರಿಸಬೇಕು. ಶಾಲೆ, ಗ್ರಾಮಗಳ ಅಭಿವೃದ್ಧಿಗೆ ನೆರವಾಗಬೇಕು ಎಂದು ಶಾಸಕ ಸಾ.ರಾ.ಮಹೇಶ್‌ ಸಲಹೆ ನೀಡಿದರು. ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮುನ್ನುಗ್ಗಿ: ಯಾವುದೇ ಕೆಲಸಗಳಲ್ಲಿ ಏಳು ಬೀಳುಗಳು ಸಹಜವಾಗಿದ್ದು, ಎದೆಗುಂದದೆ ಮುನ್ನುಗ್ಗಿದರೆ ಗುರಿ ತಲುಪಲು ಸಾಧ್ಯವಾಗಲಿದೆ. ಎಂತಹ ಸಂದರ್ಭ ಬಂದರೂ ತಾವು ಹುಟ್ಟಿ ಬೆಳೆದ ಊರು, ಜನರನ್ನು ಮರೆಯದೆ ಸೇವೆ ಅವರ ಮಾಡಿ ಋಣವನ್ನು ತೀರಿಸಬೇಕು ಎಂದರು.

ಸಮಾಜದಲ್ಲಿ ಹೆಣ್ಣ-ಗಂಡು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಅವರ ನಡುವೆ ಭೇದಭಾವ ಮಾಡಬಾರದು. ಜಗತ್ತಿನ ಇತಿಹಾಸದಿಂದಲೂ ಹೆಣ್ಣು ಗಂಡಿಗಿಂತ ಶಕ್ತಿವಂತಳು ಎಂಬುದು ಸಾಬೀತಾಗಿದೆ. ಆದ್ದರಿಂದಲೇ ಹೆಣ್ಣನ್ನು ನಾವು ಪೂಜ್ಯ ಮನೋಭಾವನೆಯಿಂದ ಕಾಣುತ್ತಾ ಗೌರವ ನೀಡುತ್ತಿದ್ದೇವೆ. ಮಹಿಳೆಯರಲ್ಲಿ ಹಠ, ಅಹಂಕಾರ, ಗರ್ವ ಇರಬಾರದು ಎಂದು ಸಲಹೆ ನೀಡಿದರು.

ರಾಜಕೀಯಕ್ಕೆ ಬರಬೇಡಿ: ಪ್ರಸ್ತುತ ರಾಜಕೀಯ ಕ್ಷೇತ್ರ ಅವ್ಯವಸ್ಥೆಯಿಂದ ಕೂಡಿದ್ದು, ಹೊಲಸಾಗಿದೆ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೆ ರಾಜಕೀಯ ಪ್ರವೇಶಿಸದೇ ಚೆನ್ನಾಗಿ ಓದಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಬದುಕು ಕಟ್ಟಿಕೊಳ್ಳಬೇಕು. ರಾಜಕಾರಣದಲ್ಲಿ ಅಧಿಕಾರ, ಸ್ಥಾನಮಾನ ನೀಡಿದರೂ ನಂಬಿಕೆ ದ್ರೋಹ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ರಾಜಕಾರಣಿಗಳಿಗೆ ಸಮಾಜದಲ್ಲಿ ಗೌರವವಿಲ್ಲದಂತಾಗಿದೆ. ಹೀಗಾಗಿ ವಿದ್ಯಾವಂತರು ಇತರೆ ಕ್ಷೇತ್ರಗಳಲ್ಲಿ ಸ್ಥಿರವಾಗಿದ್ದು ಅಲ್ಲೇ ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಕಾಂಪೌಂಡ್ ನಿರ್ಮಾಣ: ಮಹಿಳಾ ಪ್ರಥಮ ದರ್ಜೆ ಕಾಲೇಜು ಮಂಜೂರಾತಿಯನ್ನು 10 ವರ್ಷಗಳ ಹಿಂದೆ ನಾನೇ ಮಾಡಿಸಿಕೊಟ್ಟಿದ್ದಲ್ಲದೆ ಸುಸಜ್ಜಿತ ಕಟ್ಟಡ ನಿರ್ಮಾಣ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾಲೇಜಿಗೆ ಕಾಂಪೌಂಡ್ ನಿರ್ಮಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲೆ ಡಾ.ಪಿ.ಕೋಕಿಲಾ, ಖ್ಯಾತ ಜನಪದಗೀತೆ ಗಾಯಕ, ರಂಗಭೂಮಿ ಕಲಾವಿದ ದೇವಾನಂದವರ ಪ್ರಸಾದ್‌, ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ಗೋಪಾಲಯ್ಯ, ಪ್ರಾಧ್ಯಾಪಕರಾದ ಸುನೀಲ್‌, ಎಸ್‌.ಮೋಹನ್‌, ಸಿಡಿಸಿ ಕಾರ್ಯದರ್ಶಿ ಕೆ.ಟಿ.ರಮೇಶ್‌, ಸದಸ್ಯೆ ಮೋಹನಕುಮಾರಿ, ಪುರಸಭಾ ಸದಸ್ಯ ಸಂತೋಷ್‌ಗೌಡ, ನಿವೃತ್ತ ಉಪನ್ಯಾಸಕ ಕೆ.ಆರ್‌.ಲಕ್ಕೇಗೌಡ, ತಹಶೀಲ್ದಾರ್‌ ಎಂ.ಮಂಜುಳಾ, ಪ್ರಾಧ್ಯಾಪಕ ವಿಜಯ್‌ ಇತರರು ಉಪಸ್ಥಿತರಿದ್ದರು.

ಸಾರಾ ಮಹೇಶ್‌ ಜಾತಿವಾದಿ ಅಂತಾರೆ: ತಾಲೂಕಿನಲ್ಲಿ ನಾನು ಎಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಮಾಡಿದರೂ ಸಾ.ರಾ.ಮಹೇಶ್‌ ಜಾತಿವಾದಿ ಎನ್ನುತ್ತಾರೆ. ಕಳೆದ 15 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ ಪುಸ್ತಕ, ಉಚಿತ ತುರ್ತು ವಾಹನ, ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌, ವಿಕಲಚೇತನರಿಗೆ ವಿಮೆ, ಸೀಮಂತ ಕಾರ್ಯಕ್ರಮ ಸೇರಿದಂತೆ ಸೂಕ್ಷ್ಮಾತಿ ಸೂಕ್ಷ್ಮ ಸಮಾಜಗಳ ಮಕ್ಕಳಿಗೂ ಅನುಕೂಲವಾಗಲಿ ಎಂದು ಮಹಿಳಾ ಪ್ರಥಮ ದರ್ಜೆ ಕಾಲೇಜು ಮಂಜೂರು ಮಾಡಿಸಿದ್ದೇನೆ. ಜೊತೆಗೆ ಕೈಗಾರಿಕಾ ತರಬೇತಿ ಕಾಲೇಜು, ಡಿಪ್ಲೊಮಾ ಕಾಲೇಜು. ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳನ್ನು ಆರಂಭಿಸಲಾಗಿದೆ. ಇಷ್ಟೆಲ್ಲಾ ಅಭಿವೃದ್ಧಿ ಕೆಲಸ ಮಾಡಿದರೂ ಸಾ.ರಾ.ಮಹೇಶ್‌ ಜಾತಿವಾದಿ ಎನ್ನುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.