ದೇಶದ ಬೌದ್ಧಿಕ ಮೆದುಳು ಆಗಿರುವ ವಿವಿಗಳನ್ನು ಹತ್ತಿಕ್ಕಬೇಡಿ


Team Udayavani, Jan 12, 2020, 3:00 AM IST

deshada

ಮೈಸೂರು: ವಿಶ್ವವಿದ್ಯಾಲಯಗಳು ದೇಶದ ಮೆದುಳು ಇದ್ದಂತೆ. ವಿವಿಗಳನ್ನು ಹತ್ತಿಕ್ಕಲು ಮುಂದಾದರೆ ದೇಶದ ಬೌದ್ಧಿಕ ಮೆದುಳನ್ನು ತೆಗೆದು ಹಾಕಿದಂತಾಗಲಿದೆ. ಹಾಗಾಗಿ ವಿವಿಗಳನ್ನು ಬಲಹೀನಗೊಳಿಸಬಾರದು ಎಂದು ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ.ಅರವಿಂದ ಮಾಲಗತ್ತಿ ಹೇಳಿದರು.

ಮಾನಸ ಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಬಹುಜನ ವಿದ್ಯಾರ್ಥಿ ಸಂಘ ಏರ್ಪಡಿಸಿದ್ದ “ಬೇಕಿರುವುದು ಇಇಇ’ (ಶಿಕ್ಷಣ, ಉದ್ಯೋಗ, ಆರ್ಥಿಕತೆ) ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ಯಾವ ದೇಶದಲ್ಲಿ ಧರ್ಮ ಮುಂದಾಗುತ್ತದೋ ಆ ದೇಶ ಹಿಂದುಳಿಯುತ್ತದೆ. ಧರ್ಮದ ಪರಿಭಾಷೆಯಿಂದ ಪ್ರಜಾಪ್ರಭುತ್ವ ಹಿನ್ನಡೆ ಅನುಭವಿಸುತ್ತದೆ ಎನ್ನುವುದನ್ನು ಆಡಳಿತಗಾರರು ಅರಿಯಬೇಕಿದೆ ಎಂದರು.

ಸಂವಿಧಾನದ ಪ್ರಸ್ತಾಪವನ್ನು ಪಕ್ಕಕ್ಕೆ ಸರಿಸಿ ಪೌರತ್ವ ಕಾಯಿದೆ ತರಲಾಗಿದೆ. ಮೂರು ದೇಶಗಳಲ್ಲಿನ ನಿರಾಶ್ರಿತರಿಗೆ ಭಾರತದ ಪೌರತ್ವ ನೀಡಿದರೆ ಅವರಿಗೆ ಉದ್ಯೋಗ ಎಲ್ಲಿ ನೀಡುತ್ತೀರಿ? ಇಲ್ಲಿರುವವರಿಗೇ ಉದ್ಯೋಗವಿಲ್ಲ, ಬೇರೆ ದೇಶದವರನ್ನು ಕರೆದುಕೊಂಡು ಬಂದರೆ ಉದ್ಯೋಗ ಹೇಗೆ ಕಲ್ಪಿಸುತ್ತೀರಿ ಎಂದು ಪ್ರಶ್ನಿಸಿದರು.

ರಾಜಕೀಯ ವ್ಯವಸ್ಥೆಯಲ್ಲಿ ಅಧಿಕಾರ ಚಲಾಯಿಸಲು ಮುಂದಾದರೆ, ಜನ ಸಾಮಾನ್ಯರು ಎದ್ದು ನಿಲ್ಲುತ್ತಾರೆ. ಈಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ವಿರುದ್ಧ ಜನ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಜನರ ಧ್ವನಿ ಖಚಿತತೆಯು ನನ್ನ ದೇಶದ ಸಂವಿಧಾನ ಸುಭದ್ರ ಎಂಬುದನ್ನು ಸಾರುತ್ತಿದೆ. ಈಗ ಅಂಬೇಡ್ಕರ್‌ ಎಲ್ಲರ ನಾಲಗೆ ಮೇಲೆ ಹರಿದಾಡುತ್ತಿದ್ದಾರೆ.

ಸನಾತನ ವಿಚಾರ ಮುಂದಿಟ್ಟುಕೊಂಡು ಜನತೆಯನ್ನು ಭಾವನಾತ್ಮಕವಾಗಿ ಬಡಿದೆಬ್ಬಿಸಿ ಮುಂದೆ ಹೋಗುವವರಿಗೆ ಜನರು ತಡೆಗೋಡೆ ಯಾಗಿದ್ದಾರೆ ಎಂದು ಹೇಳಿದರು. 13 ರಾಜ್ಯ ಸರ್ಕಾರಗಳು ಸಿಎಎ ಜಾರಿ ಮಾಡಲ್ಲ ಎಂದಿರುವುದರಿಂದ ಕೇಂದ್ರ ಸರ್ಕಾರ ಮರು ಚಿಂತನೆಗೆ ಮನಸ್ಸು ಮಾಡಬೇಕು ಎಂದರು. ಶಾಸಕ ಎನ್‌.ಮಹೇಶ್‌ ಮಾತನಾಡಿ, ಜನರು ಅನುಭವಿಸುತ್ತಿರುವ ಸಾಮಾನ್ಯ ಸಮಸ್ಯೆಗಳನ್ನು ಮುಂದಿಟ್ಟು ಬಹುಜನ ವಿದ್ಯಾರ್ಥಿ ಸಂಘ ಸಂಘಟನೆ ರೂಪಿಸಬೇಕು.

ಪಟ್ಟಭದ್ರ ಹಿತಾಸಕ್ತಿಗಳು ಆ್ಯಕ್ಷನ್‌ ಮಾಡಿ ರಿಯಾಕ್ಷನ್‌ ನಿರೀಕ್ಷಿಸುತ್ತಾರೆ. ವಿದ್ಯಾರ್ಥಿಗಳು ಈ ಬಗ್ಗೆ ಎಚ್ಚರಿಕೆಯಿಂದ ಇದ್ದು ರಿಯಾಕ್ಷನ್‌ ಬದಲು ಪ್ರೋ ಆ್ಯಕ್ಷನ್‌ ಮಾಡಬೇಕು ಎಂದು ಹೇಳಿದರು. ಅಂಕಣಕಾರ ಡಾ.ಕೆ.ಸಿ.ರಘು, ಪತ್ರಕರ್ತ ಟಿ.ಗುರುರಾಜ್‌, ಐಎಎಸ್‌ ಅಕಾಡೆಮಿಯ ತರಬೇತುದಾರ ಡಾ. ಶಿವಕುಮಾರ್‌ , ಬಿವಿಎಸ್‌ ಜಿಲ್ಲಾ ಸಂಯೋಜಕ ಎಚ್‌.ಎಸ್‌. ಗಣೇಶ್‌ಮೂರ್ತಿ ಇತರರಿದ್ದರು.

ಇವರ್ಯಾಕೆ ಇರಬೇಕು?: ಮೈಸೂರು ವಿಶ್ವವಿದ್ಯಾಲಯದಲ್ಲಿ ನಡೆದ ಅಚಾತುರ್ಯ ಘಟನೆ ಮುಗಿದ ಅಧ್ಯಾಯ. ಈ ಘಟನೆ ಮುಂದಿಟ್ಟುಕೊಂಡು ಕುಲಪತಿ ಮತ್ತು ಕುಲಸಚಿವರು ವಿದ್ಯಾರ್ಥಿಗಳ ಬಾಯಿ ಮುಚ್ಚಿಸಲು ಮುಂದಾಗಬಾರದು. ಸಿಂಡಿಕೇಟ್‌ ಸದಸ್ಯರು ಹೇಳಿದಂತೆ ಕೇಳುವುದಾದರೆ ಇವರ್ಯಾಕೆ ಇರಬೇಕು? ಎಂದು ಶಾಸಕ ಎನ್‌. ಮಹೇಶ್‌ ಪ್ರಶ್ನಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.